<p><strong>ಹುನಗುಂದ:</strong> ಪಟ್ಟಣದ ಪ್ರಾಥಮಿಕ ಸಹಕಾರಿ ಕೃಷಿ ಮತ್ತು ಗ್ರಾಮೀಣ ಅಭಿವೃದ್ಧಿ ಬ್ಯಾಂಕ್ (ಪಿಎಲ್ಡಿ)ಗೆ ನೂತನ ಅಧ್ಯಕ್ಷರಾಗಿ ಕಾಂಗ್ರೆಸ್ ಬೆಂಬಲಿತ ಜಡಿಯಪ್ಪಗೌಡ ಮತ್ತು ಉಪಾಧ್ಯಕ್ಷರಾಗಿ ಪ್ರಭಾಕರ ನಾಗರಾಳ ಅವಿರೋಧ ಆಯ್ಕೆಯಾದರು.</p>.<p>ಅಧ್ಯಕ್ಷ ಸ್ಥಾನಕ್ಕೆ ಚಿಕ್ಕಆದಾಪೂರ ಸಾಮಾನ್ಯ ಕ್ಷೇತ್ರದಿಂದ ಆಯ್ಕೆಯಾಗಿದ್ದ ಶಿವನಗೌಡ ಭೀಮನಗೌಡ ಜಡಿಯಪ್ಪಗೌಡ ಹಾಗೂ ಉಪಾಧ್ಯಕ್ಷ ಸ್ಥಾನಕ್ಕೆ ಅಮೀನಗಡ ಸಾಮಾನ್ಯ ಕ್ಷೇತ್ರದಿಂದ ಆಯ್ಕೆಯಾಗಿದ್ದ ಪ್ರಭಾಕರ ಸಿದ್ರಾಮಪ್ಪ ನಾಗರಾಳ ನಾಮಪತ್ರ ಸಲ್ಲಿಸಿದರು.</p>.<p>ಬೇರೆ ಯಾರೂ ನಾಮಪತ್ರ ಸಲ್ಲಿಸದ್ದರಿಂದ ನಾಮಪತ್ರ ಸಲ್ಲಿಸಿದ ಇಬ್ಬರು ಅಭ್ಯರ್ಥಿಗಳು ಅಧ್ಯಕ್ಷ ಮತ್ತು ಉಪಾಧ್ಯಕ್ಷ ಸ್ಥಾನಕ್ಕೆ ಅವಿರೋಧವಾಗಿ ಆಯ್ಕೆಯಾಗಿದ್ದಾರೆ ಎಂದು ಚುನಾವಣೆ ಅಧಿಕಾರಿ ಮುರುಳೀಧರ ದೇಶಪಾಂಡೆ ಘೋಷಿಸಿದರು.</p>.<p>ಶಾಸಕ ವಿಜಯಾನಂದ ಕಾಶಪ್ಪನವರ ಮಾತನಾಡಿ, ‘ಚುನಾವಣೆಯಲ್ಲಿ ಕಾಂಗ್ರೆಸ್ ಬೆಂಬಲಿತ ಹತ್ತು ಅಭ್ಯರ್ಥಿಗಳು ಅವಿರೋಧ ಆಯ್ಕೆಯಾಗಿದ್ದರು. ಅವುಗಳಲ್ಲಿನ 3-4 ಕ್ಷೇತ್ರಕ್ಕೆ ಬಿಜೆಪಿ ಬೆಂಬಲಿತ ಅಭ್ಯರ್ಥಿಗಳು ಇರಲಿಲ್ಲ. ಇನ್ನುಳಿದ ಕಡೆ ನಾಮಪತ್ರ ಸಲ್ಲಿಸಿದವರು ಹಿಂಪಡೆದರು. ಹೀಗಾಗಿ ಕ್ಷೇತ್ರದಲ್ಲಿ ಬಿಜೆಪಿ ಗತಿ ಎಲ್ಲಿಗೆ ಬಂದಿದೆ ಎಂಬುದು ತಿಳಿಯುತ್ತದೆ’ ಎಂದು ಹೇಳಿದರು.</p>.