ಪ್ರಜಾವಾಣಿ ವರದಿ ಫಲಶ್ರುತಿ:ಹೋಟೆಲ್ ನಿರ್ಮಾಣ ಹಿನ್ನೆಲೆ ಬನಶಂಕರಿಯಲ್ಲಿರುವ ಹಂಪಿ ವಿಶ್ವವಿದ್ಯಾಲಯದ ಶಿಲ್ಪ ಮತ್ತು ಚಿತ್ರಕಲಾ ಕೇಂದ್ರವನ್ನು ಬೇರೆಡೆಗೆ ಸ್ಥಳಾಂತರಿಸುವಂತೆ ಪ್ರವಾಸೋದ್ಯಮ ಇಲಾಖೆ ಅಧಿಕಾರಿಗಳು ಕೇಂದ್ರದ ಮುಖ್ಯಸ್ಥರಿಗೆ ಪತ್ರ ಬರೆದಿದ್ದರು. ಆ ಬಗ್ಗೆ ‘ಪ್ರಜಾವಾಣಿ’ ಡಿಸೆಂಬರ್ 3ರಂದು ವಿಶೇಷ ವರದಿ ಪ್ರಕಟಿಸಿತ್ತು. ಕೇಂದ್ರವನ್ನು ಅಲ್ಲಿಯೇ ಉಳಿಸಿಕೊಳ್ಳುವಂತೆ ಬಾದಾಮಿ ಪರಿಸರದ ವಿವಿಧ ಸಂಘಟನೆಗಳು ಗುರುವಾರ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದ್ದವು.