<p>ರಬಕವಿ ಬನಹಟ್ಟಿ: ಮಂಗಳವಾರದಿಂದ ಹಿಡಕಲ್ ಜಲಾಶಯದಿಂದ 2450 ಕ್ಯುಸೆಕ್ ನೀರನ್ನು ಜಿಎಲ್ಬಿಸಿ ಕಾಲುವೆಗೆ ಹರಿ ಬಿಡಲಾಗುತ್ತಿದ್ದು, ಈ ನೀರು ರಬಕವಿ ಬನಹಟ್ಟಿ ತಾಲ್ಲೂಕಿಗೆ ಬುಧವಾರ ಬಂದು ತಲುಪಿದೆ. ಈ ಭಾಗಕ್ಕೆ 1400 ಕ್ಯುಸೆಕ್ ನೀರು ಬರುತ್ತಿದೆ ಎಂದು ಜಮಖಂಡಿ ಉಪವಿಭಾಗಾಧಿಕಾರಿ ಶ್ವೇತಾ ಬೀಡಿಕರ್ ತಿಳಿಸಿದರು.</p>.<p>ಅವರು ಗುರುವಾರ ‘ಪ್ರಜಾವಾಣಿ’ಯೊಂದಿಗೆ ಮಾತನಾಡಿ, ‘ಬನಹಟ್ಟಿ ತೇರದಾಳ, ಮಧುರಖಂಡಿ, ಮರೆಗುದ್ದಿ ಮತ್ತು ಮುಧೋಳ ಸೇರಿದಂತೆ ಇತರ ಕೆರೆಗಳನ್ನು ಕಾಲುವೆಗೆ ನೀರು ತುಂಬಿಸುವ ಕಾರ್ಯದಲ್ಲಿ ತೊಡಗಿದ್ದೇವೆ. ಮುಂದಿನ ಏಳು ದಿನಗಳಲ್ಲಿ ಈ ಕಾರ್ಯ ನಡೆಯಲಿದೆ. ನೀರನ್ನು ಜನ ಮತ್ತು ಜಾನುವಾರು ಕುಡಿಯುವ ನೀರಿಗಾಗಿ ಮಾತ್ರ ಬಳಸಬೇಕು. ಈ ನಿಟ್ಟಿನಲ್ಲಿ ಸಂಬಂಧಪಟ್ಟ ತಹಶೀಲ್ದಾರರು, ನೀರಾವರಿ ಇಲಾಖೆ ಅಧಿಕಾರಿಗಳೊಂದಿಗೆ ಬೆಳಿಗ್ಗೆಯಿಂದಲೇ ವೀಕ್ಷಣೆಯಲ್ಲಿ ತೊಡಗಿದ್ದೇವೆ. ನೀರನ್ನು ಸಮರ್ಪಕವಾಗಿ ಬಳಸುವ ನಿಟ್ಟಿನಲ್ಲಿ ಎಲ್ಲ ರೀತಿಯ ಕ್ರಮಗಳನ್ನು ತೆಗೆದುಕೊಳ್ಳಲಾಗುವುದು’ ಎಂದ ತಿಳಿಸಿದರು.</p>.<p>ರಬಕವಿ ಬನಹಟ್ಟಿ ತಹಶೀಲ್ದಾರ್ ಗಿರೀಶ ಸ್ವಾದಿ, ಶಿರಸ್ತೆದಾರ ರಾಜಶೇಖರ ಸಾತಿಹಾಳ, ಜಿ ಎಲ್ ಬಿ ಸಿ ಎಇಇ ಶ್ರೀಧನ ನಂದಿಹಾಳ, ಹಿಪ್ಪರಗಿ ಬ್ಯಾರೇಜ್ ಸಹಾಯಕ ಎಂಜಿನಿಯರ್ ವಿ.ಎನ್.ನಾಯಕ ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260424-19-996268812</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ರಬಕವಿ ಬನಹಟ್ಟಿ: ಮಂಗಳವಾರದಿಂದ ಹಿಡಕಲ್ ಜಲಾಶಯದಿಂದ 2450 ಕ್ಯುಸೆಕ್ ನೀರನ್ನು ಜಿಎಲ್ಬಿಸಿ ಕಾಲುವೆಗೆ ಹರಿ ಬಿಡಲಾಗುತ್ತಿದ್ದು, ಈ ನೀರು ರಬಕವಿ ಬನಹಟ್ಟಿ ತಾಲ್ಲೂಕಿಗೆ ಬುಧವಾರ ಬಂದು ತಲುಪಿದೆ. ಈ ಭಾಗಕ್ಕೆ 1400 ಕ್ಯುಸೆಕ್ ನೀರು ಬರುತ್ತಿದೆ ಎಂದು ಜಮಖಂಡಿ ಉಪವಿಭಾಗಾಧಿಕಾರಿ ಶ್ವೇತಾ ಬೀಡಿಕರ್ ತಿಳಿಸಿದರು.</p>.<p>ಅವರು ಗುರುವಾರ ‘ಪ್ರಜಾವಾಣಿ’ಯೊಂದಿಗೆ ಮಾತನಾಡಿ, ‘ಬನಹಟ್ಟಿ ತೇರದಾಳ, ಮಧುರಖಂಡಿ, ಮರೆಗುದ್ದಿ ಮತ್ತು ಮುಧೋಳ ಸೇರಿದಂತೆ ಇತರ ಕೆರೆಗಳನ್ನು ಕಾಲುವೆಗೆ ನೀರು ತುಂಬಿಸುವ ಕಾರ್ಯದಲ್ಲಿ ತೊಡಗಿದ್ದೇವೆ. ಮುಂದಿನ ಏಳು ದಿನಗಳಲ್ಲಿ ಈ ಕಾರ್ಯ ನಡೆಯಲಿದೆ. ನೀರನ್ನು ಜನ ಮತ್ತು ಜಾನುವಾರು ಕುಡಿಯುವ ನೀರಿಗಾಗಿ ಮಾತ್ರ ಬಳಸಬೇಕು. ಈ ನಿಟ್ಟಿನಲ್ಲಿ ಸಂಬಂಧಪಟ್ಟ ತಹಶೀಲ್ದಾರರು, ನೀರಾವರಿ ಇಲಾಖೆ ಅಧಿಕಾರಿಗಳೊಂದಿಗೆ ಬೆಳಿಗ್ಗೆಯಿಂದಲೇ ವೀಕ್ಷಣೆಯಲ್ಲಿ ತೊಡಗಿದ್ದೇವೆ. ನೀರನ್ನು ಸಮರ್ಪಕವಾಗಿ ಬಳಸುವ ನಿಟ್ಟಿನಲ್ಲಿ ಎಲ್ಲ ರೀತಿಯ ಕ್ರಮಗಳನ್ನು ತೆಗೆದುಕೊಳ್ಳಲಾಗುವುದು’ ಎಂದ ತಿಳಿಸಿದರು.</p>.<p>ರಬಕವಿ ಬನಹಟ್ಟಿ ತಹಶೀಲ್ದಾರ್ ಗಿರೀಶ ಸ್ವಾದಿ, ಶಿರಸ್ತೆದಾರ ರಾಜಶೇಖರ ಸಾತಿಹಾಳ, ಜಿ ಎಲ್ ಬಿ ಸಿ ಎಇಇ ಶ್ರೀಧನ ನಂದಿಹಾಳ, ಹಿಪ್ಪರಗಿ ಬ್ಯಾರೇಜ್ ಸಹಾಯಕ ಎಂಜಿನಿಯರ್ ವಿ.ಎನ್.ನಾಯಕ ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260424-19-996268812</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>