<p><strong>ಹುನಗುಂದ:</strong> ತಾಲ್ಲೂಕಿನ ಹತ್ತು ಗ್ರಾಮಗಳ ಸಂತ್ರಸ್ತರು ಸೇರಿ ತಮ್ಮ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಜೂನ್ 1 ರಂದು ಇದ್ದಲಗಿಯಿಂದ ಕೂಡಲಸಂಗಮವರಗೆ ಪಾದಯಾತ್ರೆ ಹಮ್ಮಿಕೊಳ್ಳಲಾಗುವುದು ಎಂದು ತಾಲ್ಲೂಕಿನ ಇದ್ದಲಗಿ ಗ್ರಾಮದಲ್ಲಿ 22 ದಿನಗಳಿಂದ ಧರಣಿ ನಿರತ ಸಂತ್ರಸ್ತರು ನಿರ್ಧರಿಸಿದ್ದಾರೆ.</p>.<p>ಗ್ರಾಮದಲ್ಲಿ ಅನಿರ್ದಿಷ್ಟಾವಧಿ ಧರಣಿ ನಿರತ ಸಂತ್ರಸ್ತರು ಸಭೆ ಸೇರಿ ಈ ತೀರ್ಮಾನ ಕೈಗೊಂಡಿದ್ದು, ಸಭೆಯಲ್ಲಿ ಅಂದಾಜು 400ಕ್ಕೂ ಹೆಚ್ಚು ಸಂತ್ರಸ್ತರು ಪಾಲ್ಗೊಂಡಿದ್ದರು.</p>.<p>ನಾರಾಯಣಪುರ ಜಲಾಶಯದ ಹಿನ್ನೀರು ಮತ್ತು ಮಲಪ್ರಭಾ ನದಿ ಪ್ರವಾಹದಿಂದ ಬಾಧಿತ ಸಂತ್ರಸ್ತರಿಗೆ ಪ್ರಮುಖವಾಗಿ ಎರಡನೇ ಹಂತದ ಹಣ ಬಿಡುಗಡೆ ಮಾಡುವುದು, ನಿವೇಶನಕ್ಕೆ ಒಂದು ಗುಂಟೆ ಬದಲಿ ನಾಲ್ಕು ಗುಂಟೆ ಜಮೀನು ನೀಡಬೇಕು ಎಂಬುದು ಆಗ್ರಹವಾಗಿದೆ.</p>.<p>ಗ್ರಾಮದಲ್ಲಿರುವ ಪುನರ್ವಸತಿ ಮತ್ತು ಪುನರ್ ನಿರ್ಮಾಣ ಕೇಂದ್ರದಲ್ಲಿ ಮೂಲ ಸೌಕರ್ಯ ಕಲ್ಪಿಸುವುದು ಸೇರಿದಂತೆ ಇತರೆ ಬೇಡಿಕೆಗಳನ್ನು ಶೀಘ್ರದಲ್ಲಿ ಈಡೇರಿಸಬೇಕು ಎಂದು ಸಂತ್ರಸ್ತರು ಒತ್ತಾಯಿಸಿದರು.</p>.<p>ಪ್ರಮುಖವಾಗಿ ಶಿಥಿಲಾವಸ್ಥೆಯಲ್ಲಿರುವ ತಗಡಿನ ಶೆಡ್ಗಳಿಗೆ ಪರ್ಯಾಯವಾಗಿ ಹೊಸ ಶೆಡ್ ನಿರ್ಮಿಸುವುದಕ್ಕೆ ಸಂಬಂಧಪಟ್ಟ ಇಲಾಖೆ ಅಧಿಕಾರಿಗಳು ಅನುದಾನವಿಲ್ಲ ಎಂಬ ನೆಪ ಹೇಳುತ್ತಿರುವುದಕ್ಕೆ ಸಂತ್ರಸ್ತರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.</p>.<p>ಈಗಿರುವ ಶೆಡ್ಗಳು ಹಾಳಾಗಿರುವುದರಿಂದ ಹೊಸ ಶೆಡ್ ನಿರ್ಮಾಣ ಮಾಡಿಕೊಡಬೇಕು ಎಂದು ಹೋರಾಟವನ್ನು ತೀವ್ರಗೊಳಿಸಲು ಸಂತ್ರಸ್ತರು ತೀರ್ಮಾನಿಸಿದ್ದಾರೆ.</p>.<p>ಮುಖಂಡರಾದ ಬಸವರಾಜ ಬಡ್ಡಿ, ಕಲ್ಲಪ್ಪ ಆನೇಹೊಸೂರ, ಭೀಮಪ್ಪ ಅಡಿಹಾಳ, ಮಹಾಂತೇಶ ನಾಡಗೌಡರ, ಭೀಮಪ್ಪ ಗೋನಾಳ, ಶರಣಪ್ಪ ಮುಳ್ಳೂರ, ಹಸನ್ ಸಾಹೇಬ್ ಪಿಂಜಾರ್, ಸರೋಜಮ್ಮ ಹಿರೇಮಠ, ಮೀನಾಕ್ಷಮ್ಮ ಗಂಜಿಹಾಳ ಪಾಲ್ಗೊಂಡಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260528-19-1243221473</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹುನಗುಂದ:</strong> ತಾಲ್ಲೂಕಿನ ಹತ್ತು ಗ್ರಾಮಗಳ ಸಂತ್ರಸ್ತರು ಸೇರಿ ತಮ್ಮ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಜೂನ್ 1 ರಂದು ಇದ್ದಲಗಿಯಿಂದ ಕೂಡಲಸಂಗಮವರಗೆ ಪಾದಯಾತ್ರೆ ಹಮ್ಮಿಕೊಳ್ಳಲಾಗುವುದು ಎಂದು ತಾಲ್ಲೂಕಿನ ಇದ್ದಲಗಿ ಗ್ರಾಮದಲ್ಲಿ 22 ದಿನಗಳಿಂದ ಧರಣಿ ನಿರತ ಸಂತ್ರಸ್ತರು ನಿರ್ಧರಿಸಿದ್ದಾರೆ.</p>.<p>ಗ್ರಾಮದಲ್ಲಿ ಅನಿರ್ದಿಷ್ಟಾವಧಿ ಧರಣಿ ನಿರತ ಸಂತ್ರಸ್ತರು ಸಭೆ ಸೇರಿ ಈ ತೀರ್ಮಾನ ಕೈಗೊಂಡಿದ್ದು, ಸಭೆಯಲ್ಲಿ ಅಂದಾಜು 400ಕ್ಕೂ ಹೆಚ್ಚು ಸಂತ್ರಸ್ತರು ಪಾಲ್ಗೊಂಡಿದ್ದರು.</p>.<p>ನಾರಾಯಣಪುರ ಜಲಾಶಯದ ಹಿನ್ನೀರು ಮತ್ತು ಮಲಪ್ರಭಾ ನದಿ ಪ್ರವಾಹದಿಂದ ಬಾಧಿತ ಸಂತ್ರಸ್ತರಿಗೆ ಪ್ರಮುಖವಾಗಿ ಎರಡನೇ ಹಂತದ ಹಣ ಬಿಡುಗಡೆ ಮಾಡುವುದು, ನಿವೇಶನಕ್ಕೆ ಒಂದು ಗುಂಟೆ ಬದಲಿ ನಾಲ್ಕು ಗುಂಟೆ ಜಮೀನು ನೀಡಬೇಕು ಎಂಬುದು ಆಗ್ರಹವಾಗಿದೆ.</p>.<p>ಗ್ರಾಮದಲ್ಲಿರುವ ಪುನರ್ವಸತಿ ಮತ್ತು ಪುನರ್ ನಿರ್ಮಾಣ ಕೇಂದ್ರದಲ್ಲಿ ಮೂಲ ಸೌಕರ್ಯ ಕಲ್ಪಿಸುವುದು ಸೇರಿದಂತೆ ಇತರೆ ಬೇಡಿಕೆಗಳನ್ನು ಶೀಘ್ರದಲ್ಲಿ ಈಡೇರಿಸಬೇಕು ಎಂದು ಸಂತ್ರಸ್ತರು ಒತ್ತಾಯಿಸಿದರು.</p>.<p>ಪ್ರಮುಖವಾಗಿ ಶಿಥಿಲಾವಸ್ಥೆಯಲ್ಲಿರುವ ತಗಡಿನ ಶೆಡ್ಗಳಿಗೆ ಪರ್ಯಾಯವಾಗಿ ಹೊಸ ಶೆಡ್ ನಿರ್ಮಿಸುವುದಕ್ಕೆ ಸಂಬಂಧಪಟ್ಟ ಇಲಾಖೆ ಅಧಿಕಾರಿಗಳು ಅನುದಾನವಿಲ್ಲ ಎಂಬ ನೆಪ ಹೇಳುತ್ತಿರುವುದಕ್ಕೆ ಸಂತ್ರಸ್ತರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.</p>.<p>ಈಗಿರುವ ಶೆಡ್ಗಳು ಹಾಳಾಗಿರುವುದರಿಂದ ಹೊಸ ಶೆಡ್ ನಿರ್ಮಾಣ ಮಾಡಿಕೊಡಬೇಕು ಎಂದು ಹೋರಾಟವನ್ನು ತೀವ್ರಗೊಳಿಸಲು ಸಂತ್ರಸ್ತರು ತೀರ್ಮಾನಿಸಿದ್ದಾರೆ.</p>.<p>ಮುಖಂಡರಾದ ಬಸವರಾಜ ಬಡ್ಡಿ, ಕಲ್ಲಪ್ಪ ಆನೇಹೊಸೂರ, ಭೀಮಪ್ಪ ಅಡಿಹಾಳ, ಮಹಾಂತೇಶ ನಾಡಗೌಡರ, ಭೀಮಪ್ಪ ಗೋನಾಳ, ಶರಣಪ್ಪ ಮುಳ್ಳೂರ, ಹಸನ್ ಸಾಹೇಬ್ ಪಿಂಜಾರ್, ಸರೋಜಮ್ಮ ಹಿರೇಮಠ, ಮೀನಾಕ್ಷಮ್ಮ ಗಂಜಿಹಾಳ ಪಾಲ್ಗೊಂಡಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260528-19-1243221473</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>