<p><strong>ಹುನಗುಂದ</strong>: ನಗರದ ತಾಲ್ಲೂಕು ಪಂಚಾಯಿತಿ ಕಚೇರಿ ಎದುರು ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಗ್ರಾಮೀಣ ಕೂಲಿ ಕಾರ್ಮಿಕರ ಸಂಘಟನೆ (ಗ್ರಾಕೂಸ್) ವತಿಯಿಂದ ಗುರುವಾರ ಪ್ರತಿಭಟನೆ ನಡೆಸಲಾಯಿತು.</p>.<p>ಜಿಲ್ಲಾ ಗ್ರಾಕೂಸ್ ಮುಖಂಡ ಮಹಾಂತೇಶ ಹೊಸಮನಿ ಮಾತನಾಡಿ, ‘ಹುನಗುಂದ ಮತ್ತು ಇಳಕಲ್ ತಾಲ್ಲೂಕಿನ ಬಹುತೇಕ ಪಂಚಾಯಿತಿ ವ್ಯಾಪ್ತಿಯಲ್ಲಿನ ಗ್ರಾಮಗಳಲ್ಲಿ ಕಳೆದ ನಾಲ್ಕು ತಿಂಗಳಿಂದ ಕಾರ್ಮಿಕರಿಗೆ ಕೆಲಸ ನೀಡಿಲ್ಲ. ಹಿಂದಿನ ಅವಧಿಯಲ್ಲಿ ಕೆಲಸ ಮಾಡಿದ್ದಕ್ಕೆ ಕೂಲಿ ಜಮೆಯಾಗಿಲ್ಲ. ವೈದ್ಯಕೀಯ ವೆಚ್ಚ, ನಿರುದ್ಯೋಗ ಭತ್ಯೆ, ಸೇರಿದಂತೆ ನಮ್ಮ ವಿವಿಧ ಬೇಡಿಕೆಗಳನ್ನು ಈಡೇರಿಸಿಲ್ಲ’ ದೂರಿದರು.</p>.<p>ಪ್ರಮುಖವಾಗಿ ಹುನಗುಂದ ತಾಲ್ಲೂಕಿನ ಬಿಂಜವಾಡಗಿ, ಬಿಸಲದಿನ್ನಿ, ಹಾವರಗಿ, ಬೆಳಗಲ್, ಹಿರೇಮಳಗಾವಿ, ಮುಗನೂರು, ಅಮರಾವತಿ, ಹಿರಾಬಾದವಾಡಗಿ, ರಕ್ಕಸಗಿ ಹಾಗೂ ಧನ್ನೂರ ಹಾಗೂ ಇಳಕಲ್ ತಾಲ್ಲೂಕಿನ ನಂದವಾಡಗಿ, ಹಿರೇಸಿಂಗನಗುತ್ತಿ, ಕಂದಗಲ್ಲ, ಹಿರೇಓತಗೇರಿ, ಕರಡಿ, ಬೂದಿಹಾಳ, ಜಂಬಲದಿನ್ನಿ, ಗುಡೂರ, ಕೆಲೂರು, ಚಿಕನಾಳ ಹಾಗೂ ಹಿರೇಕೊಡಗಲಿ ಗ್ರಾಮ ಪಂಚಾಯಿತಿ ವ್ಯಾಪ್ತಿಗಳಲ್ಲಿನ ಗ್ರಾಮಗಳಲ್ಲಿ ನರೇಗಾ ಯೋಜನೆಗೆ ಸಂಬಂಧಿಸಿದಂತೆ ಕೂಲಿ ಕಾರ್ಮಿಕರ ಪ್ರಮುಖ ಸಮಸ್ಯೆಗಳನ್ನು ಪರಿಹರಿಸಬೇಕು ಎಂದು ಒತ್ತಾಯಿಸಿದರು.</p>.<p>ನಮ್ಮ ಬೇಡಿಕೆ ಹಾಗೂ ಸಮಸ್ಯೆಗಳನ್ನು ಮುಂದಿನ 2-3 ದಿನಗಳಲ್ಲಿ ಬಗೆಹರಿಸಬೇಕು. ಒಂದು ವೇಳೆ ನಿರ್ಲಕ್ಷಿಸಿದರೆ ಜಿಲ್ಲಾ ಪಂಚಾಯಿತಿ ಸಿಇಒ ಹಾಗೂ ಇಲಾಖೆ ಆಯುಕ್ತರಿಗೆ ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಹಾಗೂ ಪಂಚಾಯಿತಿ ಪಿಡಿಒಗಳ ವಿರುದ್ಧ ದೂರು ನೀಡಲಾಗುವುದು ಎಂದು ಎಚ್ಚರಿಸಿದರು.</p>.