<p><strong>ಇಳಕಲ್</strong>: ನಗರದ ವಿವಿಧ ಬೇಕರಿಗಳು ಹಾಗೂ ಹೋಟೆಲ್ಗಳಿಗೆ ದಿಢೀರ್ ಭೇಟಿ ನೀಡಿದ ತಹಶೀಲ್ದಾರ್ ಅಮರೇಶ ಪಮ್ಮಾರ ಅವರು ತಿನಿಸುಗಳ ಗುಣಮಟ್ಟ ಹಾಗೂ ಸ್ವಚ್ಛತೆ ಪರಿಶೀಲಿಸಿದರು.</p>.<p>ಜಿಲ್ಲೆಯ ಆಹಾರ ಇಲಾಖೆ ಅಧಿಕಾರಿ ಸಂದೀಪ್, ತಾಲ್ಲೂಕು ಆಹಾರ ನಿರೀಕ್ಷಕ ಮಹಾಂತೇಶ ಗೌಡರ ಜೊತೆಗಿದ್ದರು. ತಿನಿಸುಗಳನ್ನು ತಯಾರಿಸುವ ಸ್ಥಳ ಹಾಗೂ ಮಾರಾಟ ಮಳಿಗೆಗಳನ್ನು ಪರಿಶೀಲಿಸಿದರು.</p>.<p>‘ರುಚಿ ಹೆಚ್ಚಲೆಂಬ ಕಾರಣಕ್ಕೆ ನಿಷೇಧಿತ ರಾಸಾಯನಿಕಗಳನ್ನು ಬಳಸಬಾರದು. ಸ್ವಚ್ಛತೆಗೆ ಆದ್ಯತೆ ನೀಡಬೇಕು. ಆಹಾರದ ಗುಣಮಟ್ಟ ಹಾಗೂ ಪ್ರಮಾಣವನ್ನು ಕಾಯ್ದುಕೊಳ್ಳಬೇಕು. ನಿಷೇಧಿತ, ಕಳಪೆ ಗುಣಮಟ್ಟದ ಪ್ಲಾಸ್ಟಿಕ್ ಬಳಸಬಾರದು. ಬಾಲಕರನ್ನು ಕೆಲಸಕ್ಕೆ ಇಟ್ಟುಕೊಳ್ಳಬಾರದು. ನಗರಸಭೆಯಿಂದ ಪರವಾನಗಿಯನ್ನು ನವೀಕರಿಸಿಕೊಳ್ಳಬೇಕು. ಸ್ವಚ್ಛ ನೀರು ಬಳಸಬೇಕು’ ಎಂದು ಸೂಚಿಸಿದರು.</p>.<p>ಬಸ್ನಿಲ್ದಾಣದಲ್ಲಿರುವ ಕೆಲವು ಬೇಕರಿಗಳು, ನಗರಸಭೆಯಿಂದ ಪಡೆದ ಪರವಾನಗಿ ಅವಧಿ ಮುಗಿದಿದ್ದನ್ನು ಪರಿಶೀಲಿಸಿ, ನವೀಕರಣ ಮಾಡಿಸಿಕೊಳ್ಳಲು ತಿಳಿಸಿದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಇಳಕಲ್</strong>: ನಗರದ ವಿವಿಧ ಬೇಕರಿಗಳು ಹಾಗೂ ಹೋಟೆಲ್ಗಳಿಗೆ ದಿಢೀರ್ ಭೇಟಿ ನೀಡಿದ ತಹಶೀಲ್ದಾರ್ ಅಮರೇಶ ಪಮ್ಮಾರ ಅವರು ತಿನಿಸುಗಳ ಗುಣಮಟ್ಟ ಹಾಗೂ ಸ್ವಚ್ಛತೆ ಪರಿಶೀಲಿಸಿದರು.</p>.<p>ಜಿಲ್ಲೆಯ ಆಹಾರ ಇಲಾಖೆ ಅಧಿಕಾರಿ ಸಂದೀಪ್, ತಾಲ್ಲೂಕು ಆಹಾರ ನಿರೀಕ್ಷಕ ಮಹಾಂತೇಶ ಗೌಡರ ಜೊತೆಗಿದ್ದರು. ತಿನಿಸುಗಳನ್ನು ತಯಾರಿಸುವ ಸ್ಥಳ ಹಾಗೂ ಮಾರಾಟ ಮಳಿಗೆಗಳನ್ನು ಪರಿಶೀಲಿಸಿದರು.</p>.<p>‘ರುಚಿ ಹೆಚ್ಚಲೆಂಬ ಕಾರಣಕ್ಕೆ ನಿಷೇಧಿತ ರಾಸಾಯನಿಕಗಳನ್ನು ಬಳಸಬಾರದು. ಸ್ವಚ್ಛತೆಗೆ ಆದ್ಯತೆ ನೀಡಬೇಕು. ಆಹಾರದ ಗುಣಮಟ್ಟ ಹಾಗೂ ಪ್ರಮಾಣವನ್ನು ಕಾಯ್ದುಕೊಳ್ಳಬೇಕು. ನಿಷೇಧಿತ, ಕಳಪೆ ಗುಣಮಟ್ಟದ ಪ್ಲಾಸ್ಟಿಕ್ ಬಳಸಬಾರದು. ಬಾಲಕರನ್ನು ಕೆಲಸಕ್ಕೆ ಇಟ್ಟುಕೊಳ್ಳಬಾರದು. ನಗರಸಭೆಯಿಂದ ಪರವಾನಗಿಯನ್ನು ನವೀಕರಿಸಿಕೊಳ್ಳಬೇಕು. ಸ್ವಚ್ಛ ನೀರು ಬಳಸಬೇಕು’ ಎಂದು ಸೂಚಿಸಿದರು.</p>.<p>ಬಸ್ನಿಲ್ದಾಣದಲ್ಲಿರುವ ಕೆಲವು ಬೇಕರಿಗಳು, ನಗರಸಭೆಯಿಂದ ಪಡೆದ ಪರವಾನಗಿ ಅವಧಿ ಮುಗಿದಿದ್ದನ್ನು ಪರಿಶೀಲಿಸಿ, ನವೀಕರಣ ಮಾಡಿಸಿಕೊಳ್ಳಲು ತಿಳಿಸಿದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>