ಕನ್ನಡ ಜಾನಪದ ಪರಿಷತ್ತು ತಾಲ್ಲೂಕು ಘಟಕದ ಅಧ್ಯಕ್ಷ ಬಿ.ಡಿ. ಚಿತ್ತರಗಿ ಮಾತನಾಡಿ, ‘ಜಾನಪದ ಸಾಹಿತ್ಯದಲ್ಲಿ ಜೀವನದ ಮೌಲ್ಯಗಳು ಅಡಕವಾಗಿವೆ. ಅದು ಮನುಷ್ಯನಿಗೆ ಬದುಕುವ ದಾರಿಯನ್ನು ತೋರಿಸುತ್ತದೆ. ಜಾನಪದ ಹಳ್ಳಿಯ ಸಾಮಾನ್ಯ ಜನರ ನಡುವೆ ಹುಟ್ಟಿಕೊಂಡ ಬಾಯಿಂದ ಬಾಯಿಗೆ ಹರಿದು ಬಂದಿರುವ ಸಿರಿನುಡಿ. ಜಾನಪದ ಸಾಹಿತ್ಯ ನಮ್ಮ ಹಿಂದಿನ ಗತ ವೈಭವನ್ನು ಸಾರುತ್ತವೆ ಆದರೆ ಆಧುನಿಕ ದೃಶ್ಯ ಮಾದ್ಯಮ ಭರಾಟೆಯಲ್ಲಿ ಹಳ್ಳಿಸೊಗಡಿನ ಜಾನಪದ ಸಂಸ್ಕೃತಿ ನಶಿಸಿ ಹೋಗುತ್ತಿದೆ. ಜಾನಪದವನ್ನು ಉಳಿಸಿ ಬೆಳೆಸಲು ನಮ್ಮ ಸಂಘಟನೆ ಕಾರ್ಯಪ್ರವೃತ್ತವಾಗಿದೆ’ ಎಂದರು.