<p><strong>ಬಾಗಲಕೋಟೆ</strong>: ಮಳೆಯಿಂದಾಗಿ ಜಿಲ್ಲೆಯ 49 ಸಾವಿರ ಹೆಕ್ಟೇರ್ ಪ್ರದೇಶದಲ್ಲಿ ಹಾನಿಯಾಗಿರುವ ಅಂದಾಜು ಇದ್ದು, ₹464 ಕೋಟಿ ನಷ್ಟವಾಗಿದೆ ಎಂದು ಅಂದಾಜಿಸಲಾಗಿದೆ ಎಂದು ಸಚಿವ ಆರ್.ಬಿ. ತಿಮ್ಮಾಪುರ ಹೇಳಿದರು.</p>.<p>ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಹೆಸರು, ಸೂರ್ಯಕಾಂತಿ, ತೊಗರಿ, ಈರುಳ್ಳಿ, ಮೆಣಸಿನಕಾಯಿ ಬೆಳೆಗಳು ಹಾಳಾಗಿವೆ. ಇನ್ನು ಸಮೀಕ್ಷೆ ನಡೆದಿದೆ. ಅಂತಿಮ ವರದಿ ಬರಬೇಕಿದೆ. ನೈಸರ್ಗಿಕ ವಿಕೋಪದಡಿ ಪರಿಹಾರ ನೀಡಲು ₹85 ಕೋಟಿ ಅನುದಾನದ ಅವಶ್ಯಕತೆ ಇದೆ ಎಂದರು.</p>.<p>ಮರ ಬಿದ್ದು, ಸಿಡಿಲು ಬಡಿದು, ನದಿಗೆ ಕಾಲು ಜಾರಿ ಬಿದ್ದು ಮೂವರು ಜೀವ ಕಳೆದುಕೊಂಡಿದ್ದರು. ಅವರ ಕುಟುಂಬದ ಸದಸ್ಯರಿಗೆ ಪರಿಹಾರ ವಿತರಿಸಲಾಗಿದೆ. 58 ಜಾನುವಾರುಗಳು ಮೃತವಾಗಿದ್ದು, ₹6.34 ಲಕ್ಷ ಪರಿಹಾರ ನೀಡಲಾಗಿದೆ. 728 ಮನೆಗಳ ಹಾನಿಯಾಗಿದ್ದು, ಈಗಾಗಲೇ ₹1.20 ಕೋಟಿ ಪರಿಹಾರ ಪಾವತಿಸಲಾಗಿದೆ. 223 ಶಾಲಾ ಕಟ್ಟಡಗಳಿಗೆ ಹಾನಿಯಾಗಿದೆ ಎಂದು ತಿಳಿಸಿದರು.</p>.<p>ಹೆಸ್ಕಾಂನ ವಿದ್ಯುತ್ ಜಾಲ, ಲೋಕೋಪಯೋಗಿ ಇಲಾಖೆಯ ರಸ್ತೆಗಳು ಹಾಳಾಗಿವೆ. ಅವುಗಳ ದುರಸ್ತಿ ಕಾರ್ಯವನ್ನೂ ಈಗಾಗಲೇ ಆರಂಭಿಸಲಾಗಿದೆ. ಜಿಲ್ಲಾಧಿಕಾರಿ, ತಹಶೀಲ್ದಾರ್ ಖಾತೆಯಲ್ಲಿಯೂ ಅನುದಾನ ಲಭ್ಯವಿದೆ. ವಾರದಲ್ಲಿ ಬೆಳೆ ಹಾನಿ ಸಮೀಕ್ಷೆ ಪೂರ್ಣಗೊಳಿಸಲು ಸೂಚಿಸಿದ್ದೇನೆ ಎಂದು ಹೇಳಿದರು.</p>.<p>ಶಾಸಕ ಜೆ.ಟಿ. ಪಾಟೀಲ ಮಾತನಾಡಿ, ಮೊದಲು ತಿಂಗಳ ಕಾಲ ಮಳೆಯಾಗದೇ ಬೆಳೆ ಹಾನಿಯಾಗಿತ್ತು. ನಂತರ ಹೆಚ್ಚಿನ ಮಳೆಯಾಗಿ ಬೆಳೆ ಹಾನಿಯಾಗಿದೆ. ಸರ್ಕಾರ ರೈತರ ನೆರವಿಗೆ ನಿಂತಿದೆ. ಸೂಕ್ತ ಪರಿಹಾರ ನೀಡಲು ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದರು.</p>.<p>ಶಾಸಕರಾದ ಎಚ್.