ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಜೀವಂತವಾಗಿದ್ದರೆ ಇದೇ ಅವಧಿಗೆ ಸಿಎಂ ಆಗುತ್ತೇನೆ: ಕತ್ತಿ

Last Updated 16 ಆಗಸ್ಟ್ 2021, 2:51 IST
ಅಕ್ಷರ ಗಾತ್ರ

ಬಾಗಲಕೋಟೆ: ‘ತಮ್ಮ (ಮಾಧ್ಯಮದವರ) ಆಶಯ ಈಡೇರಿದರೆ ಮುಂದಿನ ಕೆಲವೇ ದಿನಗಳಲ್ಲಿ ನಾನು ಮುಖ್ಯಮಂತ್ರಿ ಆಗಬಹುದು’ ಎಂದುಅರಣ್ಯ, ಆಹಾರ, ನಾಗರಿಕ ಪೂರೈಕೆ ಹಾಗೂ ಗ್ರಾಹಕರ ವ್ಯವಹಾರಗಳ ಸಚಿವ ಉಮೇಶ ಕತ್ತಿ ಹೇಳಿದರು.

ನಗರದಲ್ಲಿ ಭಾನುವಾರ ಸುದ್ದಿಗಾರರ ಪ್ರಶ್ನೆಗೆ ಮೇಲಿನಂತೆ ಪ್ರತಿಕ್ರಿಯಿಸಿದ ಅವರು, ’ಜೀವಂತವಾಗಿದ್ದರೆ ಇದೇ ಅವಧಿ, ಸತ್ತರೆ ಮುಂದಿನ ಅವಧಿಗೆ ಸಿ.ಎಂ ಆಗಬಹುದು‘ ಎಂದು ಚಟಾಕಿ ಹಾರಿಸಿದರು.

‘ಬೆಳಗಾವಿ ಜಿಲ್ಲೆಯ ಉಸ್ತುವಾರಿ ಆಗುವ ಆಸೆ ಇದೆ. ಆಯಾ ಜಿಲ್ಲೆಯವರೇ ಉಸ್ತುವಾರಿ ಆಗಬಾರದು ಎಂಬುದು ಪಕ್ಷದ ನಿರ್ಧಾರವಾಗಿದೆ. ಆದರೆ, ಜಿಲ್ಲಾ ಉಸ್ತುವಾರಿ ಸಚಿವರು ಆಯಾ ಜಿಲ್ಲೆಯವರೇ ಆದಲ್ಲಿ ಒಳ್ಳೆಯದು. ಅಭಿವೃದ್ಧಿಗೆ ಅನುಕೂಲ’ ಎಂದು ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT