ಕೇಂದ್ರ ಸರ್ಕಾರದ ಎಂಎಸ್ ಪಿ ಹಾಗೂ ಫ್ರೂಟ್ಸ್ ತಂತ್ರಾಂಶದಲ್ಲಿ ಉಂಟಾದ ತಾಂತ್ರಿಕ ಸಮಸ್ಯೆಯಿಂದಾಗಿ ಹಣ ಸಂದಾಯ ವಿಳಂಬವಾಗಿದೆ. ಹೀಗಾಗಿ ರೈತರ ಖಾತೆಗೆ ಹಣ ಜಮೆಯಾಗಿಲ್ಲ. ಈ ಬಗ್ಗೆ ಮೇಲಧಿಕಾರಿಗಳ ಗಮನಕ್ಕೆ ತಂದಿರುವೆ. ಒಂದರೆಡು ದಿನಗಳಲ್ಲಿ ರೈತರ ಖಾತೆಗೆ ಹಣ ಜಮೆಯಾಗುವ ವಿಶ್ವಾಸ ಇದೆ ಎಂದು ಕೆಎಸ್ಎಫ್ ಸಿ ಜಿಲ್ಲಾ ವ್ಯವಸ್ಥಾಪಕಿ ಸುಪ್ರಿಯಾ ಹೇಳಿದರು.