ಕುಳಗೇರಿ, ಖಾನಾಪುರ ಎಸ್.ಕೆ., ಚಿರ್ಲಕೊಪ್ಪ, ಸೋಮನಕೊಪ್ಪ, ನರಸಾಪುರ ಸೇರಿದಂತೆ ಹಲವಾರು ಗ್ರಾಮಗಳಲ್ಲಿ ಮಂಗನಕಾಯಿಲೆ ವ್ಯಾಪಕವಾಗಿ ಹರಡುತ್ತಿದೆ. ಮಂಗನಬಾವು ಕಾಯಿಲೆ ಕಾಣಿಸಿಕೊಂಡ 3–4 ಮಕ್ಕಳು ನಿತ್ಯ ಸಾರ್ವಜನಿಕ ಆಸ್ಪತ್ರೆಗೆ ಚಿಕಿತ್ಸೆಗಾಗಿ ಬರುತ್ತಿದ್ದಾರೆ. ರೋಗ ವ್ಯಾಪಕವಾಗಿ ಹರಡುವ ಮುನ್ನ ಅಗತ್ಯ ಕ್ರಮಕೈಗೊಳ್ಳಬೇಕು ಎಂಬುದು ಸ್ಥಳೀಯರ ಆಗ್ರಹವಾಗಿದೆ.