ಬಾಗಲಕೋಟೆ: ‘ಮಹಿಳೆಯರಿಗೆ ಅನ್ಯಾಯ ನಡೆದಿದೆ. ಚುನಾವಣಾ ಪ್ರಚಾರ ಸಂದರ್ಭದಲ್ಲಿ ಕುಮಾರಸ್ವಾಮಿ, ಪ್ರಜ್ವಲ್ ನನ್ನ ಮಗ ಎಂದಿದ್ದರು. ಈಗ ಅವರ ಕುಟುಂಬವೇ ಬೇರೆ ಎನ್ನುತ್ತಿದ್ದಾರೆ. ಪ್ರಜ್ವಲ್ ವಿಡಿಯೊ ವಿಚಾರ ಬಿಜೆಪಿಯವರಿಗೆ ಮೊದಲೇ ಗೊತ್ತಿತ್ತು. ಆದರೂ, ಜೆಡಿಎಸ್ ಜೊತೆ ಹೊಂದಾಣಿಕೆ ಮಾಡಿಕೊಂಡಿದ್ದಾರೆ’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಆರೋಪಿಸಿದರು.