ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಮಾಜದ ಮುಖಂಡ ರಾಜಶೇಖರ ಸೊರಗಾಂವಿ, ‘ಫೆ.1 ರಿಂದಲೇ ಕಾರ್ಯಕ್ರಮಗಳು ಆರಂಭ ವಾಗಲಿದ್ದು, ನೂತನ ಪೀಠಾಧ್ಯಕ್ಷರ ಪುರ ಪ್ರವೇಶ ನಡೆಯ ಲಿದೆ. ಇಂಚಲದ ಶಿವಾನಂದ ಭಾರತಿ ಸ್ವಾಮೀಜಿ, ರಬಕವಿ
ಯ ಗುರುಸಿದ್ಧೇಶ್ವರ ಸ್ವಾಮೀಜಿ, ಬನಹಟ್ಟಿಯ ಶರಣ ಬಸವ ಸ್ವಾಮೀಜಿ, ಆಳಂದದ ಚನ್ನಬಸವ ಪಟ್ಟದೇವರು ಸಾನ್ನಿಧ್ಯ ವಹಿಸಲಿದ್ದಾರೆ. ಪ್ರತಿದಿನ ಸಂಜೆ ಧಾರ್ಮಿಕ ಕಾರ್ಯಕ್ರಮಗಳು, ವಚನ– ಚಿಂತನಾ ಗೋಷ್ಠಿ, ಸಾಧಕರಿಗೆ ಸನ್ಮಾನ ನಡೆಯಲಿವೆ’ ಎಂದರು.