ನಗರದಲ್ಲಿ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕೃಷಿ ಕಾಯ್ದೆಯಿಂದ ರೈತರಿಗೆ ತೊಂದರೆ ಆದಲ್ಲಿ ಮುಂದೆ ತಿದ್ದುಪಡಿ ಮಾಡಬಹುದು. ಸಾರ್ವಜನಿಕ ಹಿತಕ್ಕಾಗಿ ಹಲವು ಬಾರಿ ದೇಶದ ಸಂವಿಧಾನವನ್ನೇ ತಿದ್ದುಪಡಿ ಮಾಡಿದ್ದೇವೆ ಇನ್ನು ಕಾಯ್ದೆ ತಿದ್ದುಪಡಿ ಸಾಧ್ಯವಿಲ್ಲವೇ ಎಂದು ಪ್ರಶ್ನಿಸಿದ ಅವರು, ಕೃಷಿ ಕಾಯ್ದೆ ಒಂದು ಬಾರಿ ಜಾರಿಗೆ ತಂದರೆ ತಿದ್ದುಪಡಿಗೂ ಅವಕಾಶವಿದೆ ಎಂದರು.