<p><strong>ಹಾವೇರಿ/ಮುಧೋಳ:</strong> ಟನ್ ಕಬ್ಬಿಗೆ ಸರ್ಕಾರ ನಿಗದಿಪಡಿಸಿರುವ ದರ ನೀಡಲು ಒತ್ತಾಯಿಸಿ ಹಾವೇರಿಯಲ್ಲಿ ನಡೆದಿರುವ ಅಹೋರಾತ್ರಿ ಧರಣಿ ಮತ್ತು ಪ್ರತಿ ಟನ್ ಕಬ್ಬಿಗೆ ₹ 3,500 ದರ ನಿಗದಿಪಡಿಸುವಂತೆ ಆಗ್ರಹಿಸಿ ಬಾಗಲಕೋಟೆ ಜಿಲ್ಲೆಯ ಮುಧೋಳದಲ್ಲಿ ನಡೆದಿರುವ ಪ್ರತಿಭಟನೆ ಮಂಗಳವಾರವೂ ಮುಂದುವರೆಯಿತು.</p>.<p>‘ಹಾವೇರಿ ಜಿಲ್ಲೆಯಲ್ಲಿ ಮೂರು ಸಕ್ಕರೆ ಕಾರ್ಖಾನೆಗಳಿವೆ. ಟನ್ ಕಬ್ಬಿಗೆ ₹ 2,711 ರಿಂದ ₹2,740ರವರೆಗೆ ದರ ನಿಗದಿಪಡಿಸುವುದಾಗಿ ಕಾರ್ಖಾನೆಯವರು ಹೇಳುತ್ತಾರೆ. ಆದರೆ, ನಾವು ಒಪ್ಪುವುದಿಲ್ಲ. ಟನ್ ಕಬ್ಬಿಗೆ ₹ 3,300 ದರ ನಿಗದಿಪಡಿಸುವವರಗೆ ಧರಣಿ ಹಿಂಪಡೆಯಲ್ಲ’ ಎಂದು ರೈತರು ಪಟ್ಟು ಹಿಡಿದರು. ಜಿಲ್ಲಾಧಿಕಾರಿ ವಿಜಯ ಮಹಾಂತೇಶ ಅವರು ಬಂದು ಮನವೊಲಿಸಲು ಪ್ರಯತ್ನಿಸಿದರೂ ಪ್ರತಿಭಟನಕಾರರು ಒಪ್ಪಲಿಲ್ಲ.</p>.<p>‘ಬೆಳಗಾವಿ ರೈತರಿಗೆ ನೀಡಿರುವ ಬೆಲೆಯನ್ನು ಹಾವೇರಿ ಜಿಲ್ಲೆಯ ರೈತರಿಗೆ ನೀಡುವವರೆಗೂ ಧರಣಿ ನಡೆಸುತ್ತೇವೆ’ ಎಂದು ರಾಜ್ಯ ಕಬ್ಬು ಬೆಳೆಗಾರರ ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ಭುವನೇಶ್ವರ ಶಿಡ್ಲಾಪೂರ ತಿಳಿಸಿದರು.</p>.<p>ಮುಧೋಳದಲ್ಲಿ ಹಸಿರು ಸೇನೆ ರಾಜ್ಯ ಘಟಕದ ಅಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ್, ‘ಸರ್ಕಾರವು ಕಬ್ಬಿಗೆ ವೈಜ್ಞಾನಿಕ ದರ ನಿಗದಿ ಮಾಡುವವರೆಗೆ ಹೋರಾಟ ಮುಂದುವರೆಯಲಿದೆ. 2013ರಲ್ಲಿ ರಾಜ್ಯ ಸರ್ಕಾರ ಪ್ರತಿ ಟನ್ಗೆ ₹350 ಪ್ರೋತ್ಸಾಹ ಧನ ಘೋಷಿಸಿತ್ತು. ಈಗಲೂ ಅಂತಹದೇ ನಿರ್ಧಾರ ಕೈಗೊಳ್ಳಬೇಕು’ ಎಂದರು.</p>.<p>‘ರೈತರು ಕಾರ್ಖಾನೆಗಳಿಗೆ ಕಬ್ಬು ಪೂರೈಸಿದರೆ ನುರಿಸುತ್ತೇವೆ. ಇಲ್ಲದಿದ್ದರೆ, ಬಂದ್ ಇರಲಿವೆ. ರೈತರು ಕಬ್ಬು ನೀಡಲು ಒಪ್ಪಿದರೆ, ಜಿಲ್ಲಾಡಳಿತ ಬಂದೋಬಸ್ತ್ ಮಾಡಬೇಕು’ ಎಂದು ಜಮಖಂಡಿ ಶುಗರ್ಸ್ ಮಾಲೀಕ ಆನಂದ ನ್ಯಾಮಗೌಡ ಹೇಳಿದರು.</p>.