<p>ಹುನಗುಂದ: ತಾಲ್ಲೂಕಿನ ಇದ್ದಲಗಿ ಗ್ರಾಮದ ಸಂತ್ರಸ್ತರು ಮೂಲಸೌಲಭ್ಯ ಕಲ್ಪಿಸುವುದು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ನಡೆಸುತ್ತಿರುವ ಅನಿರ್ದಿಷ್ಟಾವಧಿ ಧರಣಿ ಎರಡನೇ ದಿನವಾದ ಗುರುವಾರವು ಮುಂದುವರಿಯಿತು.</p>.<p>ಧರಣಿ ಸ್ಥಳಕ್ಕೆ ಪುನರ್ವಸತಿ ಹಾಗೂ ಪುನರ್ ನಿರ್ಮಾಣ (ಆರ್ಆಂಡ್ಆರ್) ಇಲಾಖೆಯ ಸಹಾಯಕ ಎಂಜನಿಯರ್ ಕೆ. ಎನ್ಅ ಒಡೆಯರ್ ಭೇಟಿ ನೀಡಿ ಸಂತ್ರಸ್ತರನ್ನು ಉದ್ದೇಶಿಸಿ ಮಾತನಾಡಿ, ಗ್ರಾಮದಲ್ಲಿ ಹೊಸ ಶೆಡ್ಗಳ ನಿರ್ಮಾಣಕ್ಕೆ ₹73 ಲಕ್ಷದ ಪ್ರಸ್ತಾವ ಸಲ್ಲಿಸಲಾಗಿದ್ದು, ಇಲಾಖೆಯಲ್ಲಿ ಅನುದಾನವಿಲ್ಲ. ಈ ವಿಷಯವನ್ನು ಸ್ಥಳೀಯ ಶಾಸಕರು ಹಾಗೂ ಮೇಲಾಧಿಕಾರಿಗಳ ಗಮನಕ್ಕೆ ತರಲಾಗಿದೆ. ಅನುದಾನ ಮಂಜೂರು ಆದ ತಕ್ಷಣ ಕೆಲಸ ಆರಂಭಿಸಲಾಗುವುದು ಎಂದು ಸಂತ್ರಸ್ತರಿಗೆ ಭರವಸೆ ನೀಡಿದರು. ಆದರೂ ನಮ್ಮ ಬೇಡಿಕೆಗಳು ಈಡೇರಿಸುವ ವರಗೆ ಧರಣಿ ಸ್ಥಗಿತಗೊಳಿಸುವುದಿಲ್ಲ ಎಂದು ಹೇಳಿದರು.</p>.<p>ಹಗಲು ವೇಳೆ ಕೃಷಿ ಸೇರಿದಂತೆ ಕೆಲಸ ಕಾರ್ಯಗಳಿಗೆ ಹೋಗಿದ್ದ ಸಂತ್ರಸ್ತರು ಬುಧವಾರ ರಾತ್ರಿ 7 ರಿಂದ 10 ರ ವರೆಗೆ ಅನಿರ್ದಿಷ್ಟಾವಧಿ ಧರಣಿಯಲ್ಲಿ ಪಾಲ್ಗೊಂಡು ತಮ್ಮ ಬೆಂಬಲ ವ್ಯಕ್ತಪಡಿಸಿದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260508-19-426354496</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಹುನಗುಂದ: ತಾಲ್ಲೂಕಿನ ಇದ್ದಲಗಿ ಗ್ರಾಮದ ಸಂತ್ರಸ್ತರು ಮೂಲಸೌಲಭ್ಯ ಕಲ್ಪಿಸುವುದು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ನಡೆಸುತ್ತಿರುವ ಅನಿರ್ದಿಷ್ಟಾವಧಿ ಧರಣಿ ಎರಡನೇ ದಿನವಾದ ಗುರುವಾರವು ಮುಂದುವರಿಯಿತು.</p>.<p>ಧರಣಿ ಸ್ಥಳಕ್ಕೆ ಪುನರ್ವಸತಿ ಹಾಗೂ ಪುನರ್ ನಿರ್ಮಾಣ (ಆರ್ಆಂಡ್ಆರ್) ಇಲಾಖೆಯ ಸಹಾಯಕ ಎಂಜನಿಯರ್ ಕೆ. ಎನ್ಅ ಒಡೆಯರ್ ಭೇಟಿ ನೀಡಿ ಸಂತ್ರಸ್ತರನ್ನು ಉದ್ದೇಶಿಸಿ ಮಾತನಾಡಿ, ಗ್ರಾಮದಲ್ಲಿ ಹೊಸ ಶೆಡ್ಗಳ ನಿರ್ಮಾಣಕ್ಕೆ ₹73 ಲಕ್ಷದ ಪ್ರಸ್ತಾವ ಸಲ್ಲಿಸಲಾಗಿದ್ದು, ಇಲಾಖೆಯಲ್ಲಿ ಅನುದಾನವಿಲ್ಲ. ಈ ವಿಷಯವನ್ನು ಸ್ಥಳೀಯ ಶಾಸಕರು ಹಾಗೂ ಮೇಲಾಧಿಕಾರಿಗಳ ಗಮನಕ್ಕೆ ತರಲಾಗಿದೆ. ಅನುದಾನ ಮಂಜೂರು ಆದ ತಕ್ಷಣ ಕೆಲಸ ಆರಂಭಿಸಲಾಗುವುದು ಎಂದು ಸಂತ್ರಸ್ತರಿಗೆ ಭರವಸೆ ನೀಡಿದರು. ಆದರೂ ನಮ್ಮ ಬೇಡಿಕೆಗಳು ಈಡೇರಿಸುವ ವರಗೆ ಧರಣಿ ಸ್ಥಗಿತಗೊಳಿಸುವುದಿಲ್ಲ ಎಂದು ಹೇಳಿದರು.</p>.<p>ಹಗಲು ವೇಳೆ ಕೃಷಿ ಸೇರಿದಂತೆ ಕೆಲಸ ಕಾರ್ಯಗಳಿಗೆ ಹೋಗಿದ್ದ ಸಂತ್ರಸ್ತರು ಬುಧವಾರ ರಾತ್ರಿ 7 ರಿಂದ 10 ರ ವರೆಗೆ ಅನಿರ್ದಿಷ್ಟಾವಧಿ ಧರಣಿಯಲ್ಲಿ ಪಾಲ್ಗೊಂಡು ತಮ್ಮ ಬೆಂಬಲ ವ್ಯಕ್ತಪಡಿಸಿದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260508-19-426354496</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>