ವೈ. ಮೇಟಿ, ಭೀಮಸೇನ ಚಿಮ್ಮನಕಟ್ಟಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬಾಗಲಕೋಟೆ</strong>: ಮಳೆಯಿಂದಾಗಿ ಜಿಲ್ಲೆಯ 49 ಸಾವಿರ ಹೆಕ್ಟೇರ್ ಪ್ರದೇಶದಲ್ಲಿ ಹಾನಿಯಾಗಿರುವ ಅಂದಾಜು ಇದ್ದು, ₹464 ಕೋಟಿ ನಷ್ಟವಾಗಿದೆ ಎಂದು ಅಂದಾಜಿಸಲಾಗಿದೆ ಎಂದು ಸಚಿವ ಆರ್.ಬಿ. ತಿಮ್ಮಾಪುರ ಹೇಳಿದರು.</p>.<p>ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಹೆಸರು, ಸೂರ್ಯಕಾಂತಿ, ತೊಗರಿ, ಈರುಳ್ಳಿ, ಮೆಣಸಿನಕಾಯಿ ಬೆಳೆಗಳು ಹಾಳಾಗಿವೆ. ಇನ್ನು ಸಮೀಕ್ಷೆ ನಡೆದಿದೆ. ಅಂತಿಮ ವರದಿ ಬರಬೇಕಿದೆ. ನೈಸರ್ಗಿಕ ವಿಕೋಪದಡಿ ಪರಿಹಾರ ನೀಡಲು ₹85 ಕೋಟಿ ಅನುದಾನದ ಅವಶ್ಯಕತೆ ಇದೆ ಎಂದರು.</p>.<p>ಮರ ಬಿದ್ದು, ಸಿಡಿಲು ಬಡಿದು, ನದಿಗೆ ಕಾಲು ಜಾರಿ ಬಿದ್ದು ಮೂವರು ಜೀವ ಕಳೆದುಕೊಂಡಿದ್ದರು. ಅವರ ಕುಟುಂಬದ ಸದಸ್ಯರಿಗೆ ಪರಿಹಾರ ವಿತರಿಸಲಾಗಿದೆ. 58 ಜಾನುವಾರುಗಳು ಮೃತವಾಗಿದ್ದು, ₹6.34 ಲಕ್ಷ ಪರಿಹಾರ ನೀಡಲಾಗಿದೆ. 728 ಮನೆಗಳ ಹಾನಿಯಾಗಿದ್ದು, ಈಗಾಗಲೇ ₹1.20 ಕೋಟಿ ಪರಿಹಾರ ಪಾವತಿಸಲಾಗಿದೆ. 223 ಶಾಲಾ ಕಟ್ಟಡಗಳಿಗೆ ಹಾನಿಯಾಗಿದೆ ಎಂದು ತಿಳಿಸಿದರು.</p>.<p>ಹೆಸ್ಕಾಂನ ವಿದ್ಯುತ್ ಜಾಲ, ಲೋಕೋಪಯೋಗಿ ಇಲಾಖೆಯ ರಸ್ತೆಗಳು ಹಾಳಾಗಿವೆ. ಅವುಗಳ ದುರಸ್ತಿ ಕಾರ್ಯವನ್ನೂ ಈಗಾಗಲೇ ಆರಂಭಿಸಲಾಗಿದೆ. ಜಿಲ್ಲಾಧಿಕಾರಿ, ತಹಶೀಲ್ದಾರ್ ಖಾತೆಯಲ್ಲಿಯೂ ಅನುದಾನ ಲಭ್ಯವಿದೆ. ವಾರದಲ್ಲಿ ಬೆಳೆ ಹಾನಿ ಸಮೀಕ್ಷೆ ಪೂರ್ಣಗೊಳಿಸಲು ಸೂಚಿಸಿದ್ದೇನೆ ಎಂದು ಹೇಳಿದರು.</p>.<p>ಶಾಸಕ ಜೆ.ಟಿ. ಪಾಟೀಲ ಮಾತನಾಡಿ, ಮೊದಲು ತಿಂಗಳ ಕಾಲ ಮಳೆಯಾಗದೇ ಬೆಳೆ ಹಾನಿಯಾಗಿತ್ತು. ನಂತರ ಹೆಚ್ಚಿನ ಮಳೆಯಾಗಿ ಬೆಳೆ ಹಾನಿಯಾಗಿದೆ. ಸರ್ಕಾರ ರೈತರ ನೆರವಿಗೆ ನಿಂತಿದೆ. ಸೂಕ್ತ ಪರಿಹಾರ ನೀಡಲು ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದರು.</p>.<p>ಶಾಸಕರಾದ ಎಚ್.ವೈ. ಮೇಟಿ, ಭೀಮಸೇನ ಚಿಮ್ಮನಕಟ್ಟಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>