<p><strong>ರಾಂಪುರ: ‘</strong>ಯುವ ಸಮೂಹ ಸಮಾಜ ಸೇವೆಯಲ್ಲಿ ಆಸಕ್ತಿ ವಹಿಸಿದರೆ ಮಹಾತ್ಮ ಗಾಂಧೀಜಿಯವರ ಗ್ರಾಮ ರಾಜ್ಯದ ಕನಸು ನನಸಾಗುತ್ತದೆ’ ಎಂದು ವಕೀಲ ಜಿ.ಜಿ.ಮಾಗನೂರ ಹೇಳಿದರು.</p>.<p>ಸಮೀಪದ ಚಿಟಗಿನಕೊಪ್ಪ ಗ್ರಾಮದಲ್ಲಿ ಶುಕ್ರವಾರ ಆರಂಭವಾದ ಬೇವೂರಿನ ಪಿ.ಎಸ್.ಸಜ್ಜನ ಕಲಾ ಮಹಾವಿದ್ಯಾಲಯದ ರಾಷ್ಟ್ರೀಯ ಸೇವಾ ಯೋಜನೆಯ ವಾರ್ಷಿಕ ವಿಶೇಷ ಶಿಬಿರ ಉದ್ಘಾಟನಾ ಸಮಾರಂಭದಲ್ಲಿ ಮಾತನಾಡಿ, ‘ಎನ್.ಎಸ್.ಎಸ್. ಶಿಬಿರಾರ್ಥಿಗಳು ಸಮಾಜ ಸೇವೆಯ ಮಹತ್ವ ತಿಳಿದು ಈ ಕ್ಷೇತ್ರದಲ್ಲಿ ಕೆಲಸ ಮಾಡಲು ಆಸಕ್ತಿ ವಹಿಸಬೇಕು’ ಎಂದರು.</p>.<p>ಅತಿಥಿ, ಪುಂಡಪ್ಪ ಕಡೂರ ಮಾತನಾಡಿ, ‘ಪ್ರತಿಯೊಬ್ಬ ವಿದ್ಯಾರ್ಥಿ ಕಲಿಕೆಯ ಜೊತೆ ಸಮಾಜ ಸೇವಾ ಗುಣಗಳನ್ನು ಬೆಳೆಸಿಕೊಳ್ಳಬೇಕು’ ಎಂದರು.</p>.<p>ಎನ್.ಬಿ.ಪಾಟೀಲ ಮಾತನಾಡಿದರು. ಪ್ರಾಸ್ತಾವಿಕವಾಗಿ ಪ್ರಾಚಾಯ೯ ಜಗದೀಶ ಭೈರಮಟ್ಟಿ ಮಾತನಾಡಿದರು. ರಾಂಪುರ ರೇವಣಸಿದ್ದೇಶ್ವರ ಸಹಕಾರಿ ಬ್ಯಾಂಕಿನ ಅಧ್ಯಕ್ಷ ಉಮೇಶ ಮೇಟಿ ಶಿಬಿರ ಉದ್ಘಾಟಿಸಿದರು. ವೈ.ಎಚ್.ಬೆನಕನವಾರಿ, ಶ್ರೀಕರದೇಸಾಯಿ, ಯೋಜನಾಧಿಕಾರಿ ಜಿ.ಎಸ್.ಗೌಡರ, ಪ್ರಭಾರ ಮುಖ್ಯ ಶಿಕ್ಷಕ ಸುನೀಲ ಪಾಟೀಲ ಇತರರು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ರಾಂಪುರ: ‘</strong>ಯುವ ಸಮೂಹ ಸಮಾಜ ಸೇವೆಯಲ್ಲಿ ಆಸಕ್ತಿ ವಹಿಸಿದರೆ ಮಹಾತ್ಮ ಗಾಂಧೀಜಿಯವರ ಗ್ರಾಮ ರಾಜ್ಯದ ಕನಸು ನನಸಾಗುತ್ತದೆ’ ಎಂದು ವಕೀಲ ಜಿ.ಜಿ.ಮಾಗನೂರ ಹೇಳಿದರು.</p>.<p>ಸಮೀಪದ ಚಿಟಗಿನಕೊಪ್ಪ ಗ್ರಾಮದಲ್ಲಿ ಶುಕ್ರವಾರ ಆರಂಭವಾದ ಬೇವೂರಿನ ಪಿ.ಎಸ್.ಸಜ್ಜನ ಕಲಾ ಮಹಾವಿದ್ಯಾಲಯದ ರಾಷ್ಟ್ರೀಯ ಸೇವಾ ಯೋಜನೆಯ ವಾರ್ಷಿಕ ವಿಶೇಷ ಶಿಬಿರ ಉದ್ಘಾಟನಾ ಸಮಾರಂಭದಲ್ಲಿ ಮಾತನಾಡಿ, ‘ಎನ್.ಎಸ್.ಎಸ್. ಶಿಬಿರಾರ್ಥಿಗಳು ಸಮಾಜ ಸೇವೆಯ ಮಹತ್ವ ತಿಳಿದು ಈ ಕ್ಷೇತ್ರದಲ್ಲಿ ಕೆಲಸ ಮಾಡಲು ಆಸಕ್ತಿ ವಹಿಸಬೇಕು’ ಎಂದರು.</p>.<p>ಅತಿಥಿ, ಪುಂಡಪ್ಪ ಕಡೂರ ಮಾತನಾಡಿ, ‘ಪ್ರತಿಯೊಬ್ಬ ವಿದ್ಯಾರ್ಥಿ ಕಲಿಕೆಯ ಜೊತೆ ಸಮಾಜ ಸೇವಾ ಗುಣಗಳನ್ನು ಬೆಳೆಸಿಕೊಳ್ಳಬೇಕು’ ಎಂದರು.</p>.<p>ಎನ್.ಬಿ.ಪಾಟೀಲ ಮಾತನಾಡಿದರು. ಪ್ರಾಸ್ತಾವಿಕವಾಗಿ ಪ್ರಾಚಾಯ೯ ಜಗದೀಶ ಭೈರಮಟ್ಟಿ ಮಾತನಾಡಿದರು. ರಾಂಪುರ ರೇವಣಸಿದ್ದೇಶ್ವರ ಸಹಕಾರಿ ಬ್ಯಾಂಕಿನ ಅಧ್ಯಕ್ಷ ಉಮೇಶ ಮೇಟಿ ಶಿಬಿರ ಉದ್ಘಾಟಿಸಿದರು. ವೈ.ಎಚ್.ಬೆನಕನವಾರಿ, ಶ್ರೀಕರದೇಸಾಯಿ, ಯೋಜನಾಧಿಕಾರಿ ಜಿ.ಎಸ್.ಗೌಡರ, ಪ್ರಭಾರ ಮುಖ್ಯ ಶಿಕ್ಷಕ ಸುನೀಲ ಪಾಟೀಲ ಇತರರು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>