<p><strong>ಬಾಗಲಕೋಟೆ:</strong> ಜಿಲ್ಲೆಯ ಐಹೊಳೆ, ಬಾದಾಮಿಯಲ್ಲಿ ಹೊಟೇಲ್ ನಿರ್ಮಾಣವಾಗುತ್ತಿವೆ. ಬಾಗಲಕೋಟೆಯಲ್ಲೂ ಮಧ್ಯಮ ವರ್ಗದವರಿಗೆ ಅನುಕೂಲವಾಗುವ ರೀತಿಯಲ್ಲಿ ಅತ್ಯುತ್ತಮ ಹೊಟೇಲ್ ನಿರ್ಮಿಸಲಾಗುವುದು ಎಂದು ರಾಜ್ಯ ಕೈಗಾರಿಕೆ ಮತ್ತು ಮೂಲಸೌಕರ್ಯ ನಿಗಮದ ಅಧ್ಯಕ್ಷ ಎಸ್.ಜಿ. ನಂಜಯ್ಯನಮಠ ಹೇಳಿದರು.</p>.<p>ಭಾನುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಅಗತ್ಯವಿರುವ ಕಡೆಗಳಲ್ಲಿ ಹೆಲಿಪ್ಯಾಡ್ ನಿರ್ಮಾಣ ಮಾಡಲಾಗುವುದು. ನಿಗಮದ ಸಭೆ ನಡೆಸಿ, ಎಲ್ಲ ನಿರ್ಧಾರ ತೆಗೆದುಕೊಳ್ಳಲಾಗುವುದು ಎಂದರು.</p>.<p>ರಾಜ್ಯದ ವಿಮಾನ ನಿಲ್ದಾಣಗಳ ಮೇಲ್ದರ್ಜೆಗೇರಿಸುವುದರ ಜತೆಗೆ ಬಾಗಲಕೋಟೆಯಲ್ಲಿ ಬಿಟಿಡಿಎದಿಂದ 6 ಎಕರೆ ಜಾಗೆ ಪಡೆದುಕೊಂಡು ರೆಸ್ಟೋರೆಂಟ್ ನಿರ್ಮಿಸಲಾಗುವುದು. ಶಿವಮೊಗ್ಗ ವಿಮಾನ ನಿಲ್ದಾಣದಲ್ಲಿ ರಾತ್ರಿಯೂ ವಿಮಾನಗಳು ಹಾರಾಟ ಮಾಡುವ ರೀತಿಯಲ್ಲಿ ಮೇಲ್ದರ್ಜೆಗೇರಿಸಲಾಗುತ್ತದೆ. ಎಂದು ಹೇಳಿದರು.</p>.<p>ವಿಜಯಪುರ ವಿಮಾನ ನಿಲ್ದಾಣದ ಶೇ95ರಷ್ಟು ಕಾಮಗಾರಿ ಪೂರ್ಣಗೊಂಡಿದೆ. ರಾಯಚೂರು ವಿಮಾನ ನಿಲ್ದಾಣ ಕಾಮಗಾರಿ ಪ್ರಗತಿಯಲ್ಲಿದೆ ಎಂದರು.</p>.<p>ಯುಕೆಪಿ ವಿಚಾರದಲ್ಲಿ ರಾಜ್ಯ ಸರ್ಕಾರ ದಿಟ್ಟ ಹೆಜ್ಜೆಯನ್ನಿಟ್ಟಿದ್ದಲ್ಲದೇ ಮೂರನೇ ಹಂತದ ಭೂಸ್ವಾಧೀನ ಪೂರ್ಣಗೊಳಿಸಲು ಬದ್ಧತೆ ಪ್ರಕಟಿಸಿದೆ. ಸಚಿವ ಸಂಪುಟದ ತೀರ್ಮಾನಗಳನ್ನು ಆದೇಶ ರೂಪದಲ್ಲೂ ಹೊರಡಿಸಿದೆ ಎಂದರು.</p>.<p>ಪಡಿತರ ವಿತರಣೆಯಲ್ಲಿ ಅಕ್ರಮಗಳನ್ನು ತಡೆಯಲು ರಾಜ್ಯ ಸರ್ಕಾರ ಹಲವು ಬದಲಾವಣೆಗಳನ್ನು ತಂದಿದ್ದು, ಹೆಚ್ಚಿನ ಪಾರದರ್ಶಕತೆಯನ್ನು ಕಾಣಬಹುದಾಗಿದೆ. ಇದರಿಂದ ರಾಜ್ಯದ ಬಡ ಜನರಿಗೆ ಸಾಕಷ್ಟು ಅನುಕೂಲವಾಗಲಿದೆ ಎಂದು ಹೇಳಿದರು.