<p><strong>ಬಾಗಲಕೋಟೆ: </strong>ಬಾದಾಮಿ ಸಮೀಪದ ಬನಶಂಕರಿಯಲ್ಲಿರುವ ಹಂಪಿ ವಿಶ್ವವಿದ್ಯಾಲಯದ ಶಿಲ್ಪ ಮತ್ತು ಚಿತ್ರಕಲಾ ಕೇಂದ್ರವನ್ನು ಬೇರೆಡೆಗೆ ಎತ್ತಂಗಡಿ ಮಾಡದಂತೆ ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಸರ್ಕಾರಕ್ಕೆ ಒತ್ತಾಯಿಸಿದರು.</p>.<p>ಬಾದಾಮಿಯಲ್ಲಿ ಶುಕ್ರವಾರ ಪ್ರವಾಸೋದ್ಯಮ ಸಚಿವ ಸಿ.ಟಿ.ರವಿ ಅವರಿಗೆ ಕರೆ ಮಾಡಿ ಮಾತನಾಡಿದ ಸಿದ್ದರಾಮಯ್ಯ, ಆ ಜಾಗದಲ್ಲಿ ಉದ್ದೇಶಿತ ತ್ರಿ–ಸ್ಟಾರ್ ಹೋಟೆಲ್ ನಿರ್ಮಿಸುವ ಪ್ರಸ್ತಾವನೆ ಕೈ ಬಿಡುವಂತೆ ಆಗ್ರಹಿಸಿದರು.</p>.<p>ಬಾದಾಮಿ ಕ್ಷೇತ್ರದಲ್ಲಿ ಪ್ರವಾಸೋದ್ಯಮ ಇಲಾಖೆಗೆ ಸೇರಿದ ಜಾಗ ಬೇರೆ ಬೇರೆ ಕಡೆ ಇದೆ. ಅಲ್ಲಿ ಹೋಟೆಲ್ ನಿರ್ಮಿಸುವುದು ಸೂಕ್ತ ಎಂದರು.</p>.<p>ಇದೇ ವೇಳೆ ಉನ್ನತ ಶಿಕ್ಷಣ ಸಚಿವ ಡಾ.ಅಶ್ವತ್ಥನಾರಾಯಣ ಅವರಿಗೆ ಕರೆ ಮಾಡಿದ ಸಿದ್ದರಾಮಯ್ಯ, ’ಶಿಲ್ಪ ಮತ್ತು ಚಿತ್ರಕಲಾ ಕೇಂದ್ರದ ಸಿಬ್ಬಂದಿಗೆ ವೇತನ ವಿತರಣೆಯಲ್ಲಿ ಆಗಿರುವ ವಿಳಂಬವನ್ನು ಸರಿಪಡಿಸುವಂತೆ‘ ಹೇಳಿದರು.</p>.<p><strong>ಪ್ರಜಾವಾಣಿ ವರದಿ ಫಲಶ್ರುತಿ:</strong>ಹೋಟೆಲ್ ನಿರ್ಮಾಣ ಹಿನ್ನೆಲೆ ಬನಶಂಕರಿಯಲ್ಲಿರುವ ಹಂಪಿ ವಿಶ್ವವಿದ್ಯಾಲಯದ ಶಿಲ್ಪ ಮತ್ತು ಚಿತ್ರಕಲಾ ಕೇಂದ್ರವನ್ನು ಬೇರೆಡೆಗೆ ಸ್ಥಳಾಂತರಿಸುವಂತೆ ಪ್ರವಾಸೋದ್ಯಮ ಇಲಾಖೆ ಅಧಿಕಾರಿಗಳು ಕೇಂದ್ರದ ಮುಖ್ಯಸ್ಥರಿಗೆ ಪತ್ರ ಬರೆದಿದ್ದರು. ಆ ಬಗ್ಗೆ ‘ಪ್ರಜಾವಾಣಿ’ ಡಿಸೆಂಬರ್ 3ರಂದು ವಿಶೇಷ ವರದಿ ಪ್ರಕಟಿಸಿತ್ತು. ಕೇಂದ್ರವನ್ನು ಅಲ್ಲಿಯೇ ಉಳಿಸಿಕೊಳ್ಳುವಂತೆ ಬಾದಾಮಿ ಪರಿಸರದ ವಿವಿಧ ಸಂಘಟನೆಗಳು ಗುರುವಾರ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದ್ದವು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬಾಗಲಕೋಟೆ: </strong>ಬಾದಾಮಿ ಸಮೀಪದ ಬನಶಂಕರಿಯಲ್ಲಿರುವ ಹಂಪಿ ವಿಶ್ವವಿದ್ಯಾಲಯದ ಶಿಲ್ಪ ಮತ್ತು ಚಿತ್ರಕಲಾ ಕೇಂದ್ರವನ್ನು ಬೇರೆಡೆಗೆ ಎತ್ತಂಗಡಿ ಮಾಡದಂತೆ ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಸರ್ಕಾರಕ್ಕೆ ಒತ್ತಾಯಿಸಿದರು.</p>.<p>ಬಾದಾಮಿಯಲ್ಲಿ ಶುಕ್ರವಾರ ಪ್ರವಾಸೋದ್ಯಮ ಸಚಿವ ಸಿ.ಟಿ.ರವಿ ಅವರಿಗೆ ಕರೆ ಮಾಡಿ ಮಾತನಾಡಿದ ಸಿದ್ದರಾಮಯ್ಯ, ಆ ಜಾಗದಲ್ಲಿ ಉದ್ದೇಶಿತ ತ್ರಿ–ಸ್ಟಾರ್ ಹೋಟೆಲ್ ನಿರ್ಮಿಸುವ ಪ್ರಸ್ತಾವನೆ ಕೈ ಬಿಡುವಂತೆ ಆಗ್ರಹಿಸಿದರು.</p>.<p>ಬಾದಾಮಿ ಕ್ಷೇತ್ರದಲ್ಲಿ ಪ್ರವಾಸೋದ್ಯಮ ಇಲಾಖೆಗೆ ಸೇರಿದ ಜಾಗ ಬೇರೆ ಬೇರೆ ಕಡೆ ಇದೆ. ಅಲ್ಲಿ ಹೋಟೆಲ್ ನಿರ್ಮಿಸುವುದು ಸೂಕ್ತ ಎಂದರು.</p>.<p>ಇದೇ ವೇಳೆ ಉನ್ನತ ಶಿಕ್ಷಣ ಸಚಿವ ಡಾ.ಅಶ್ವತ್ಥನಾರಾಯಣ ಅವರಿಗೆ ಕರೆ ಮಾಡಿದ ಸಿದ್ದರಾಮಯ್ಯ, ’ಶಿಲ್ಪ ಮತ್ತು ಚಿತ್ರಕಲಾ ಕೇಂದ್ರದ ಸಿಬ್ಬಂದಿಗೆ ವೇತನ ವಿತರಣೆಯಲ್ಲಿ ಆಗಿರುವ ವಿಳಂಬವನ್ನು ಸರಿಪಡಿಸುವಂತೆ‘ ಹೇಳಿದರು.</p>.<p><strong>ಪ್ರಜಾವಾಣಿ ವರದಿ ಫಲಶ್ರುತಿ:</strong>ಹೋಟೆಲ್ ನಿರ್ಮಾಣ ಹಿನ್ನೆಲೆ ಬನಶಂಕರಿಯಲ್ಲಿರುವ ಹಂಪಿ ವಿಶ್ವವಿದ್ಯಾಲಯದ ಶಿಲ್ಪ ಮತ್ತು ಚಿತ್ರಕಲಾ ಕೇಂದ್ರವನ್ನು ಬೇರೆಡೆಗೆ ಸ್ಥಳಾಂತರಿಸುವಂತೆ ಪ್ರವಾಸೋದ್ಯಮ ಇಲಾಖೆ ಅಧಿಕಾರಿಗಳು ಕೇಂದ್ರದ ಮುಖ್ಯಸ್ಥರಿಗೆ ಪತ್ರ ಬರೆದಿದ್ದರು. ಆ ಬಗ್ಗೆ ‘ಪ್ರಜಾವಾಣಿ’ ಡಿಸೆಂಬರ್ 3ರಂದು ವಿಶೇಷ ವರದಿ ಪ್ರಕಟಿಸಿತ್ತು. ಕೇಂದ್ರವನ್ನು ಅಲ್ಲಿಯೇ ಉಳಿಸಿಕೊಳ್ಳುವಂತೆ ಬಾದಾಮಿ ಪರಿಸರದ ವಿವಿಧ ಸಂಘಟನೆಗಳು ಗುರುವಾರ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದ್ದವು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>