<p><strong>ಬಾಗಲಕೋಟೆ:</strong> ‘ಹರಿಹರದ ವೀರಶೈವ ಲಿಂಗಾಯತ ಪಂಚಮಸಾಲಿ ಗುರುಪೀಠದ ಆವರಣದಲ್ಲಿ ಜ.15ರಂದು ಹರ ಜಾತ್ರೆ ನಡೆಯಲಿದೆ’ ಎಂದು ಜಾತ್ರಾ ಮಹೋತ್ಸವ ಸಮಿತಿ ಅಧ್ಯಕ್ಷ ಬಸವರಾಜ ವೀರಾಪುರ ಹೇಳಿದರು.</p>.<p>ನಗರದಲ್ಲಿ ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ‘ವಚನಾನಂದ ಸ್ವಾಮೀಜಿಯವರು ಪೀಠಕ್ಕೆ ಬಂದು ಎಂಟು ವರ್ಷಗಳಾದ ಹಿನ್ನೆಲೆಯಲ್ಲಿ ಅಷ್ಟಮ ವಾರ್ಷಿಕ ಪೀಠಾರೋಹಣ, ಮಹಾಂತ ಸ್ವಾಮೀಜಿಯವರ 15ನೇ ಪುಣ್ಯಸ್ಮರಣೆ ಆಚರಿಸಲಾಗುವುದು’ ಎಂದರು.</p>.<p>‘ಗುರುಭವನ, ದಾಸೋಹ ಭವನ, ಹರ ಮಂದಿರ, ಧ್ಯಾನ ಮಂದಿರ ನಿರ್ಮಿಸಲಾಗಿದೆ. ಮುಂದಿನ ದಿನಗಳಲ್ಲಿ ಅತಿಥಿ ಗೃಹವನ್ನೂ ನಿರ್ಮಿಸಲಾಗುವುದು’ ಎಂದು ತಿಳಿಸಿದರು.</p>.<p>ವೀರಶೈವ ಲಿಂಗಾಯತ ಪಂಚಮಸಾಲಿ ಪೀಠದ ವಚನಾನಂದ ಸ್ವಾಮೀಜಿ ಮಾತನಾಡಿ, ಕಿತ್ತೂರು ಚನ್ನಮ್ಮ ಬ್ರಿಟಿಷರ ವಿರುದ್ಧ ಸಾಧಿಸಿದ ವಿಜಯಕ್ಕೆ ದ್ವಿಶತಮಾನೋತ್ಸವ ಆಗಿದೆ. ಆ ಹಿನ್ನೆಲೆಯಲ್ಲಿ ಪ್ರತಿ ವರ್ಷ ಚನ್ನಮ್ಮನ ಹೆಸರಿನಲ್ಲಿ ಪ್ರಶಸ್ತಿ ನೀಡಲಾಗುವುದು. ಈ ವರ್ಷ ಮಹಿಳೆಗೆ ನೀಡಲಾಗುತ್ತಿದೆ. ಸಮಿತಿ ರಚಿಸಲಾಗಿದ್ದು, ಜ.10 ರಂದು ಪ್ರಶಸ್ತಿ ಪ್ರಕಟಿಸಲಾಗುವುದು ಎಂದರು. </p>.<p>‘ಕೂಡಲಸಂಗಮದ ಪಂಚಮಸಾಲಿ ಪೀಠದ ಬಗ್ಗೆ ಏನೂ ಹೇಳುವುದಿಲ್ಲ. ಸಮುದಾಯಕ್ಕೆ ಮೀಸಲಾತಿ ಪಡೆಯುವ ವಿಷಯದಲ್ಲಿ ಇಬ್ಬರದ್ದೂ ಒಂದೇ ಗುರಿಯಾಗಿದೆ’ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.</p>.