</p>.<p>ಡಿಸಿಸಿ ಬ್ಯಾಂಕ್ ಅಧ್ಯಕ್ಷ ಅಜಯಕುಮಾರ ಸರನಾಯಕ ಮಾತನಾಡಿ, ಯುಕೆಪಿ ವಿಚಾರದಲ್ಲಿ ರಾಜ್ಯ ಸರ್ಕಾರ ದಿಟ್ಟ ಹೆಜ್ಜೆಯಿಟ್ಟಿದೆ. ಮುಳುಗಡೆ ಭೂಸ್ವಾಧೀನಕ್ಕೆ ಪರಿಹಾರ ಸಿಗಲಿದೆ. ಪುನರ್ವಸತಿ ವಿಷಯದಲ್ಲಿ ಸರ್ಕಾರ ಏನು ಕ್ರಮಕೈಗೊಳ್ಳಲಿದೆ ಎಂಬುದರ ಬಗ್ಗೆ ಅಧಿಕಾರಿಗಳೊಂದಿಗೆ ಚರ್ಚಿಸಿ ಮಾಹಿತಿ ಪಡೆಯುತ್ತೇವೆ ಎಂದರು.</p>.<p>ಬಸವೇಶ್ವರ ಬ್ಯಾಂಕ್ ಅಧ್ಯಕ್ಷ ಪ್ರಕಾಶ ತಪಶೆಟ್ಟಿ, ಜಿಲ್ಲಾ ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ಅನಿಲಕುಮಾರ ದಡ್ಡಿ, ಜಿಲ್ಲಾ ಕಾಂಗ್ರೆಸ್ ಪ್ರಚಾರ ಸಮಿತಿ ಅಧ್ಯಕ್ಷ ನಾಗರಾಜ ಹದ್ಲಿ, ಸೈಫುದ್ಧಿನ್ ಕಲಾದಗಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬಾಗಲಕೋಟೆ:</strong> ಜಿಲ್ಲೆಯ ಐಹೊಳೆ, ಬಾದಾಮಿಯಲ್ಲಿ ಹೊಟೇಲ್ ನಿರ್ಮಾಣವಾಗುತ್ತಿವೆ. ಬಾಗಲಕೋಟೆಯಲ್ಲೂ ಮಧ್ಯಮ ವರ್ಗದವರಿಗೆ ಅನುಕೂಲವಾಗುವ ರೀತಿಯಲ್ಲಿ ಅತ್ಯುತ್ತಮ ಹೊಟೇಲ್ ನಿರ್ಮಿಸಲಾಗುವುದು ಎಂದು ರಾಜ್ಯ ಕೈಗಾರಿಕೆ ಮತ್ತು ಮೂಲಸೌಕರ್ಯ ನಿಗಮದ ಅಧ್ಯಕ್ಷ ಎಸ್.ಜಿ. ನಂಜಯ್ಯನಮಠ ಹೇಳಿದರು.</p>.<p>ಭಾನುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಅಗತ್ಯವಿರುವ ಕಡೆಗಳಲ್ಲಿ ಹೆಲಿಪ್ಯಾಡ್ ನಿರ್ಮಾಣ ಮಾಡಲಾಗುವುದು. ನಿಗಮದ ಸಭೆ ನಡೆಸಿ, ಎಲ್ಲ ನಿರ್ಧಾರ ತೆಗೆದುಕೊಳ್ಳಲಾಗುವುದು ಎಂದರು.</p>.<p>ರಾಜ್ಯದ ವಿಮಾನ ನಿಲ್ದಾಣಗಳ ಮೇಲ್ದರ್ಜೆಗೇರಿಸುವುದರ ಜತೆಗೆ ಬಾಗಲಕೋಟೆಯಲ್ಲಿ ಬಿಟಿಡಿಎದಿಂದ 6 ಎಕರೆ ಜಾಗೆ ಪಡೆದುಕೊಂಡು ರೆಸ್ಟೋರೆಂಟ್ ನಿರ್ಮಿಸಲಾಗುವುದು. ಶಿವಮೊಗ್ಗ ವಿಮಾನ ನಿಲ್ದಾಣದಲ್ಲಿ ರಾತ್ರಿಯೂ ವಿಮಾನಗಳು ಹಾರಾಟ ಮಾಡುವ ರೀತಿಯಲ್ಲಿ ಮೇಲ್ದರ್ಜೆಗೇರಿಸಲಾಗುತ್ತದೆ. ಎಂದು ಹೇಳಿದರು.