<p><strong>ಬಾಗಲಕೋಟೆ:</strong> ಮಲಪ್ರಭಾ ನದಿಗೆ ನವಿಲುತೀರ್ಥ ಜಲಾಶಯದಿಂದ 20 ಸಾವಿರ ಕ್ಯೂಸೆಕ್ ನೀರು ಬಿಟ್ಟಿರುವ ಪರಿಣಾಮ ಪ್ರವಾಹ ಪರಿಸ್ಥಿತಿ ಉಂಟಾಗಿದೆ. ಇದರಿಂದ ಬಾದಾಮಿ ತಾಲ್ಲೂಕಿನ ಗೋವನಕೊಪ್ಪ- ಗದಗ ಜಿಲ್ಲೆ ನರಗುಂದ ತಾಲ್ಲೂಕಿನ ಕೊಣ್ಣೂರು ನಡುವಿನ ಹೊಸ ಸೇತುವೆ ಜಲಾವೃತವಾಗಿದ್ದು, ಹುಬ್ಬಳ್ಳಿ-ಸೊಲ್ಲಾಪುರ ನಡುವಿನ ರಾಷ್ಟ್ರೀಯ ಹೆದ್ದಾರಿ 218 ರಲ್ಲಿ ಸೋಮವಾರ ಬೆಳಿಗ್ಗೆಯಿಂದ ಸಂಚಾರ ಸ್ಥಗಿತಗೊಂಡಿದೆ.</p>.<p>ಕಳೆದ ಮೂರು ವರ್ಷಗಳಿಂದ ಮಲಪ್ರಭೆಗೆ ಜಲಾಶಯದಿಂದ 15 ಸಾವಿರಕ್ಕೂ ಹೆಚ್ಚು ಕ್ಯೂಸೆಕ್ ನೀರು ಬಿಟ್ಟಾಗಲೆಲ್ಲಾಹೊಸ ಸೇತುವೆ ಜಲಾವೃತವಾಗಿ ಹೆದ್ದಾರಿಯಲ್ಲಿ ಸಂಚಾರ ಸ್ಥಗಿತಗೊಳ್ಳುತ್ತಿದೆ.</p>.<p>ಈ ಹೆದ್ದಾರಿ ಹುಬ್ಬಳ್ಳಿಯಿಂದ ಸೊಲ್ಲಾಪುರ ಮಾರ್ಗವಾಗಿ ಉತ್ತರ ಭಾರತದ ರಾಜ್ಯಗಳಿಗೆ ಸಂಪರ್ಕ ಕಲ್ಪಿಸುವ ಪ್ರಮುಖ ಮಾರ್ಗವಾಗಿದ್ದು, ಸರಕು ಸಾಗಣೆಯ ಪ್ರಮುಖ ಹಾದಿಯಾಗಿದೆ.</p>.<p>ವಾಹನಗಳು ರಾಮದುರ್ಗ, ಧಾರವಾಡ ಮೂಲಕ ಇಲ್ಲವೇ ಬಾದಾಮಿ, ರೋಣ ನವಲಗುಂದ ಮಾರ್ಗವಾಗಿ ಹುಬ್ಬಳ್ಳಿಗೆ ತಲುಪಬೇಕಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬಾಗಲಕೋಟೆ:</strong> ಮಲಪ್ರಭಾ ನದಿಗೆ ನವಿಲುತೀರ್ಥ ಜಲಾಶಯದಿಂದ 20 ಸಾವಿರ ಕ್ಯೂಸೆಕ್ ನೀರು ಬಿಟ್ಟಿರುವ ಪರಿಣಾಮ ಪ್ರವಾಹ ಪರಿಸ್ಥಿತಿ ಉಂಟಾಗಿದೆ. ಇದರಿಂದ ಬಾದಾಮಿ ತಾಲ್ಲೂಕಿನ ಗೋವನಕೊಪ್ಪ- ಗದಗ ಜಿಲ್ಲೆ ನರಗುಂದ ತಾಲ್ಲೂಕಿನ ಕೊಣ್ಣೂರು ನಡುವಿನ ಹೊಸ ಸೇತುವೆ ಜಲಾವೃತವಾಗಿದ್ದು, ಹುಬ್ಬಳ್ಳಿ-ಸೊಲ್ಲಾಪುರ ನಡುವಿನ ರಾಷ್ಟ್ರೀಯ ಹೆದ್ದಾರಿ 218 ರಲ್ಲಿ ಸೋಮವಾರ ಬೆಳಿಗ್ಗೆಯಿಂದ ಸಂಚಾರ ಸ್ಥಗಿತಗೊಂಡಿದೆ.</p>.<p>ಕಳೆದ ಮೂರು ವರ್ಷಗಳಿಂದ ಮಲಪ್ರಭೆಗೆ ಜಲಾಶಯದಿಂದ 15 ಸಾವಿರಕ್ಕೂ ಹೆಚ್ಚು ಕ್ಯೂಸೆಕ್ ನೀರು ಬಿಟ್ಟಾಗಲೆಲ್ಲಾಹೊಸ ಸೇತುವೆ ಜಲಾವೃತವಾಗಿ ಹೆದ್ದಾರಿಯಲ್ಲಿ ಸಂಚಾರ ಸ್ಥಗಿತಗೊಳ್ಳುತ್ತಿದೆ.</p>.<p>ಈ ಹೆದ್ದಾರಿ ಹುಬ್ಬಳ್ಳಿಯಿಂದ ಸೊಲ್ಲಾಪುರ ಮಾರ್ಗವಾಗಿ ಉತ್ತರ ಭಾರತದ ರಾಜ್ಯಗಳಿಗೆ ಸಂಪರ್ಕ ಕಲ್ಪಿಸುವ ಪ್ರಮುಖ ಮಾರ್ಗವಾಗಿದ್ದು, ಸರಕು ಸಾಗಣೆಯ ಪ್ರಮುಖ ಹಾದಿಯಾಗಿದೆ.</p>.<p>ವಾಹನಗಳು ರಾಮದುರ್ಗ, ಧಾರವಾಡ ಮೂಲಕ ಇಲ್ಲವೇ ಬಾದಾಮಿ, ರೋಣ ನವಲಗುಂದ ಮಾರ್ಗವಾಗಿ ಹುಬ್ಬಳ್ಳಿಗೆ ತಲುಪಬೇಕಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>