<p>‘ಕೇಂದ್ರದಿಂದ ಒಬಿಸಿ ಮೀಸಲಾತಿ ಪಡೆಯಲು ಅಗತ್ಯ ದಾಖಲೆಗಳನ್ನು ಸಲ್ಲಿಸಲಾಗಿದೆ. ರಾಜ್ಯವು ಕೇಂದ್ರಕ್ಕೆ ಶಿಫಾರಸು ಮಾಡಬೇಕಿದೆ. ಈ ನಿಟ್ಟಿನಲ್ಲಿ ಪ್ರಯತ್ನಗಳು ನಡೆದಿವೆ. ವೀರಶೈವ ಲಿಂಗಾಯತದ ಎಲ್ಲ ಒಳಪಂಗಡಗಳಿಗೆ ಕೇಂದ್ರದ ಒಬಿಸಿ ಮೀಸಲಾತಿ ದೊರೆಯಲಿದೆ’ ಎಂದು ಆಶಾಭಾವ ವ್ಯಕ್ತಪಡಿಸಿದರು.</p>.<p>‘ರಾಜ್ಯದಲ್ಲಿ ನೀಡಿದ್ದ 2ಡಿ ಮೀಸಲಾತಿಯನ್ನು ಒಪ್ಪಿರಲಿಲ್ಲ. ಬೇರೆಯವರದ್ದು ರದ್ದು ಮಾಡಿ ನಮ್ಮ ಸಮುದಾಯಕ್ಕೆ ನೀಡಿದ್ದರಿಂದ ಅವರು ನ್ಯಾಯಾಲಯದ ಮೊರೆ ಹೋಗಿದ್ದಾರೆ. ರಾಜ್ಯದಲ್ಲಿಯೂ ಮೀಸಲಾತಿ ಪಡೆಯಲಾಗುವುದು. ಸರ್ಕಾರ ಧನಾತ್ಮಕವಾಗಿದೆ. ಸ್ವಲ್ಪ ತಡವಾಗಬಹುದು, ಆದರೆ, ಮೀಸಲಾತಿ ದೊರೆಯಲಿದೆ’ ಎಂದರು.</p>.<p>ರವಿಕುಮಾರ ಪಟ್ಟಣದ, ಲಕ್ಷ್ಮಣ ನಂದಿಹಾಳ, ಶ್ರೀಕಾಂತ ಸಂದಿಮನಿ, ವಿರುಪಾಕ್ಷಪ್ಪ, ಮಲ್ಲಿಕಾರ್ಜುನ, ಶಂಕರ ಅರಿಷಣಗೋಡಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬಾಗಲಕೋಟೆ:</strong> ‘ಹರಿಹರದ ವೀರಶೈವ ಲಿಂಗಾಯತ ಪಂಚಮಸಾಲಿ ಗುರುಪೀಠದ ಆವರಣದಲ್ಲಿ ಜ.15ರಂದು ಹರ ಜಾತ್ರೆ ನಡೆಯಲಿದೆ’ ಎಂದು ಜಾತ್ರಾ ಮಹೋತ್ಸವ ಸಮಿತಿ ಅಧ್ಯಕ್ಷ ಬಸವರಾಜ ವೀರಾಪುರ ಹೇಳಿದರು.</p>.<p>ನಗರದಲ್ಲಿ ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ‘ವಚನಾನಂದ ಸ್ವಾಮೀಜಿಯವರು ಪೀಠಕ್ಕೆ ಬಂದು ಎಂಟು ವರ್ಷಗಳಾದ ಹಿನ್ನೆಲೆಯಲ್ಲಿ ಅಷ್ಟಮ ವಾರ್ಷಿಕ ಪೀಠಾರೋಹಣ, ಮಹಾಂತ ಸ್ವಾಮೀಜಿಯವರ 15ನೇ ಪುಣ್ಯಸ್ಮರಣೆ ಆಚರಿಸಲಾಗುವುದು’ ಎಂದರು.</p>.<p>‘ಗುರುಭವನ, ದಾಸೋಹ ಭವನ, ಹರ ಮಂದಿರ, ಧ್ಯಾನ ಮಂದಿರ ನಿರ್ಮಿಸಲಾಗಿದೆ. ಮುಂದಿನ ದಿನಗಳಲ್ಲಿ ಅತಿಥಿ ಗೃಹವನ್ನೂ ನಿರ್ಮಿಸಲಾಗುವುದು’ ಎಂದು ತಿಳಿಸಿದರು.</p>.<p>ವೀರಶೈವ ಲಿಂಗಾಯತ ಪಂಚಮಸಾಲಿ ಪೀಠದ ವಚನಾನಂದ ಸ್ವಾಮೀಜಿ ಮಾತನಾಡಿ, ಕಿತ್ತೂರು ಚನ್ನಮ್ಮ ಬ್ರಿಟಿಷರ ವಿರುದ್ಧ ಸಾಧಿಸಿದ ವಿಜಯಕ್ಕೆ ದ್ವಿಶತಮಾನೋತ್ಸವ ಆಗಿದೆ. ಆ ಹಿನ್ನೆಲೆಯಲ್ಲಿ ಪ್ರತಿ ವರ್ಷ ಚನ್ನಮ್ಮನ ಹೆಸರಿನಲ್ಲಿ ಪ್ರಶಸ್ತಿ ನೀಡಲಾಗುವುದು. ಈ ವರ್ಷ ಮಹಿಳೆಗೆ ನೀಡಲಾಗುತ್ತಿದೆ. ಸಮಿತಿ ರಚಿಸಲಾಗಿದ್ದು, ಜ.10 ರಂದು ಪ್ರಶಸ್ತಿ ಪ್ರಕಟಿಸಲಾಗುವುದು ಎಂದರು. </p>.<p>‘ಕೂಡಲಸಂಗಮದ ಪಂಚಮಸಾಲಿ ಪೀಠದ ಬಗ್ಗೆ ಏನೂ ಹೇಳುವುದಿಲ್ಲ. ಸಮುದಾಯಕ್ಕೆ ಮೀಸಲಾತಿ ಪಡೆಯುವ ವಿಷಯದಲ್ಲಿ ಇಬ್ಬರದ್ದೂ ಒಂದೇ ಗುರಿಯಾಗಿದೆ’ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.</p>.<p>‘ಕೇಂದ್ರದಿಂದ ಒಬಿಸಿ ಮೀಸಲಾತಿ ಪಡೆಯಲು ಅಗತ್ಯ ದಾಖಲೆಗಳನ್ನು ಸಲ್ಲಿಸಲಾಗಿದೆ. ರಾಜ್ಯವು ಕೇಂದ್ರಕ್ಕೆ ಶಿಫಾರಸು ಮಾಡಬೇಕಿದೆ. ಈ ನಿಟ್ಟಿನಲ್ಲಿ ಪ್ರಯತ್ನಗಳು ನಡೆದಿವೆ. ವೀರಶೈವ ಲಿಂಗಾಯತದ ಎಲ್ಲ ಒಳಪಂಗಡಗಳಿಗೆ ಕೇಂದ್ರದ ಒಬಿಸಿ ಮೀಸಲಾತಿ ದೊರೆಯಲಿದೆ’ ಎಂದು ಆಶಾಭಾವ ವ್ಯಕ್ತಪಡಿಸಿದರು.</p>.<p>‘ರಾಜ್ಯದಲ್ಲಿ ನೀಡಿದ್ದ 2ಡಿ ಮೀಸಲಾತಿಯನ್ನು ಒಪ್ಪಿರಲಿಲ್ಲ. ಬೇರೆಯವರದ್ದು ರದ್ದು ಮಾಡಿ ನಮ್ಮ ಸಮುದಾಯಕ್ಕೆ ನೀಡಿದ್ದರಿಂದ ಅವರು ನ್ಯಾಯಾಲಯದ ಮೊರೆ ಹೋಗಿದ್ದಾರೆ. ರಾಜ್ಯದಲ್ಲಿಯೂ ಮೀಸಲಾತಿ ಪಡೆಯಲಾಗುವುದು. ಸರ್ಕಾರ ಧನಾತ್ಮಕವಾಗಿದೆ. ಸ್ವಲ್ಪ ತಡವಾಗಬಹುದು, ಆದರೆ, ಮೀಸಲಾತಿ ದೊರೆಯಲಿದೆ’ ಎಂದರು.</p>.<p>ರವಿಕುಮಾರ ಪಟ್ಟಣದ, ಲಕ್ಷ್ಮಣ ನಂದಿಹಾಳ, ಶ್ರೀಕಾಂತ ಸಂದಿಮನಿ, ವಿರುಪಾಕ್ಷಪ್ಪ, ಮಲ್ಲಿಕಾರ್ಜುನ, ಶಂಕರ ಅರಿಷಣಗೋಡಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>