<p>ಮಹಾಲಿಂಗಪುರ: ಬಾಗಲಕೋಟೆಯ ಆರ್ಎನ್ಸಿ ಆಸ್ಪತ್ರೆ ಹಾಗೂ ಪಟ್ಟಣದ ಜಂಗಮ ಕ್ಷೇಮಾಭಿವೃದ್ಧಿ ಸಂಘದ ಆಶ್ರಯದಲ್ಲಿ ಜುಲೈ 14ರಂದು ಬೆಳಿಗ್ಗೆ 11ರಿಂದ ಮಧ್ಯಾಹ್ನ 4ರವರೆಗೆ ಪ್ರಗತಿ ಪ್ರಾಥಮಿಕ ಹಾಗೂ ಪ್ರೌಢಶಾಲೆಯಲ್ಲಿ ಉಚಿತ ಆರೋಗ್ಯ ತಪಾಸಣೆ ಶಿಬಿರ ಹಮ್ಮಿಕೊಳ್ಳಲಾಗಿದೆ.</p>.<p>ಸಂಘದ ಅಧ್ಯಕ್ಷ ಗುರುಪಾದಯ್ಯ ಚಟ್ಟಿಮಠ ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ‘ಬಾಗಲಕೋಟೆಯ ನರರೋಗ ತಜ್ಞ ಡಾ.ರಾಕೇಶ ಎ.ವಿ., ಎಲುಬುಕೀಲು ತಜ್ಞ ಡಾ.ಸಚಿನ್ ಕಟ್ಟಿ ಹಾಗೂ ಕಿಡ್ನಿ ತಜ್ಞ ಡಾ.ಗಂಗಾಧರ ಚಿರಾಗ ಶಿಬಿರದಲ್ಲಿ ಭಾಗವಹಿಸುವರು’ ಎಂದರು.</p>.<p>ಶಿಬಿರಾರ್ಥಿಗಳಲ್ಲಿ ಅಗತ್ಯವಿದ್ದವರಿಗೆ ರಿಯಾಯಿತಿ ದರದಲ್ಲಿ ಚಿಕಿತ್ಸೆ ಹಾಗೂ ಶಸ್ತ್ರಚಿಕಿತ್ಸೆ ಮಾಡಲಾಗುವುದು. ಲಭ್ಯವಿರುವ ಔಷಧಗಳನ್ನು ರಿಯಾಯತಿ ದರದಲ್ಲಿ ನೀಡಲಾಗುವುದು. ಉಚಿತವಾಗಿ ರಕ್ತದ ಸಕ್ಕರೆ ಪ್ರಮಾಣ ಮತ್ತು ಬಿಪಿ ತಪಾಸಣೆ ಮಾಡಲಾಗುವುದು. ಪಟ್ಟಣ ಹಾಗೂ ಸುತ್ತಲಿನ ಗ್ರಾಮಸ್ಥರು ಶಿಬಿರದ ಪ್ರಯೋಜನ ಪಡೆದುಕೊಳ್ಳಬೇಕು. ಮಾಹಿತಿಗೆ ಮೊ:8618022827, 9845533416 ಸಂಪರ್ಕಿಸಬಹುದು ಎಂದರು.</p>.<p>ಬಸವರಾಜ ಅಯ್ಯನಗೌಡರ, ಬಸಯ್ಯ ಚಟ್ಟಿಮಠ, ಮಾನಿಂಗಯ್ಯ ಮನ್ನಯ್ಯನವರಮಠ, ಸಾಗರ ಮಠದ, ಮಹಾಂತೇಶ ಮನ್ನಯ್ಯನವರಮಠ, ಚನ್ನಯ್ಯ ಮಸಗುಪ್ಪಿಮಠ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಮಹಾಲಿಂಗಪುರ: ಬಾಗಲಕೋಟೆಯ ಆರ್ಎನ್ಸಿ ಆಸ್ಪತ್ರೆ ಹಾಗೂ ಪಟ್ಟಣದ ಜಂಗಮ ಕ್ಷೇಮಾಭಿವೃದ್ಧಿ ಸಂಘದ ಆಶ್ರಯದಲ್ಲಿ ಜುಲೈ 14ರಂದು ಬೆಳಿಗ್ಗೆ 11ರಿಂದ ಮಧ್ಯಾಹ್ನ 4ರವರೆಗೆ ಪ್ರಗತಿ ಪ್ರಾಥಮಿಕ ಹಾಗೂ ಪ್ರೌಢಶಾಲೆಯಲ್ಲಿ ಉಚಿತ ಆರೋಗ್ಯ ತಪಾಸಣೆ ಶಿಬಿರ ಹಮ್ಮಿಕೊಳ್ಳಲಾಗಿದೆ.</p>.<p>ಸಂಘದ ಅಧ್ಯಕ್ಷ ಗುರುಪಾದಯ್ಯ ಚಟ್ಟಿಮಠ ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ‘ಬಾಗಲಕೋಟೆಯ ನರರೋಗ ತಜ್ಞ ಡಾ.ರಾಕೇಶ ಎ.ವಿ., ಎಲುಬುಕೀಲು ತಜ್ಞ ಡಾ.ಸಚಿನ್ ಕಟ್ಟಿ ಹಾಗೂ ಕಿಡ್ನಿ ತಜ್ಞ ಡಾ.ಗಂಗಾಧರ ಚಿರಾಗ ಶಿಬಿರದಲ್ಲಿ ಭಾಗವಹಿಸುವರು’ ಎಂದರು.</p>.<p>ಶಿಬಿರಾರ್ಥಿಗಳಲ್ಲಿ ಅಗತ್ಯವಿದ್ದವರಿಗೆ ರಿಯಾಯಿತಿ ದರದಲ್ಲಿ ಚಿಕಿತ್ಸೆ ಹಾಗೂ ಶಸ್ತ್ರಚಿಕಿತ್ಸೆ ಮಾಡಲಾಗುವುದು. ಲಭ್ಯವಿರುವ ಔಷಧಗಳನ್ನು ರಿಯಾಯತಿ ದರದಲ್ಲಿ ನೀಡಲಾಗುವುದು. ಉಚಿತವಾಗಿ ರಕ್ತದ ಸಕ್ಕರೆ ಪ್ರಮಾಣ ಮತ್ತು ಬಿಪಿ ತಪಾಸಣೆ ಮಾಡಲಾಗುವುದು. ಪಟ್ಟಣ ಹಾಗೂ ಸುತ್ತಲಿನ ಗ್ರಾಮಸ್ಥರು ಶಿಬಿರದ ಪ್ರಯೋಜನ ಪಡೆದುಕೊಳ್ಳಬೇಕು. ಮಾಹಿತಿಗೆ ಮೊ:8618022827, 9845533416 ಸಂಪರ್ಕಿಸಬಹುದು ಎಂದರು.</p>.<p>ಬಸವರಾಜ ಅಯ್ಯನಗೌಡರ, ಬಸಯ್ಯ ಚಟ್ಟಿಮಠ, ಮಾನಿಂಗಯ್ಯ ಮನ್ನಯ್ಯನವರಮಠ, ಸಾಗರ ಮಠದ, ಮಹಾಂತೇಶ ಮನ್ನಯ್ಯನವರಮಠ, ಚನ್ನಯ್ಯ ಮಸಗುಪ್ಪಿಮಠ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>