<p>ಕೂಲಿ ಕಾರ್ಮಿಕ ಮುಖಂಡರು ತಮ್ಮ ಬೇಡಿಕೆಗಳನ್ನು ಒಳಗೊಂಡ ಮನವಿ ಪತ್ರವನ್ನು ತಾಲ್ಲೂಕು ಕಾರ್ಯನಿರ್ವಾಹಕ ಅಧಿಕಾರಿ ಹಾಗೂ ನರೇಗಾ ಯೋಜನೆ ನಿರ್ದೇಶಕರಿಗೆ ಮನವಿ ಸಲ್ಲಿಸಿದರು. ನಿಮ್ಮ ಬೇಡಿಕೆಗಳನ್ನು ಶೀಘ್ರದಲ್ಲಿ ಈಡೇರಿಸಲಾಗುವುದು ಎಂದು ಅವರು ಭರವಸೆ ನೀಡಿದರು.</p>.<p>ಹುನಗುಂದ ಮತ್ತು ಇಳಕಲ್ ತಾಲ್ಲೂಕು ಪಂಚಾಯಿತಿ ಇಒ ಮುರುಳಿಧರ ದೇಶಪಾಂಡೆ, ನರೇಗಾ ಯೋಜನೆ ನಿರ್ದೇಶಕ ಮಹಾಂತೇಶ ಚಲವಾದಿ, ಈರಣ್ಣ ಚಿನಿವಾಲರ, ಕಾರ್ಮಿಕ ಮುಖಂಡರಾದ ಶಾರದಾ ಪರನಗೌಡರ, ಯಮನೂರ ಕಡಿವಾಲ, ವಿಜಯಲಕ್ಷ್ಮಿ ಜಾಲಿಹಾಳ, ಶಶಿಕುಮಾರ ಹರಿಜನ, ಮಹಾದೇವಿ ಹಡಪದ, ನೀಲಮ್ಮ ಕಟ್ಟಿಮನಿ, ಷರೀಫ್ ಚಪ್ಪರಬಂದ, ಮಲ್ಲು ಅಂತರಗೊಂಡ, ರೇಣುಕಾ ತುಪ್ಪದ, ಸುಜಾತ ಚವ್ಹಾಣ, ಸರೋಜ ಭದ್ರಶೆಟ್ಟಿ ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260515-19-137903791</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹುನಗುಂದ</strong>: ನಗರದ ತಾಲ್ಲೂಕು ಪಂಚಾಯಿತಿ ಕಚೇರಿ ಎದುರು ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಗ್ರಾಮೀಣ ಕೂಲಿ ಕಾರ್ಮಿಕರ ಸಂಘಟನೆ (ಗ್ರಾಕೂಸ್) ವತಿಯಿಂದ ಗುರುವಾರ ಪ್ರತಿಭಟನೆ ನಡೆಸಲಾಯಿತು.</p>.<p>ಜಿಲ್ಲಾ ಗ್ರಾಕೂಸ್ ಮುಖಂಡ ಮಹಾಂತೇಶ ಹೊಸಮನಿ ಮಾತನಾಡಿ, ‘ಹುನಗುಂದ ಮತ್ತು ಇಳಕಲ್ ತಾಲ್ಲೂಕಿನ ಬಹುತೇಕ ಪಂಚಾಯಿತಿ ವ್ಯಾಪ್ತಿಯಲ್ಲಿನ ಗ್ರಾಮಗಳಲ್ಲಿ ಕಳೆದ ನಾಲ್ಕು ತಿಂಗಳಿಂದ ಕಾರ್ಮಿಕರಿಗೆ ಕೆಲಸ ನೀಡಿಲ್ಲ. ಹಿಂದಿನ ಅವಧಿಯಲ್ಲಿ ಕೆಲಸ ಮಾಡಿದ್ದಕ್ಕೆ ಕೂಲಿ ಜಮೆಯಾಗಿಲ್ಲ. ವೈದ್ಯಕೀಯ ವೆಚ್ಚ, ನಿರುದ್ಯೋಗ ಭತ್ಯೆ, ಸೇರಿದಂತೆ ನಮ್ಮ ವಿವಿಧ ಬೇಡಿಕೆಗಳನ್ನು ಈಡೇರಿಸಿಲ್ಲ’ ದೂರಿದರು.</p>.