<p><strong>ಜಮಖಂಡಿ:</strong> ರಾಜ್ಯದಲ್ಲಿ ಹೊಸ ತಾಲ್ಲೂಕುಗಳ ರಚನೆಯ ಬಳಿಕ ರಬಕವಿ-ಬನಹಟ್ಟಿ ತಾಲ್ಲೂಕಿಗೆ ಸೇರ್ಪಡೆಯಾಗಿದ್ದ ಹಿಪ್ಪರಗಿ ಗ್ರಾಮವನ್ನು ಜಮಖಂಡಿ ತಾಲ್ಲೂಕಿಗೆ ಮರುಸೇರ್ಪಡೆಗೊಳಿಸಿ ಸರ್ಕಾರದ ಅಧೀನ ಕಾರ್ಯದರ್ಶಿ (ಕಂದಾಯ ಇಲಾಖೆ ಭೂಮಾಪನ) ಎಸ್. ಗುರುಮೂರ್ತಿ ಅಧಿಸೂಚನೆ ಹೊರಡಿಸಿದ್ದಾರೆ.</p>.<p>ರಬಕವಿ-ಬನಹಟ್ಟಿ ತಾಲ್ಲೂಕಿನ ಹಿಪ್ಪರಗಿ ಗ್ರಾಮವನ್ನು ಜಮಖಂಡಿ ತಾಲ್ಲೂಕಿಗೆ ಸೇರ್ಪಡೆಗೊಳಿಸಿ ಜೂನ್ 14 ರಂದು ಅಂತಿಮ ಅಧಿಸೂಚನೆ ಹೊರಡಿಸಿದ್ದು, ಜೂನ್ 24ರಂದು ರಾಜ್ಯ ಪತ್ರದಲ್ಲಿ ಪ್ರಕಟಿಸಲಾಗಿದೆ.</p>.<p>ಅಧಿಸೂಚನೆ ಮಾಹಿತಿಯನ್ನು ಅಗತ್ಯ ಕ್ರಮದ ಸಲುವಾಗಿ ಜಿಲ್ಲಾ ಮತ್ತು ತಾಲ್ಲೂಕು ಮಟ್ಟದ ಕಚೇರಿಗಳ ಗಮನಕ್ಕೆ ತರುವಂತೆ ಹಾಗೂ ಗ್ರಾಮದ ದಾಖಲಾತಿಗಳನ್ನು ಕಾಲೋಚಿತಗೊಳಿಸಲು ಕ್ರಮ ಕೈಗೊಳ್ಳುವಂತೆ ಜಿಲ್ಲಾಧಿಕಾರಿಗಳಿಗೆ ಅಧೀನ ಕಾರ್ಯದರ್ಶಿಗಳು ನಿರ್ದೇಶನ ನೀಡಿದ್ದಾರೆ ಎಂದು ತಮ್ಮ ಗ್ರಾಮವನ್ನು ಜಮಖಂಡಿ ತಾಲ್ಲೂಕಿಗೆ ಮರುಸೇರ್ಪಡೆಗೊಳಿಸಲು 7 ವರ್ಷದಿಂದ ನಿರಂತರ ಹೋರಾಟ ನಡೆಸಿದ ನಾಗೇಶ ಜತ್ತಿ ತಿಳಿಸಿದ್ದಾರೆ.</p>.<p>ರಬಕವಿ-ಬನಹಟ್ಟಿ ತಾಲ್ಲೂಕಿಗೆ ನಮ್ಮ ಗ್ರಾಮವನ್ನು ಸೇರಿಸಿದ್ದರಿಂದ ಸರ್ಕಾರಿ ಕೆಲಸಗಳನ್ನು ಮಾಡಿಕೊಳ್ಳಲು ಬಹಳ ತೊಂದರೆ ಆಗಿತ್ತು. ಸರ್ಕಾರ ನಮ್ಮ ಗ್ರಾಮವನ್ನು ಹಳೇ ತಾಲ್ಲೂಕಿಗೆ ಮರು ಸೇರ್ಪಡೆ ಮಾಡಿದ್ದು ಸ್ವಾಗತಾರ್ಹ ಕ್ರಮವಾಗಿದೆ ಎಂದು ಹಿಪ್ಪರಗಿ ಗ್ರಾಮಸ್ಥರು ಹರ್ಷ ವ್ಯಕ್ತಪಡಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಜಮಖಂಡಿ:</strong> ರಾಜ್ಯದಲ್ಲಿ ಹೊಸ ತಾಲ್ಲೂಕುಗಳ ರಚನೆಯ ಬಳಿಕ ರಬಕವಿ-ಬನಹಟ್ಟಿ ತಾಲ್ಲೂಕಿಗೆ ಸೇರ್ಪಡೆಯಾಗಿದ್ದ ಹಿಪ್ಪರಗಿ ಗ್ರಾಮವನ್ನು ಜಮಖಂಡಿ ತಾಲ್ಲೂಕಿಗೆ ಮರುಸೇರ್ಪಡೆಗೊಳಿಸಿ ಸರ್ಕಾರದ ಅಧೀನ ಕಾರ್ಯದರ್ಶಿ (ಕಂದಾಯ ಇಲಾಖೆ ಭೂಮಾಪನ) ಎಸ್. ಗುರುಮೂರ್ತಿ ಅಧಿಸೂಚನೆ ಹೊರಡಿಸಿದ್ದಾರೆ.</p>.<p>ರಬಕವಿ-ಬನಹಟ್ಟಿ ತಾಲ್ಲೂಕಿನ ಹಿಪ್ಪರಗಿ ಗ್ರಾಮವನ್ನು ಜಮಖಂಡಿ ತಾಲ್ಲೂಕಿಗೆ ಸೇರ್ಪಡೆಗೊಳಿಸಿ ಜೂನ್ 14 ರಂದು ಅಂತಿಮ ಅಧಿಸೂಚನೆ ಹೊರಡಿಸಿದ್ದು, ಜೂನ್ 24ರಂದು ರಾಜ್ಯ ಪತ್ರದಲ್ಲಿ ಪ್ರಕಟಿಸಲಾಗಿದೆ.</p>.<p>ಅಧಿಸೂಚನೆ ಮಾಹಿತಿಯನ್ನು ಅಗತ್ಯ ಕ್ರಮದ ಸಲುವಾಗಿ ಜಿಲ್ಲಾ ಮತ್ತು ತಾಲ್ಲೂಕು ಮಟ್ಟದ ಕಚೇರಿಗಳ ಗಮನಕ್ಕೆ ತರುವಂತೆ ಹಾಗೂ ಗ್ರಾಮದ ದಾಖಲಾತಿಗಳನ್ನು ಕಾಲೋಚಿತಗೊಳಿಸಲು ಕ್ರಮ ಕೈಗೊಳ್ಳುವಂತೆ ಜಿಲ್ಲಾಧಿಕಾರಿಗಳಿಗೆ ಅಧೀನ ಕಾರ್ಯದರ್ಶಿಗಳು ನಿರ್ದೇಶನ ನೀಡಿದ್ದಾರೆ ಎಂದು ತಮ್ಮ ಗ್ರಾಮವನ್ನು ಜಮಖಂಡಿ ತಾಲ್ಲೂಕಿಗೆ ಮರುಸೇರ್ಪಡೆಗೊಳಿಸಲು 7 ವರ್ಷದಿಂದ ನಿರಂತರ ಹೋರಾಟ ನಡೆಸಿದ ನಾಗೇಶ ಜತ್ತಿ ತಿಳಿಸಿದ್ದಾರೆ.</p>.<p>ರಬಕವಿ-ಬನಹಟ್ಟಿ ತಾಲ್ಲೂಕಿಗೆ ನಮ್ಮ ಗ್ರಾಮವನ್ನು ಸೇರಿಸಿದ್ದರಿಂದ ಸರ್ಕಾರಿ ಕೆಲಸಗಳನ್ನು ಮಾಡಿಕೊಳ್ಳಲು ಬಹಳ ತೊಂದರೆ ಆಗಿತ್ತು. ಸರ್ಕಾರ ನಮ್ಮ ಗ್ರಾಮವನ್ನು ಹಳೇ ತಾಲ್ಲೂಕಿಗೆ ಮರು ಸೇರ್ಪಡೆ ಮಾಡಿದ್ದು ಸ್ವಾಗತಾರ್ಹ ಕ್ರಮವಾಗಿದೆ ಎಂದು ಹಿಪ್ಪರಗಿ ಗ್ರಾಮಸ್ಥರು ಹರ್ಷ ವ್ಯಕ್ತಪಡಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>