<p><strong>ಬಾಗಲಕೋಟೆ:</strong> ಹುಬ್ಬಳ್ಳಿ ಸಮೀಪದ ಇನಾಂ ವೀರಾಪುರ ಗ್ರಾಮದಲ್ಲಿ ನಡೆದ ಮರ್ಯಾದೆಗೇಡು ಹತ್ಯೆ ಪ್ರಕರಣದ ಅಪರಾಧಿಗಳಿಗೆ ಗಲ್ಲುಶಿಕ್ಷೆ ವಿಧಿಸಬೇಕು ಎಂದು ಆಗ್ರಹಿಸಿ ಚಂದ್ರಕಾಂತ ಕಾದ್ರೋಳ್ಳಿ ಬಣದ ರಾಜ್ಯ ದಲಿತ ಸಂಘರ್ಷ ಸಮಿತಿಯ ಜಿಲ್ಲಾ ಘಟಕವು ಜಿಲ್ಲಾಡಳಿತ ಭವನದ ಎದುರು ಗುರುವಾರ ಪ್ರತಿಭಟನೆ ನಡೆಸಿತು. </p>.<p>ರಾಜ್ಯ ಉಪಾಧ್ಯಕ್ಷ ಸತೀಶ ಎಚ್., ಯುವತಿ ದಲಿತ ಯುವಕನನ್ನು ಪ್ರೀತಿಸಿ ಮದುವೆಯಾದಳು ಎಂಬ ಕಾರಣಕ್ಕೆ ಏಳು ತಿಂಗಳ ಗರ್ಭಿಣಿಯನ್ನು ಹತ್ಯೆ ಮಾಡಿರುವುದು ಅತ್ಯಂತ ನೋವಿನ ಘಟನೆ. ಇಂತಹ ಘಟನೆಗಳು ಮರುಕಳಿಸದಂತೆ ಸರ್ಕಾರ ಕಠಿಣ ಕ್ರಮಕೈಗೊಳ್ಳಬೇಕು ಎಂದು ಒತ್ತಾಯಿಸಿದರು.</p>.<p>ಜಿಲ್ಲಾ ಘಟಕದ ಅಧ್ಯಕ್ಷ ಜಗದೀಶ ಮೂಗನೂರ ಮಾತನಾಡಿ, ಪ್ರೀತಿಸಿ ಮದುವೆಯಾಗಿರುವುದಕ್ಕಾಗಿ ಯುವತಿಯನ್ನು ಹತ್ಯೆ ಮಾಡಿರುವುದು ತಪ್ಪು. ಆರೋಪಿಗಳಿಗೆ ಗಲ್ಲುಶಿಕ್ಷೆ ವಿಧಿಸಿ ಸಂತ್ರಸ್ತ ಕುಟುಂಬಕ್ಕೆ ನ್ಯಾಯ ಒದಗಿಸಬೇಕು. ಜೊತೆಗೆ ಪೀಡಿತ ಕುಟುಂಬಕ್ಕೆ ಸೂಕ್ತ ಪರಿಹಾರ ನೀಡಬೇಕು ಎಂದು ಆಗ್ರಹಿಸಿದರು.</p>.<p>ಸಚಿನ ಗುಡಿಮನಿ, ಶಿವರಂಜ ಪೂಜಾರಿ, ಶಾಂತಾ ಮಾದರ, ರಾಘು ಮಾದರ, ದರ್ಶನ ಮಾದರ, ಬಸವರಾಜ ಮಾದರ, ರಮೇಶ ಹಲಗಿ, ಯಮನಪ್ಪ ಪೂಜಾರಿ, ಸುನೀಲ ಮಾದರ, ಸಂತೋಷ ಮಾದರ ಪಾಲ್ಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬಾಗಲಕೋಟೆ:</strong> ಹುಬ್ಬಳ್ಳಿ ಸಮೀಪದ ಇನಾಂ ವೀರಾಪುರ ಗ್ರಾಮದಲ್ಲಿ ನಡೆದ ಮರ್ಯಾದೆಗೇಡು ಹತ್ಯೆ ಪ್ರಕರಣದ ಅಪರಾಧಿಗಳಿಗೆ ಗಲ್ಲುಶಿಕ್ಷೆ ವಿಧಿಸಬೇಕು ಎಂದು ಆಗ್ರಹಿಸಿ ಚಂದ್ರಕಾಂತ ಕಾದ್ರೋಳ್ಳಿ ಬಣದ ರಾಜ್ಯ ದಲಿತ ಸಂಘರ್ಷ ಸಮಿತಿಯ ಜಿಲ್ಲಾ ಘಟಕವು ಜಿಲ್ಲಾಡಳಿತ ಭವನದ ಎದುರು ಗುರುವಾರ ಪ್ರತಿಭಟನೆ ನಡೆಸಿತು. </p>.<p>ರಾಜ್ಯ ಉಪಾಧ್ಯಕ್ಷ ಸತೀಶ ಎಚ್., ಯುವತಿ ದಲಿತ ಯುವಕನನ್ನು ಪ್ರೀತಿಸಿ ಮದುವೆಯಾದಳು ಎಂಬ ಕಾರಣಕ್ಕೆ ಏಳು ತಿಂಗಳ ಗರ್ಭಿಣಿಯನ್ನು ಹತ್ಯೆ ಮಾಡಿರುವುದು ಅತ್ಯಂತ ನೋವಿನ ಘಟನೆ. ಇಂತಹ ಘಟನೆಗಳು ಮರುಕಳಿಸದಂತೆ ಸರ್ಕಾರ ಕಠಿಣ ಕ್ರಮಕೈಗೊಳ್ಳಬೇಕು ಎಂದು ಒತ್ತಾಯಿಸಿದರು.</p>.<p>ಜಿಲ್ಲಾ ಘಟಕದ ಅಧ್ಯಕ್ಷ ಜಗದೀಶ ಮೂಗನೂರ ಮಾತನಾಡಿ, ಪ್ರೀತಿಸಿ ಮದುವೆಯಾಗಿರುವುದಕ್ಕಾಗಿ ಯುವತಿಯನ್ನು ಹತ್ಯೆ ಮಾಡಿರುವುದು ತಪ್ಪು. ಆರೋಪಿಗಳಿಗೆ ಗಲ್ಲುಶಿಕ್ಷೆ ವಿಧಿಸಿ ಸಂತ್ರಸ್ತ ಕುಟುಂಬಕ್ಕೆ ನ್ಯಾಯ ಒದಗಿಸಬೇಕು. ಜೊತೆಗೆ ಪೀಡಿತ ಕುಟುಂಬಕ್ಕೆ ಸೂಕ್ತ ಪರಿಹಾರ ನೀಡಬೇಕು ಎಂದು ಆಗ್ರಹಿಸಿದರು.</p>.<p>ಸಚಿನ ಗುಡಿಮನಿ, ಶಿವರಂಜ ಪೂಜಾರಿ, ಶಾಂತಾ ಮಾದರ, ರಾಘು ಮಾದರ, ದರ್ಶನ ಮಾದರ, ಬಸವರಾಜ ಮಾದರ, ರಮೇಶ ಹಲಗಿ, ಯಮನಪ್ಪ ಪೂಜಾರಿ, ಸುನೀಲ ಮಾದರ, ಸಂತೋಷ ಮಾದರ ಪಾಲ್ಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>