<p>ಪ್ರಮುಖವಾಗಿ ಹುನಗುಂದ ತಾಲ್ಲೂಕಿನ ಬಿಂಜವಾಡಗಿ, ಬಿಸಲದಿನ್ನಿ, ಹಾವರಗಿ, ಬೆಳಗಲ್, ಹಿರೇಮಳಗಾವಿ, ಮುಗನೂರು, ಅಮರಾವತಿ, ಹಿರಾಬಾದವಾಡಗಿ, ರಕ್ಕಸಗಿ ಹಾಗೂ ಧನ್ನೂರ ಹಾಗೂ ಇಳಕಲ್ ತಾಲ್ಲೂಕಿನ ನಂದವಾಡಗಿ, ಹಿರೇಸಿಂಗನಗುತ್ತಿ, ಕಂದಗಲ್ಲ, ಹಿರೇಓತಗೇರಿ, ಕರಡಿ, ಬೂದಿಹಾಳ, ಜಂಬಲದಿನ್ನಿ, ಗುಡೂರ, ಕೆಲೂರು, ಚಿಕನಾಳ ಹಾಗೂ ಹಿರೇಕೊಡಗಲಿ ಗ್ರಾಮ ಪಂಚಾಯಿತಿ ವ್ಯಾಪ್ತಿಗಳಲ್ಲಿನ ಗ್ರಾಮಗಳಲ್ಲಿ ನರೇಗಾ ಯೋಜನೆಗೆ ಸಂಬಂಧಿಸಿದಂತೆ ಕೂಲಿ ಕಾರ್ಮಿಕರ ಪ್ರಮುಖ ಸಮಸ್ಯೆಗಳನ್ನು ಪರಿಹರಿಸಬೇಕು ಎಂದು ಒತ್ತಾಯಿಸಿದರು.</p>.<p>ನಮ್ಮ ಬೇಡಿಕೆ ಹಾಗೂ ಸಮಸ್ಯೆಗಳನ್ನು ಮುಂದಿನ 2-3 ದಿನಗಳಲ್ಲಿ ಬಗೆಹರಿಸಬೇಕು. ಒಂದು ವೇಳೆ ನಿರ್ಲಕ್ಷಿಸಿದರೆ ಜಿಲ್ಲಾ ಪಂಚಾಯಿತಿ ಸಿಇಒ ಹಾಗೂ ಇಲಾಖೆ ಆಯುಕ್ತರಿಗೆ ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಹಾಗೂ ಪಂಚಾಯಿತಿ ಪಿಡಿಒಗಳ ವಿರುದ್ಧ ದೂರು ನೀಡಲಾಗುವುದು ಎಂದು ಎಚ್ಚರಿಸಿದರು.</p>.<p>ಕೂಲಿ ಕಾರ್ಮಿಕ ಮುಖಂಡರು ತಮ್ಮ ಬೇಡಿಕೆಗಳನ್ನು ಒಳಗೊಂಡ ಮನವಿ ಪತ್ರವನ್ನು ತಾಲ್ಲೂಕು ಕಾರ್ಯನಿರ್ವಾಹಕ ಅಧಿಕಾರಿ ಹಾಗೂ ನರೇಗಾ ಯೋಜನೆ ನಿರ್ದೇಶಕರಿಗೆ ಮನವಿ ಸಲ್ಲಿಸಿದರು. ನಿಮ್ಮ ಬೇಡಿಕೆಗಳನ್ನು ಶೀಘ್ರದಲ್ಲಿ ಈಡೇರಿಸಲಾಗುವುದು ಎಂದು ಅವರು ಭರವಸೆ ನೀಡಿದರು.</p>.<p>ಹುನಗುಂದ ಮತ್ತು ಇಳಕಲ್ ತಾಲ್ಲೂಕು ಪಂಚಾಯಿತಿ ಇಒ ಮುರುಳಿಧರ ದೇಶಪಾಂಡೆ, ನರೇಗಾ ಯೋಜನೆ ನಿರ್ದೇಶಕ ಮಹಾಂತೇಶ ಚಲವಾದಿ, ಈರಣ್ಣ ಚಿನಿವಾಲರ, ಕಾರ್ಮಿಕ ಮುಖಂಡರಾದ ಶಾರದಾ ಪರನಗೌಡರ, ಯಮನೂರ ಕಡಿವಾಲ, ವಿಜಯಲಕ್ಷ್ಮಿ ಜಾಲಿಹಾಳ, ಶಶಿಕುಮಾರ ಹರಿಜನ, ಮಹಾದೇವಿ ಹಡಪದ, ನೀಲಮ್ಮ ಕಟ್ಟಿಮನಿ, ಷರೀಫ್ ಚಪ್ಪರಬಂದ, ಮಲ್ಲು ಅಂತರಗೊಂಡ, ರೇಣುಕಾ ತುಪ್ಪದ, ಸುಜಾತ ಚವ್ಹಾಣ, ಸರೋಜ ಭದ್ರಶೆಟ್ಟಿ ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260515-19-137903791</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>