<p>ಕಾರ್ಖಾನೆಗೆ ಕಬ್ಬು ಸಾಗಿಸುತ್ತಿದ್ದ ಲಾರಿಯೊಂದನ್ನು ಮುಧೋಳ ಬಳಿಯ ಮಹಾಲಿಂಗಪುರ ಬೈಪಾಸ್ ಬಳಿ ಕೆಲ ಕಿಡಿಗೇಡಿಗಳು ರಸ್ತೆಯಿಂದ ಕೆಳಕ್ಕೆ ಉರುಳಿಸಿದರು. ಚಕ್ರದ ಗಾಳಿ ತೆಗೆದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹಾವೇರಿ/ಮುಧೋಳ:</strong> ಟನ್ ಕಬ್ಬಿಗೆ ಸರ್ಕಾರ ನಿಗದಿಪಡಿಸಿರುವ ದರ ನೀಡಲು ಒತ್ತಾಯಿಸಿ ಹಾವೇರಿಯಲ್ಲಿ ನಡೆದಿರುವ ಅಹೋರಾತ್ರಿ ಧರಣಿ ಮತ್ತು ಪ್ರತಿ ಟನ್ ಕಬ್ಬಿಗೆ ₹ 3,500 ದರ ನಿಗದಿಪಡಿಸುವಂತೆ ಆಗ್ರಹಿಸಿ ಬಾಗಲಕೋಟೆ ಜಿಲ್ಲೆಯ ಮುಧೋಳದಲ್ಲಿ ನಡೆದಿರುವ ಪ್ರತಿಭಟನೆ ಮಂಗಳವಾರವೂ ಮುಂದುವರೆಯಿತು.</p>.<p>‘ಹಾವೇರಿ ಜಿಲ್ಲೆಯಲ್ಲಿ ಮೂರು ಸಕ್ಕರೆ ಕಾರ್ಖಾನೆಗಳಿವೆ. ಟನ್ ಕಬ್ಬಿಗೆ ₹ 2,711 ರಿಂದ ₹2,740ರವರೆಗೆ ದರ ನಿಗದಿಪಡಿಸುವುದಾಗಿ ಕಾರ್ಖಾನೆಯವರು ಹೇಳುತ್ತಾರೆ. ಆದರೆ, ನಾವು ಒಪ್ಪುವುದಿಲ್ಲ. ಟನ್ ಕಬ್ಬಿಗೆ ₹ 3,300 ದರ ನಿಗದಿಪಡಿಸುವವರಗೆ ಧರಣಿ ಹಿಂಪಡೆಯಲ್ಲ’ ಎಂದು ರೈತರು ಪಟ್ಟು ಹಿಡಿದರು. ಜಿಲ್ಲಾಧಿಕಾರಿ ವಿಜಯ ಮಹಾಂತೇಶ ಅವರು ಬಂದು ಮನವೊಲಿಸಲು ಪ್ರಯತ್ನಿಸಿದರೂ ಪ್ರತಿಭಟನಕಾರರು ಒಪ್ಪಲಿಲ್ಲ.</p>.<p>‘ಬೆಳಗಾವಿ ರೈತರಿಗೆ ನೀಡಿರುವ ಬೆಲೆಯನ್ನು ಹಾವೇರಿ ಜಿಲ್ಲೆಯ ರೈತರಿಗೆ ನೀಡುವವರೆಗೂ ಧರಣಿ ನಡೆಸುತ್ತೇವೆ’ ಎಂದು ರಾಜ್ಯ ಕಬ್ಬು ಬೆಳೆಗಾರರ ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ಭುವನೇಶ್ವರ ಶಿಡ್ಲಾಪೂರ ತಿಳಿಸಿದರು.</p>.<p>ಮುಧೋಳದಲ್ಲಿ ಹಸಿರು ಸೇನೆ ರಾಜ್ಯ ಘಟಕದ ಅಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ್, ‘ಸರ್ಕಾರವು ಕಬ್ಬಿಗೆ ವೈಜ್ಞಾನಿಕ ದರ ನಿಗದಿ ಮಾಡುವವರೆಗೆ ಹೋರಾಟ ಮುಂದುವರೆಯಲಿದೆ. 2013ರಲ್ಲಿ ರಾಜ್ಯ ಸರ್ಕಾರ ಪ್ರತಿ ಟನ್ಗೆ ₹350 ಪ್ರೋತ್ಸಾಹ ಧನ ಘೋಷಿಸಿತ್ತು. ಈಗಲೂ ಅಂತಹದೇ ನಿರ್ಧಾರ ಕೈಗೊಳ್ಳಬೇಕು’ ಎಂದರು.</p>.<p>‘ರೈತರು ಕಾರ್ಖಾನೆಗಳಿಗೆ ಕಬ್ಬು ಪೂರೈಸಿದರೆ ನುರಿಸುತ್ತೇವೆ. ಇಲ್ಲದಿದ್ದರೆ, ಬಂದ್ ಇರಲಿವೆ. ರೈತರು ಕಬ್ಬು ನೀಡಲು ಒಪ್ಪಿದರೆ, ಜಿಲ್ಲಾಡಳಿತ ಬಂದೋಬಸ್ತ್ ಮಾಡಬೇಕು’ ಎಂದು ಜಮಖಂಡಿ ಶುಗರ್ಸ್ ಮಾಲೀಕ ಆನಂದ ನ್ಯಾಮಗೌಡ ಹೇಳಿದರು.</p>.<p>ಕಾರ್ಖಾನೆಗೆ ಕಬ್ಬು ಸಾಗಿಸುತ್ತಿದ್ದ ಲಾರಿಯೊಂದನ್ನು ಮುಧೋಳ ಬಳಿಯ ಮಹಾಲಿಂಗಪುರ ಬೈಪಾಸ್ ಬಳಿ ಕೆಲ ಕಿಡಿಗೇಡಿಗಳು ರಸ್ತೆಯಿಂದ ಕೆಳಕ್ಕೆ ಉರುಳಿಸಿದರು. ಚಕ್ರದ ಗಾಳಿ ತೆಗೆದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>