<p>‘ಹಿಂದಿನ ಅವಧಿಯಲ್ಲಿ ಕಾಂಗ್ರೆಸ್ ಬೆಂಬಲಿತರನ್ನು ಅಧ್ಯಕ್ಷರನ್ನಾಗಿ ಮಾಡಲಾಗಿತ್ತು. ಆದರೆ ಅವರು ರೈತರಿಗೆ ನ್ಯಾಯ ಕೊಡುವ ಕೆಲಸ ಮಾಡಲಿಲ್ಲ. ರೈತರ ಷೇರುಗಳನ್ನು ತಗೆದು ಹಾಕುವುದು, ರೈತರಿಗೆ ಒಂದು ರೂಪಾಯಿ ಲಾಭ ಕೊಟ್ಟಿಲ್ಲ’ ಎಂದರು. </p>.<p>ಶಿಥಿಲಾವ್ಯವಸ್ಥೆಯಲ್ಲಿರುವ ಬ್ಯಾಂಕಿನ ಕಟ್ಟಡವನ್ನು ಸರ್ಕಾರದಿಂದ ಅನುದಾನ ತಂದು ಹೊಸ ಕಟ್ಟಡ ನಿರ್ಮಿಸುವುದಾಗಿ ಭರವಸೆ ನೀಡಿದರು.</p>.<p>ಗಂಗಾಧರ ದೊಡ್ಡಮನಿ, ಚನ್ನಪ್ಪಗೌಡ ನಾಡಗೌಡ್ರ, ಮುತ್ತಣ್ಣ ಕಲಗೋಡಿ, ಬಿ.ಎ. ಆವಟಿ, ಮಾಧವ ದೇಶಪಾಂಡೆ, ಸಿದ್ಧು ಭದ್ರಶೆಟ್ಟಿ, ಸಂಗಣ್ಣ ಚೂರಿ ಹಾಗೂ ಪಿಎಲ್ ಡಿ ಬ್ಯಾಂಕಿನ ಆಡಳಿತ ಮಂಡಳಿ ಸದಸ್ಯರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹುನಗುಂದ:</strong> ಪಟ್ಟಣದ ಪ್ರಾಥಮಿಕ ಸಹಕಾರಿ ಕೃಷಿ ಮತ್ತು ಗ್ರಾಮೀಣ ಅಭಿವೃದ್ಧಿ ಬ್ಯಾಂಕ್ (ಪಿಎಲ್ಡಿ)ಗೆ ನೂತನ ಅಧ್ಯಕ್ಷರಾಗಿ ಕಾಂಗ್ರೆಸ್ ಬೆಂಬಲಿತ ಜಡಿಯಪ್ಪಗೌಡ ಮತ್ತು ಉಪಾಧ್ಯಕ್ಷರಾಗಿ ಪ್ರಭಾಕರ ನಾಗರಾಳ ಅವಿರೋಧ ಆಯ್ಕೆಯಾದರು.</p>.<p>ಅಧ್ಯಕ್ಷ ಸ್ಥಾನಕ್ಕೆ ಚಿಕ್ಕಆದಾಪೂರ ಸಾಮಾನ್ಯ ಕ್ಷೇತ್ರದಿಂದ ಆಯ್ಕೆಯಾಗಿದ್ದ ಶಿವನಗೌಡ ಭೀಮನಗೌಡ ಜಡಿಯಪ್ಪಗೌಡ ಹಾಗೂ ಉಪಾಧ್ಯಕ್ಷ ಸ್ಥಾನಕ್ಕೆ ಅಮೀನಗಡ ಸಾಮಾನ್ಯ ಕ್ಷೇತ್ರದಿಂದ ಆಯ್ಕೆಯಾಗಿದ್ದ ಪ್ರಭಾಕರ ಸಿದ್ರಾಮಪ್ಪ ನಾಗರಾಳ ನಾಮಪತ್ರ ಸಲ್ಲಿಸಿದರು.</p>.