<p><strong>ಹುನಗುಂದ</strong>: ಪಟ್ಟಣವು ಸೇರಿದಂತೆ ತಾಲ್ಲೂಕಿನ ಗ್ರಾಮೀಣ ಪ್ರದೇಶದ ಕೆಲವೆಡೆ ಗುರುವಾರ ಸಂಜೆ ಗುಡುಗು, ಗಾಳಿ ಸಹಿತ 30 ನಿಮಿಷಗಳ ಕಾಲ ಮಳೆ ಸುರಿಯಿತು. ಹುನಗುಂದ ಪಟ್ಟಣದ ಹೊರ ವಲಯದ ರಾಷ್ಟ್ರೀಯ ಹೆದ್ದಾರಿಗೆ ಹೊಂದಿಕೊಂಡಿರುವ ಕಟ್ಟಡವೊಂದರ ಮೇಲೆ ಅಳವಡಿಸಿದ್ದ ಸೋಲಾರ್ ಪ್ಯಾನಲ್ ಭಾರಿ ಗಾಳೆಯ ಪರಿಣಾಮ ಹಾರಿ ಹೋಗಿದೆ. ಇದರಿಂದಾಗಿ ಲಕ್ಷಾಂತರ ರೂಪಾಯಿ ನಷ್ಟವಾಗಿದೆ ಎನ್ನಲಾಗಿದೆ.</p>.<p>ಪಟ್ಟಣವು ಸೇರಿದಂತೆ ಗ್ರಾಮೀಣ ಪ್ರದೇಶದಗಳಲ್ಲಿ ಕಳೆದ ನಾಲ್ಕೈದು ದಿನಗಳಿಂದ ಬಿಸಿಲಿನ ಬೇಗೆಗೆ ಕಂಗೆಟ್ಟಿದ್ದ ಜನರಿಗೆ ಮಳೆ ತುಸು ನೆಮ್ಮದಿಯ ನಿಟ್ಟುಸಿರು ಬಿಡುವಂತೆ ಮಾಡಿತು. ತಾಲ್ಲೂಕಿನ ನಾಗೂರು, ಯಡಹಳ್ಳಿ, , ಚಿತ್ತವಾಡಗಿ, ಬನ್ನಿಹಟ್ಟಿ, ವೀರಾಪೂರ, ಹಿರೇಬಾದವಾಡಗಿ, ಚಿಕ್ಕಬಾದವಾಡಗಿ ಸೇರಿದಂತೆ ವಿವಿಧ ಕಡೆ ಸುರಿದ ಭಾರಿ ಗಾಳಿ ಸಹಿತ, ಸಿಡಿಲಿನ ಅರ್ಭಟದೊಂದಿಗೆ ಆಲಿಕಲ್ಲು ಸಹಿತ ಮಳೆ ಸುರಿಯಿತು. ಮಳೆ, ಸಿಡಿಲಿನಬ್ಬರದೊಂದಿಗೆ ಗಾಳಿಯೂ ಜೋರಾಗಿದ್ದ ಕಾರಣ ವಿದ್ಯುತ್ ಸ್ಥಗಿತಗೊಳಿಸಲಾಗಿತ್ತು. ಮಳೆಯಿಂದಾಗಿ ರಸ್ತೆಯ ತಗ್ಗು ಪ್ರದೇಶಗಳಿಗೆ ನೀರು ನುಗ್ಗಿತು.</p>.<p class="Briefhead"><strong>ರಾಂಪೂರ: ಮಳೆ</strong></p>.<p><strong>ರಾಂಪೂರ</strong>: ಗುರುವಾರ ಸಾಯಂಕಾಲ ಗುಡುಗು, ಸಿಡಿಲಿನ ಅಬ್ಬರದೊಂದಿಗೆ ಕೆಲವೆಡೆ ಮಳೆಯಾಗಿದೆ. ಶಿರೂರ, ಬೆನಕಟ್ಟಿ,ಬೇವೂರು ಸೇರಿದಂತೆ ಕೆಲವು ಗ್ರಾಮಗಳಲ್ಲಿ ಅಲ್ಪ ಪ್ರಮಾಣದ ಮಳೆಯಾಗಿದೆ.</p>.<p>ಗುಡುಗು, ಸಿಡಿಲಿನ ಅಬ್ಬರ ಜೋರಾಗಿದ್ದು, ಮಳೆಯ ಪ್ರಮಾಣ ಮಾತ್ರ ಕಡಿಮೆ ಇತ್ತು. ಮಳೆ ಪ್ರಾರಂಭಕ್ಕೂ ಮೊದಲೇ ವಿದ್ಯುತ್ ಸಂಪರ್ಕ ಕಡಿತಗೊಂಡಿರು. ಸಂಜೆ 7 ಗಂಟೆಯಾದರೂ ವಿದ್ಯುತ್ ಪೂರೈಕೆ ಇರಲಿಲ್ಲ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹುನಗುಂದ</strong>: ಪಟ್ಟಣವು ಸೇರಿದಂತೆ ತಾಲ್ಲೂಕಿನ ಗ್ರಾಮೀಣ ಪ್ರದೇಶದ ಕೆಲವೆಡೆ ಗುರುವಾರ ಸಂಜೆ ಗುಡುಗು, ಗಾಳಿ ಸಹಿತ 30 ನಿಮಿಷಗಳ ಕಾಲ ಮಳೆ ಸುರಿಯಿತು. ಹುನಗುಂದ ಪಟ್ಟಣದ ಹೊರ ವಲಯದ ರಾಷ್ಟ್ರೀಯ ಹೆದ್ದಾರಿಗೆ ಹೊಂದಿಕೊಂಡಿರುವ ಕಟ್ಟಡವೊಂದರ ಮೇಲೆ ಅಳವಡಿಸಿದ್ದ ಸೋಲಾರ್ ಪ್ಯಾನಲ್ ಭಾರಿ ಗಾಳೆಯ ಪರಿಣಾಮ ಹಾರಿ ಹೋಗಿದೆ. ಇದರಿಂದಾಗಿ ಲಕ್ಷಾಂತರ ರೂಪಾಯಿ ನಷ್ಟವಾಗಿದೆ ಎನ್ನಲಾಗಿದೆ.</p>.<p>ಪಟ್ಟಣವು ಸೇರಿದಂತೆ ಗ್ರಾಮೀಣ ಪ್ರದೇಶದಗಳಲ್ಲಿ ಕಳೆದ ನಾಲ್ಕೈದು ದಿನಗಳಿಂದ ಬಿಸಿಲಿನ ಬೇಗೆಗೆ ಕಂಗೆಟ್ಟಿದ್ದ ಜನರಿಗೆ ಮಳೆ ತುಸು ನೆಮ್ಮದಿಯ ನಿಟ್ಟುಸಿರು ಬಿಡುವಂತೆ ಮಾಡಿತು. ತಾಲ್ಲೂಕಿನ ನಾಗೂರು, ಯಡಹಳ್ಳಿ, , ಚಿತ್ತವಾಡಗಿ, ಬನ್ನಿಹಟ್ಟಿ, ವೀರಾಪೂರ, ಹಿರೇಬಾದವಾಡಗಿ, ಚಿಕ್ಕಬಾದವಾಡಗಿ ಸೇರಿದಂತೆ ವಿವಿಧ ಕಡೆ ಸುರಿದ ಭಾರಿ ಗಾಳಿ ಸಹಿತ, ಸಿಡಿಲಿನ ಅರ್ಭಟದೊಂದಿಗೆ ಆಲಿಕಲ್ಲು ಸಹಿತ ಮಳೆ ಸುರಿಯಿತು. ಮಳೆ, ಸಿಡಿಲಿನಬ್ಬರದೊಂದಿಗೆ ಗಾಳಿಯೂ ಜೋರಾಗಿದ್ದ ಕಾರಣ ವಿದ್ಯುತ್ ಸ್ಥಗಿತಗೊಳಿಸಲಾಗಿತ್ತು. ಮಳೆಯಿಂದಾಗಿ ರಸ್ತೆಯ ತಗ್ಗು ಪ್ರದೇಶಗಳಿಗೆ ನೀರು ನುಗ್ಗಿತು.</p>.<p class="Briefhead"><strong>ರಾಂಪೂರ: ಮಳೆ</strong></p>.<p><strong>ರಾಂಪೂರ</strong>: ಗುರುವಾರ ಸಾಯಂಕಾಲ ಗುಡುಗು, ಸಿಡಿಲಿನ ಅಬ್ಬರದೊಂದಿಗೆ ಕೆಲವೆಡೆ ಮಳೆಯಾಗಿದೆ. ಶಿರೂರ, ಬೆನಕಟ್ಟಿ,ಬೇವೂರು ಸೇರಿದಂತೆ ಕೆಲವು ಗ್ರಾಮಗಳಲ್ಲಿ ಅಲ್ಪ ಪ್ರಮಾಣದ ಮಳೆಯಾಗಿದೆ.</p>.<p>ಗುಡುಗು, ಸಿಡಿಲಿನ ಅಬ್ಬರ ಜೋರಾಗಿದ್ದು, ಮಳೆಯ ಪ್ರಮಾಣ ಮಾತ್ರ ಕಡಿಮೆ ಇತ್ತು. ಮಳೆ ಪ್ರಾರಂಭಕ್ಕೂ ಮೊದಲೇ ವಿದ್ಯುತ್ ಸಂಪರ್ಕ ಕಡಿತಗೊಂಡಿರು. ಸಂಜೆ 7 ಗಂಟೆಯಾದರೂ ವಿದ್ಯುತ್ ಪೂರೈಕೆ ಇರಲಿಲ್ಲ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>