<p>ಮಹಾಲಿಂಗಪುರ: ‘ಆರೋಗ್ಯಕ್ಕೆ ಮೊದಲ ಆದ್ಯತೆ ಕೊಡದೇ ಇರುವುದಕ್ಕೆ ರೋಗಿಗಳ ಸಂಖ್ಯೆ ಹೆಚ್ಚಿದೆ. ಆರೋಗ್ಯವೇ ದೇಶದ ಸಂಪತ್ತು. ದೇಶದ ಆರೋಗ್ಯ ಕಾಪಾಡುವ ಕಡೆಗೆ ಗಮನ ಕೊಡಬೇಕು’ ಎಂದು ಮನಗುಂಡಿ ಮಹಾಮನೆಯ ಬಸವಾನಂದ ಸ್ವಾಮೀಜಿ ಹೇಳಿದರು.</p>.<p>ಪಟ್ಟಣದ ಸಿದ್ಧಾರೂಢ ಬ್ರಹ್ಮವಿದ್ಯಾಶ್ರಮದಲ್ಲಿ ಸಿ.ಎಂ.ಹುರಕಡ್ಲಿ ಫೌಂಡೇಷನ್ ಸಹಯೋಗದಲ್ಲಿ ಮಂಗಳವಾರ ಹಮ್ಮಿಕೊಂಡಿದ್ದ ‘ಆರೋಗ್ಯ ಮತ್ತು ಆಧ್ಯಾತ್ಮಿಕ ಅರಿವು’ ಕಾರ್ಯಕ್ರಮದ ಆರನೇ ದಿನದ ಕಾರ್ಯಕ್ರಮದಲ್ಲಿ ಅವರು ಆಶೀರ್ವಚನ ನೀಡಿದರು.</p>.<p>ಸಿದ್ಧಾರೂಢ ಬ್ರಹ್ಮವಿದ್ಯಾಶ್ರಮದ ಸಹಜಾನಂದ ಸ್ವಾಮೀಜಿ ಆಶೀರ್ವಚನ ನೀಡಿ, ‘ಮುಕ್ತಿಯನ್ನು ಪಡೆಯುವ ಸಾಮರ್ಥ್ಯ ಮಾನವನಿಗೆ ಮಾತ್ರ ಇದೆ. ದೇವತೆಗಳಿಗೆ, ಪಶುಪಕ್ಷಿಗಳಿಗೂ ಮುಕ್ತಿ ಇಲ್ಲ. ಇಂತಹ ಪುಣ್ಯ ಶರೀರವನ್ನು ಕೆಡಿಸದೇ ಮಾನವ ಜನ್ಮವನ್ನು ಸಾರ್ಥಕ ಪಡಿಸಿಕೊಳ್ಳಬೇಕು’ ಎಂದರು.</p>.<p>ಕಲಾವಿದ ಶಿವಾನಂದ ಬಿದರಿ ಗಾಯನ ಪ್ರಸ್ತುತಪಡಿಸಿದರು. ಸಿದ್ಧಾನಂದ ಭಾರತಿ ಸ್ವಾಮೀಜಿ ಆಶೀರ್ವಚನ ನೀಡಿದರು. ಫೌಂಡೇಷನ್ ಸಂಸ್ಥಾಪಕ ಚನಬಸು ಹುರಕಡ್ಲಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಮಹಾಲಿಂಗಪುರ: ‘ಆರೋಗ್ಯಕ್ಕೆ ಮೊದಲ ಆದ್ಯತೆ ಕೊಡದೇ ಇರುವುದಕ್ಕೆ ರೋಗಿಗಳ ಸಂಖ್ಯೆ ಹೆಚ್ಚಿದೆ. ಆರೋಗ್ಯವೇ ದೇಶದ ಸಂಪತ್ತು. ದೇಶದ ಆರೋಗ್ಯ ಕಾಪಾಡುವ ಕಡೆಗೆ ಗಮನ ಕೊಡಬೇಕು’ ಎಂದು ಮನಗುಂಡಿ ಮಹಾಮನೆಯ ಬಸವಾನಂದ ಸ್ವಾಮೀಜಿ ಹೇಳಿದರು.</p>.<p>ಪಟ್ಟಣದ ಸಿದ್ಧಾರೂಢ ಬ್ರಹ್ಮವಿದ್ಯಾಶ್ರಮದಲ್ಲಿ ಸಿ.ಎಂ.ಹುರಕಡ್ಲಿ ಫೌಂಡೇಷನ್ ಸಹಯೋಗದಲ್ಲಿ ಮಂಗಳವಾರ ಹಮ್ಮಿಕೊಂಡಿದ್ದ ‘ಆರೋಗ್ಯ ಮತ್ತು ಆಧ್ಯಾತ್ಮಿಕ ಅರಿವು’ ಕಾರ್ಯಕ್ರಮದ ಆರನೇ ದಿನದ ಕಾರ್ಯಕ್ರಮದಲ್ಲಿ ಅವರು ಆಶೀರ್ವಚನ ನೀಡಿದರು.</p>.<p>ಸಿದ್ಧಾರೂಢ ಬ್ರಹ್ಮವಿದ್ಯಾಶ್ರಮದ ಸಹಜಾನಂದ ಸ್ವಾಮೀಜಿ ಆಶೀರ್ವಚನ ನೀಡಿ, ‘ಮುಕ್ತಿಯನ್ನು ಪಡೆಯುವ ಸಾಮರ್ಥ್ಯ ಮಾನವನಿಗೆ ಮಾತ್ರ ಇದೆ. ದೇವತೆಗಳಿಗೆ, ಪಶುಪಕ್ಷಿಗಳಿಗೂ ಮುಕ್ತಿ ಇಲ್ಲ. ಇಂತಹ ಪುಣ್ಯ ಶರೀರವನ್ನು ಕೆಡಿಸದೇ ಮಾನವ ಜನ್ಮವನ್ನು ಸಾರ್ಥಕ ಪಡಿಸಿಕೊಳ್ಳಬೇಕು’ ಎಂದರು.</p>.<p>ಕಲಾವಿದ ಶಿವಾನಂದ ಬಿದರಿ ಗಾಯನ ಪ್ರಸ್ತುತಪಡಿಸಿದರು. ಸಿದ್ಧಾನಂದ ಭಾರತಿ ಸ್ವಾಮೀಜಿ ಆಶೀರ್ವಚನ ನೀಡಿದರು. ಫೌಂಡೇಷನ್ ಸಂಸ್ಥಾಪಕ ಚನಬಸು ಹುರಕಡ್ಲಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>