ಭಾರತೀಯ ಪುರಾತತ್ವ ಸರ್ವೇಕ್ಷಣಾ ಇಲಾಖೆಯ ಧಾರವಾಡ ವಲಯದ ಆಡಳಿತಾಧಿಕಾರಿ ಕಲಾ ನಂಬಿರಾಜ ಅವರು ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿ, ಸ್ಮಾರಕಗಳ ಸಂರಕ್ಷಣೆಯಲ್ಲಿ ಇಲಾಖೆಯ ಜೊತೆಗೆ ಸಾರ್ವಜನಿಕರು ಸಹಕರಿಸಬೇಕು ಹಾಗೂ ಸ್ಮಾರಕಗಳ ಆವರಣದಲ್ಲಿ ಸ್ವಚ್ಛತೆಯನ್ನು ಕಾಪಾಡಬೇಕು. ಸ್ಮಾರಕಗಳಿಗೆ ಧಕ್ಕೆಯಾಗದ ಹಾಗೆ ನೋಡಿಕೊಳ್ಳಬೇಕು. ಇಲಾಖೆಯ ಸಿಬ್ಬಂದಿ ಮತ್ತು ಪ್ರವಾಸಿಗರು ಈ ಒಂದು ವಾರದಲ್ಲಿ ಆಯೋಜಿಸಿರುವ ಛಾಯಾಚಿತ್ರ ಪ್ರದರ್ಶನದ ಸದುಪಯೋಗ ಪಡೆದುಕೊಳ್ಳಬೇಕು ಎಂದು ಹೇಳಿದರು. ಸಹಾಯಕ ಪುರಾತತ್ವ ಅಧಿಕಾರಿಗಳು ಡಾ. ದೇವರಾಜ ಎಸ್. ಎಂ ಪ್ರಾಸ್ತಾವಿಕವಾಗಿ ಮಾತನಾಡಿ, ವಿಶ್ವ ಪರಂಪರಾ ಸಪ್ತಾಹದ ಮುಖ್ಯ ಉದ್ದೇಶಗಳು ಹಾಗೂ ಛಾಯಾಚಿತ್ರ ಪ್ರದರ್ಶನದ ಕುರಿತು ಮಾಹಿತಿ ನೀಡಿದರು.