</p>.<p>ವಿಜಯಪುರ ವಿಮಾನ ನಿಲ್ದಾಣದ ಶೇ95ರಷ್ಟು ಕಾಮಗಾರಿ ಪೂರ್ಣಗೊಂಡಿದೆ. ರಾಯಚೂರು ವಿಮಾನ ನಿಲ್ದಾಣ ಕಾಮಗಾರಿ ಪ್ರಗತಿಯಲ್ಲಿದೆ ಎಂದರು.</p>.<p>ಯುಕೆಪಿ ವಿಚಾರದಲ್ಲಿ ರಾಜ್ಯ ಸರ್ಕಾರ ದಿಟ್ಟ ಹೆಜ್ಜೆಯನ್ನಿಟ್ಟಿದ್ದಲ್ಲದೇ ಮೂರನೇ ಹಂತದ ಭೂಸ್ವಾಧೀನ ಪೂರ್ಣಗೊಳಿಸಲು ಬದ್ಧತೆ ಪ್ರಕಟಿಸಿದೆ. ಸಚಿವ ಸಂಪುಟದ ತೀರ್ಮಾನಗಳನ್ನು ಆದೇಶ ರೂಪದಲ್ಲೂ ಹೊರಡಿಸಿದೆ ಎಂದರು.</p>.<p>ಪಡಿತರ ವಿತರಣೆಯಲ್ಲಿ ಅಕ್ರಮಗಳನ್ನು ತಡೆಯಲು ರಾಜ್ಯ ಸರ್ಕಾರ ಹಲವು ಬದಲಾವಣೆಗಳನ್ನು ತಂದಿದ್ದು, ಹೆಚ್ಚಿನ ಪಾರದರ್ಶಕತೆಯನ್ನು ಕಾಣಬಹುದಾಗಿದೆ. ಇದರಿಂದ ರಾಜ್ಯದ ಬಡ ಜನರಿಗೆ ಸಾಕಷ್ಟು ಅನುಕೂಲವಾಗಲಿದೆ ಎಂದು ಹೇಳಿದರು.</p>.<p>ಡಿಸಿಸಿ ಬ್ಯಾಂಕ್ ಅಧ್ಯಕ್ಷ ಅಜಯಕುಮಾರ ಸರನಾಯಕ ಮಾತನಾಡಿ, ಯುಕೆಪಿ ವಿಚಾರದಲ್ಲಿ ರಾಜ್ಯ ಸರ್ಕಾರ ದಿಟ್ಟ ಹೆಜ್ಜೆಯಿಟ್ಟಿದೆ. ಮುಳುಗಡೆ ಭೂಸ್ವಾಧೀನಕ್ಕೆ ಪರಿಹಾರ ಸಿಗಲಿದೆ. ಪುನರ್ವಸತಿ ವಿಷಯದಲ್ಲಿ ಸರ್ಕಾರ ಏನು ಕ್ರಮಕೈಗೊಳ್ಳಲಿದೆ ಎಂಬುದರ ಬಗ್ಗೆ ಅಧಿಕಾರಿಗಳೊಂದಿಗೆ ಚರ್ಚಿಸಿ ಮಾಹಿತಿ ಪಡೆಯುತ್ತೇವೆ ಎಂದರು.</p>.<p>ಬಸವೇಶ್ವರ ಬ್ಯಾಂಕ್ ಅಧ್ಯಕ್ಷ ಪ್ರಕಾಶ ತಪಶೆಟ್ಟಿ, ಜಿಲ್ಲಾ ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ಅನಿಲಕುಮಾರ ದಡ್ಡಿ, ಜಿಲ್ಲಾ ಕಾಂಗ್ರೆಸ್ ಪ್ರಚಾರ ಸಮಿತಿ ಅಧ್ಯಕ್ಷ ನಾಗರಾಜ ಹದ್ಲಿ, ಸೈಫುದ್ಧಿನ್ ಕಲಾದಗಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>