<p><strong>ಬಾಗಲಕೋಟೆ:</strong> ಇಂದಿನ ಮಕ್ಕಳು ಭವಿಷ್ಯದ ನಾಗರಿಕರು ಎನ್ನುವ ಹೇಳಿಕೆಯನ್ನು ಕಾರ್ಯರೂಪಕ್ಕೆ ತರಲು ಮಕ್ಕಳ ಆರೋಗ್ಯಕ್ಕೆ ಆದ್ಯತೆ ನೀಡಬೇಕಾಗಿದೆ. ಭವಿಷ್ಯದ ಬಲಿಷ್ಠ ಭಾರತಕ್ಕಾಗಿ ಆರೋಗ್ಯವಂತ ಮಕ್ಕಳ ಅಗತ್ಯವಿದೆ ಎಂದು ಬಿ.ವಿ.ವಿ ಸಂಘದ ವೈದ್ಯಕೀಯ ಕಾಲೇಜುಗಳ ಆಡಳಿತ ಮಂಡಳಿ ಕಾರ್ಯಾಧ್ಯಕ್ಷ ಅಶೋಕ ಸಜ್ಜನ ಅಭಿಪ್ರಾಯಪಟ್ಟರು. </p>.<p>ಎಸ್.ನಿಜಲಿಂಗಪ್ಪ ಮೆಡಿಕಲ್ ಕಾಲೇಜಿನ ಚಿಕ್ಕಮಕ್ಕಳ ವಿಭಾಗದಲ್ಲಿ ಶುಕ್ರವಾರ ಆಯೋಜಿಸಿದ್ದ ಮಕ್ಕಳ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಉತ್ತಮ ಶಿಕ್ಷಣದ ಜೊತೆಗೆ ಮಕ್ಕಳಿಗೆ ಅತ್ಯುತ್ತಮ ಆರೋಗ್ಯವನ್ನು ಕೂಡ ಒದಗಿಸಬೇಕಾಗಿದೆ ಎಂದರು.</p>.<p>ಚಿಕ್ಕಮಕ್ಕಳ ತಜ್ಞವೈದ್ಯರು ಸೇವಾ ಮನೋಭಾವದಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಮಕ್ಕಳ ಆರೋಗ್ಯ ಕಾಪಾಡುವ ನಿಟ್ಟಿನಲ್ಲಿ ಉತ್ತಮ ವೈದ್ಯಕೀಯ ಚಿಕಿತ್ಸಾ ಸೌಲಭ್ಯಗಳನ್ನು ಒದಗಿಸಲಾಗಿದೆ. ಥಲಸ್ಸೇಮಿಯಾ ಕಾಯಿಲೆಯಿಂದ ಬಳಲುತ್ತಿರುವ ಮಕ್ಕಳಿಗೆ ಉಚಿತ ಚಿಕಿತ್ಸೆ ನೀಡಲು ಥಲಸ್ಸೇಮಿಯಾ ಮತ್ತು ಹಿಮೋಫಿಲಿಯಾ ಸೊಸೈಟಿ ಸ್ಥಾಪಿಸಲಾಗಿದೆ ಎಂದರು.</p>.<p>ವೈದ್ಯಕೀಯ ಅಧೀಕ್ಷಕ ಡಾ.ಶ್ರೀರಾಮ ಕೋರಾ, ಚಿಕ್ಕಮಕ್ಕಳ ವಿಭಾಗದ ಮುಖ್ಯಸ್ಥ ಡಾ.ಅಶೋಕ ಬಡಕಲಿ, ಚಿಕ್ಕಮಕ್ಕಳ ತಜ್ಞವೈದ್ಯರಾದ ಡಾ.ರಮೇಶ ಪೋಳ, ಡಾ.ತಳವಾರ, ಡಾ.ವಿನಯಕುಮಾರ, ಡಾ.ರಮೇಶ ನೀಲನ್ನವರ, ಡಾ.ಪ್ರವೀಣ, ಡಾ.ಮನೋಜ, ಡಾ.ಅನೀತಾ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬಾಗಲಕೋಟೆ:</strong> ಇಂದಿನ ಮಕ್ಕಳು ಭವಿಷ್ಯದ ನಾಗರಿಕರು ಎನ್ನುವ ಹೇಳಿಕೆಯನ್ನು ಕಾರ್ಯರೂಪಕ್ಕೆ ತರಲು ಮಕ್ಕಳ ಆರೋಗ್ಯಕ್ಕೆ ಆದ್ಯತೆ ನೀಡಬೇಕಾಗಿದೆ. ಭವಿಷ್ಯದ ಬಲಿಷ್ಠ ಭಾರತಕ್ಕಾಗಿ ಆರೋಗ್ಯವಂತ ಮಕ್ಕಳ ಅಗತ್ಯವಿದೆ ಎಂದು ಬಿ.ವಿ.ವಿ ಸಂಘದ ವೈದ್ಯಕೀಯ ಕಾಲೇಜುಗಳ ಆಡಳಿತ ಮಂಡಳಿ ಕಾರ್ಯಾಧ್ಯಕ್ಷ ಅಶೋಕ ಸಜ್ಜನ ಅಭಿಪ್ರಾಯಪಟ್ಟರು. </p>.<p>ಎಸ್.ನಿಜಲಿಂಗಪ್ಪ ಮೆಡಿಕಲ್ ಕಾಲೇಜಿನ ಚಿಕ್ಕಮಕ್ಕಳ ವಿಭಾಗದಲ್ಲಿ ಶುಕ್ರವಾರ ಆಯೋಜಿಸಿದ್ದ ಮಕ್ಕಳ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಉತ್ತಮ ಶಿಕ್ಷಣದ ಜೊತೆಗೆ ಮಕ್ಕಳಿಗೆ ಅತ್ಯುತ್ತಮ ಆರೋಗ್ಯವನ್ನು ಕೂಡ ಒದಗಿಸಬೇಕಾಗಿದೆ ಎಂದರು.</p>.<p>ಚಿಕ್ಕಮಕ್ಕಳ ತಜ್ಞವೈದ್ಯರು ಸೇವಾ ಮನೋಭಾವದಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಮಕ್ಕಳ ಆರೋಗ್ಯ ಕಾಪಾಡುವ ನಿಟ್ಟಿನಲ್ಲಿ ಉತ್ತಮ ವೈದ್ಯಕೀಯ ಚಿಕಿತ್ಸಾ ಸೌಲಭ್ಯಗಳನ್ನು ಒದಗಿಸಲಾಗಿದೆ. ಥಲಸ್ಸೇಮಿಯಾ ಕಾಯಿಲೆಯಿಂದ ಬಳಲುತ್ತಿರುವ ಮಕ್ಕಳಿಗೆ ಉಚಿತ ಚಿಕಿತ್ಸೆ ನೀಡಲು ಥಲಸ್ಸೇಮಿಯಾ ಮತ್ತು ಹಿಮೋಫಿಲಿಯಾ ಸೊಸೈಟಿ ಸ್ಥಾಪಿಸಲಾಗಿದೆ ಎಂದರು.</p>.<p>ವೈದ್ಯಕೀಯ ಅಧೀಕ್ಷಕ ಡಾ.ಶ್ರೀರಾಮ ಕೋರಾ, ಚಿಕ್ಕಮಕ್ಕಳ ವಿಭಾಗದ ಮುಖ್ಯಸ್ಥ ಡಾ.ಅಶೋಕ ಬಡಕಲಿ, ಚಿಕ್ಕಮಕ್ಕಳ ತಜ್ಞವೈದ್ಯರಾದ ಡಾ.ರಮೇಶ ಪೋಳ, ಡಾ.ತಳವಾರ, ಡಾ.ವಿನಯಕುಮಾರ, ಡಾ.ರಮೇಶ ನೀಲನ್ನವರ, ಡಾ.ಪ್ರವೀಣ, ಡಾ.ಮನೋಜ, ಡಾ.ಅನೀತಾ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>