<p>ಬೇರೆ ಯಾರೂ ನಾಮಪತ್ರ ಸಲ್ಲಿಸದ್ದರಿಂದ ನಾಮಪತ್ರ ಸಲ್ಲಿಸಿದ ಇಬ್ಬರು ಅಭ್ಯರ್ಥಿಗಳು ಅಧ್ಯಕ್ಷ ಮತ್ತು ಉಪಾಧ್ಯಕ್ಷ ಸ್ಥಾನಕ್ಕೆ ಅವಿರೋಧವಾಗಿ ಆಯ್ಕೆಯಾಗಿದ್ದಾರೆ ಎಂದು ಚುನಾವಣೆ ಅಧಿಕಾರಿ ಮುರುಳೀಧರ ದೇಶಪಾಂಡೆ ಘೋಷಿಸಿದರು.</p>.<p>ಶಾಸಕ ವಿಜಯಾನಂದ ಕಾಶಪ್ಪನವರ ಮಾತನಾಡಿ, ‘ಚುನಾವಣೆಯಲ್ಲಿ ಕಾಂಗ್ರೆಸ್ ಬೆಂಬಲಿತ ಹತ್ತು ಅಭ್ಯರ್ಥಿಗಳು ಅವಿರೋಧ ಆಯ್ಕೆಯಾಗಿದ್ದರು. ಅವುಗಳಲ್ಲಿನ 3-4 ಕ್ಷೇತ್ರಕ್ಕೆ ಬಿಜೆಪಿ ಬೆಂಬಲಿತ ಅಭ್ಯರ್ಥಿಗಳು ಇರಲಿಲ್ಲ. ಇನ್ನುಳಿದ ಕಡೆ ನಾಮಪತ್ರ ಸಲ್ಲಿಸಿದವರು ಹಿಂಪಡೆದರು. ಹೀಗಾಗಿ ಕ್ಷೇತ್ರದಲ್ಲಿ ಬಿಜೆಪಿ ಗತಿ ಎಲ್ಲಿಗೆ ಬಂದಿದೆ ಎಂಬುದು ತಿಳಿಯುತ್ತದೆ’ ಎಂದು ಹೇಳಿದರು.</p>.<p>‘ಹಿಂದಿನ ಅವಧಿಯಲ್ಲಿ ಕಾಂಗ್ರೆಸ್ ಬೆಂಬಲಿತರನ್ನು ಅಧ್ಯಕ್ಷರನ್ನಾಗಿ ಮಾಡಲಾಗಿತ್ತು. ಆದರೆ ಅವರು ರೈತರಿಗೆ ನ್ಯಾಯ ಕೊಡುವ ಕೆಲಸ ಮಾಡಲಿಲ್ಲ. ರೈತರ ಷೇರುಗಳನ್ನು ತಗೆದು ಹಾಕುವುದು, ರೈತರಿಗೆ ಒಂದು ರೂಪಾಯಿ ಲಾಭ ಕೊಟ್ಟಿಲ್ಲ’ ಎಂದರು. </p>.<p>ಶಿಥಿಲಾವ್ಯವಸ್ಥೆಯಲ್ಲಿರುವ ಬ್ಯಾಂಕಿನ ಕಟ್ಟಡವನ್ನು ಸರ್ಕಾರದಿಂದ ಅನುದಾನ ತಂದು ಹೊಸ ಕಟ್ಟಡ ನಿರ್ಮಿಸುವುದಾಗಿ ಭರವಸೆ ನೀಡಿದರು.</p>.<p>ಗಂಗಾಧರ ದೊಡ್ಡಮನಿ, ಚನ್ನಪ್ಪಗೌಡ ನಾಡಗೌಡ್ರ, ಮುತ್ತಣ್ಣ ಕಲಗೋಡಿ, ಬಿ.ಎ. ಆವಟಿ, ಮಾಧವ ದೇಶಪಾಂಡೆ, ಸಿದ್ಧು ಭದ್ರಶೆಟ್ಟಿ, ಸಂಗಣ್ಣ ಚೂರಿ ಹಾಗೂ ಪಿಎಲ್ ಡಿ ಬ್ಯಾಂಕಿನ ಆಡಳಿತ ಮಂಡಳಿ ಸದಸ್ಯರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>