<p><strong>ಹುನಗುಂದ:</strong> ನಮ್ಮ ಸಂವಿಧಾನವು ಜಗತ್ತಿನಲ್ಲಿಯೇ ಶ್ರೇಷ್ಠ ಮತ್ತು ವಿಶಿಷ್ಠ ಸಂವಿಧಾನವಾಗಿದೆ ಎಂದು ಸತ್ಯಶೋಧಕ ಸಂಘದ ರಾಜ್ಯ ಘಟಕದ ಅಧ್ಯಕ್ಷ ಪರಶುರಾಮ ಮಹಾರಾಜನವರ ಅಭಿಪ್ರಾಯಪಟ್ಟರು.</p>.<p>ಅವರು ನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಸತ್ಯಶೋಧಕ ಸಂಘದ ಸಹಯೋಗದಲ್ಲಿ ಶನಿವಾರ ನಡೆದ 'ಸಂವಿಧಾನ ಜಾಗೃತಿಯಾನ' ಕಾರ್ಯಕ್ರಮದಲ್ಲಿ ವಿಶೇಷ ಉಪನ್ಯಾಸಕರಾಗಿ ಭಾಗವಹಿಸಿ ಅವರು ಮಾತನಾಡಿದರು. </p>.<p>ಭಾರತದಲ್ಲಿ ಆಚರಣೆಯಲ್ಲಿದ್ದ ಹಲವು ಅನಿಷ್ಟ ಪದ್ಧತಿಗಳನ್ನು ತೊಲಗಿಸಿ ಸಾಮಾಜಿಕ ಸಮಾನತೆ, ಸಾಮರಸ್ಯವನ್ನು ಬೋಧಿಸುತ್ತಾ ಪ್ರಗತಿಯಡೆಗೆ ದೇಶವನ್ನು ಮುನ್ನಡೆಸುವ ಗ್ರಂಥವೇ ಸಂವಿಧಾನವಾಗಿದೆ ಎಂದ ಅವರು, ಸಂವಿಧಾನ ಶಿಲ್ಪಿ ಡಾ.ಬಿ.ಆರ್. ಅಂಬೇಡ್ಕರ್ ಅವರ ಜೀವನದ ಹಲವು ಘಟನಗಳನ್ನು ನೆನಪಿಸಿದರು.</p>.<p>ಕಾಲೇಜು ಅಭಿವೃದ್ಧಿ ಸಮಿತಿ ಉಪಾಧ್ಯಕ್ಷ ವಿಜಯ ಗದ್ದನಕೇರಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಪ್ರಾಚಾರ್ಯ ಸಿಕಂದರ್ ಧನ್ನೂರ ಅಧ್ಯಕ್ಷತೆ ವಹಿಸಿ ಮಾತನಾಡಿದರು.</p>.<p>ಕಾಲೇಜು ಅಭಿವೃದ್ಧಿ ಸಮಿತಿ ಸದಸ್ಯರಾದ ಎಸ್. ಜಿ. ಎಮ್ಮಿ, ರಾಣಿ ತೋಪಲಕಟ್ಟಿ, ದೇವು ಡಂಬಳ ಪ್ರಾಧ್ಯಾಪಕರ ಸುರೇಶ ಎಚ್. ಎಸ್. ಉಪಸ್ಥಿತರಿದ್ದರು. ಸಾಂಸ್ಕೃತಿಕ ವೇದಿಕೆ ಸಂಚಾಲಕರಾದ ಬಿ. ವೈ. ಅಲೂರ ನಿರೂಪಿಸಿದರು. ವಿದ್ಯಾರ್ಥಿನಿ ಕೀರ್ತಿ ಗಡಗಿ ಪ್ರಾರ್ಥಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹುನಗುಂದ:</strong> ನಮ್ಮ ಸಂವಿಧಾನವು ಜಗತ್ತಿನಲ್ಲಿಯೇ ಶ್ರೇಷ್ಠ ಮತ್ತು ವಿಶಿಷ್ಠ ಸಂವಿಧಾನವಾಗಿದೆ ಎಂದು ಸತ್ಯಶೋಧಕ ಸಂಘದ ರಾಜ್ಯ ಘಟಕದ ಅಧ್ಯಕ್ಷ ಪರಶುರಾಮ ಮಹಾರಾಜನವರ ಅಭಿಪ್ರಾಯಪಟ್ಟರು.</p>.<p>ಅವರು ನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಸತ್ಯಶೋಧಕ ಸಂಘದ ಸಹಯೋಗದಲ್ಲಿ ಶನಿವಾರ ನಡೆದ 'ಸಂವಿಧಾನ ಜಾಗೃತಿಯಾನ' ಕಾರ್ಯಕ್ರಮದಲ್ಲಿ ವಿಶೇಷ ಉಪನ್ಯಾಸಕರಾಗಿ ಭಾಗವಹಿಸಿ ಅವರು ಮಾತನಾಡಿದರು. </p>.<p>ಭಾರತದಲ್ಲಿ ಆಚರಣೆಯಲ್ಲಿದ್ದ ಹಲವು ಅನಿಷ್ಟ ಪದ್ಧತಿಗಳನ್ನು ತೊಲಗಿಸಿ ಸಾಮಾಜಿಕ ಸಮಾನತೆ, ಸಾಮರಸ್ಯವನ್ನು ಬೋಧಿಸುತ್ತಾ ಪ್ರಗತಿಯಡೆಗೆ ದೇಶವನ್ನು ಮುನ್ನಡೆಸುವ ಗ್ರಂಥವೇ ಸಂವಿಧಾನವಾಗಿದೆ ಎಂದ ಅವರು, ಸಂವಿಧಾನ ಶಿಲ್ಪಿ ಡಾ.ಬಿ.ಆರ್. ಅಂಬೇಡ್ಕರ್ ಅವರ ಜೀವನದ ಹಲವು ಘಟನಗಳನ್ನು ನೆನಪಿಸಿದರು.</p>.<p>ಕಾಲೇಜು ಅಭಿವೃದ್ಧಿ ಸಮಿತಿ ಉಪಾಧ್ಯಕ್ಷ ವಿಜಯ ಗದ್ದನಕೇರಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಪ್ರಾಚಾರ್ಯ ಸಿಕಂದರ್ ಧನ್ನೂರ ಅಧ್ಯಕ್ಷತೆ ವಹಿಸಿ ಮಾತನಾಡಿದರು.</p>.<p>ಕಾಲೇಜು ಅಭಿವೃದ್ಧಿ ಸಮಿತಿ ಸದಸ್ಯರಾದ ಎಸ್. ಜಿ. ಎಮ್ಮಿ, ರಾಣಿ ತೋಪಲಕಟ್ಟಿ, ದೇವು ಡಂಬಳ ಪ್ರಾಧ್ಯಾಪಕರ ಸುರೇಶ ಎಚ್. ಎಸ್. ಉಪಸ್ಥಿತರಿದ್ದರು. ಸಾಂಸ್ಕೃತಿಕ ವೇದಿಕೆ ಸಂಚಾಲಕರಾದ ಬಿ. ವೈ. ಅಲೂರ ನಿರೂಪಿಸಿದರು. ವಿದ್ಯಾರ್ಥಿನಿ ಕೀರ್ತಿ ಗಡಗಿ ಪ್ರಾರ್ಥಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>