<p>ಇಳಕಲ್: ಸಮೀಪದ ಗೊರಬಾಳ ಗ್ರಾಮದ ಜೈ ವಿಜಯ ಯುವಕ ಸಂಘದ ಯುವಕರು ಇಳಕಲ್ ಜಿಲ್ಲಾ ಮುಖ್ಯ ರಸ್ತೆಯಲ್ಲಿ ರಾಷ್ಟ್ರೀಯ ಹೆದ್ದಾರಿಯಿಂದ ಗೊರಬಾಳ ಗ್ರಾಮದ ಹೊರವಲಯದ ವರೆಗೆ ಬಿದ್ದಿದ್ದ ಗುಂಡಿಗಳನ್ನು ಸ್ವಂತ ಖರ್ಚು ಹಾಗೂ ಶ್ರಮದಾನದ ಮೂಲಕ ಮುಚ್ಚಿದ ಘಟನೆ ಶುಕ್ರವಾರ ನಡೆದಿದೆ.</p>.<p>ಸಾಕಷ್ಟು ವಾಹನ ದಟ್ಟಣೆ ಇರುವ ಈ ರಸ್ತೆಯಲ್ಲಿ ದೊಡ್ಡ ಗುಂಡಿಗಳು ಬಿದ್ದಿವೆ. ಈ ರಸ್ತೆಯಲ್ಲಿ ಸಂಚರಿಸುವಾಗ ಬೈಕ್ ಸವಾರರು ಬಿದ್ದು ಗಾಯಗೊಂಡಿದ್ದರು. ಈ ಬಗ್ಗೆ ವರ್ಷದಿಂದ ಗ್ರಾಮಸ್ಥರು ಲೋಕೋಪಯೋಗಿ ಎಇಇ ಹಾಗೂ ಸ್ಥಳೀಯ ಗ್ರಾಮ ಪಂಚಾಯಿತಿ ಪಿಡಿಒ ಅವರ ಗಮನಕ್ಕೆ ತಂದರೂ ಪ್ರಯೋಜನ ಆಗಿರಲಿಲ್ಲ.</p>.<p>ಇಳಕಲ್ ಮೂಲಕ ರಾಜ್ಯ ಹೆದ್ದಾರಿ 20 (ಬೆಳಗಾವಿ-ರಾಯಚೂರು) ಸಂಪರ್ಕಿಸುವ ಈ ಜಿಲ್ಲಾ ಮುಖ್ಯ ರಸ್ತೆಯು ಸಂಪೂರ್ಣ ಹಾಳಾಗಿದೆ. ರಸ್ತೆ ಪಕ್ಕದಲ್ಲಿ, ಮಧ್ಯದಲ್ಲಿ ಪೈಪ್ಲೈನ್ ದುರಸ್ತಿಗಾಗಿ ಎಲ್ಲೆಂದರಲ್ಲಿ ತೋಡಿದ ಗುಂಡಿಗಳು ಮೂರು ತಿಂಗಳಿಂದ ಮುಚ್ಚದೇ ಹಾಗೆ ಬಿಟ್ಟಿದ್ದಾರೆ. ಈ ಬಗ್ಗೆ ಸಾರ್ವಜನಿಕರು ಗಮನ ಸೆಳೆದರೂ ಅಧಿಕಾರಿಗಳು ಸ್ಪಂದಿಸಿಲ್ಲ.</p>.<p>ಹಾಳಾಗಿರುವ ರಸ್ತೆಯ ತಾತ್ಕಾಲಿಕ ದುರಸ್ತಿಗೆ ಮುಂದಾದ ಗೊರಬಾಳ ಗ್ರಾಮದ ವಿಜಯ ಪೂಜಾರಿ ನೇತೃತ್ವದ ಯುವಕರ ಗುಂಪು ನಾಲ್ಕಾರು ಟ್ರ್ಯಾಕ್ಟರ್ ಗರಸು ತಂದು, ಶ್ರಮದಾನದ ಮೂಲಕ ಗುಂಡಿಗಳನ್ನು ಮುಚ್ಚಿದರು. ಗ್ರಾಮದ ಹಿರಿಯರು ಯುವಕರ ಸಮಾಜ ಉಪಯೋಗಿ ಕಾರ್ಯಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260524-19-719311172</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಇಳಕಲ್: ಸಮೀಪದ ಗೊರಬಾಳ ಗ್ರಾಮದ ಜೈ ವಿಜಯ ಯುವಕ ಸಂಘದ ಯುವಕರು ಇಳಕಲ್ ಜಿಲ್ಲಾ ಮುಖ್ಯ ರಸ್ತೆಯಲ್ಲಿ ರಾಷ್ಟ್ರೀಯ ಹೆದ್ದಾರಿಯಿಂದ ಗೊರಬಾಳ ಗ್ರಾಮದ ಹೊರವಲಯದ ವರೆಗೆ ಬಿದ್ದಿದ್ದ ಗುಂಡಿಗಳನ್ನು ಸ್ವಂತ ಖರ್ಚು ಹಾಗೂ ಶ್ರಮದಾನದ ಮೂಲಕ ಮುಚ್ಚಿದ ಘಟನೆ ಶುಕ್ರವಾರ ನಡೆದಿದೆ.</p>.<p>ಸಾಕಷ್ಟು ವಾಹನ ದಟ್ಟಣೆ ಇರುವ ಈ ರಸ್ತೆಯಲ್ಲಿ ದೊಡ್ಡ ಗುಂಡಿಗಳು ಬಿದ್ದಿವೆ. ಈ ರಸ್ತೆಯಲ್ಲಿ ಸಂಚರಿಸುವಾಗ ಬೈಕ್ ಸವಾರರು ಬಿದ್ದು ಗಾಯಗೊಂಡಿದ್ದರು. ಈ ಬಗ್ಗೆ ವರ್ಷದಿಂದ ಗ್ರಾಮಸ್ಥರು ಲೋಕೋಪಯೋಗಿ ಎಇಇ ಹಾಗೂ ಸ್ಥಳೀಯ ಗ್ರಾಮ ಪಂಚಾಯಿತಿ ಪಿಡಿಒ ಅವರ ಗಮನಕ್ಕೆ ತಂದರೂ ಪ್ರಯೋಜನ ಆಗಿರಲಿಲ್ಲ.</p>.<p>ಇಳಕಲ್ ಮೂಲಕ ರಾಜ್ಯ ಹೆದ್ದಾರಿ 20 (ಬೆಳಗಾವಿ-ರಾಯಚೂರು) ಸಂಪರ್ಕಿಸುವ ಈ ಜಿಲ್ಲಾ ಮುಖ್ಯ ರಸ್ತೆಯು ಸಂಪೂರ್ಣ ಹಾಳಾಗಿದೆ. ರಸ್ತೆ ಪಕ್ಕದಲ್ಲಿ, ಮಧ್ಯದಲ್ಲಿ ಪೈಪ್ಲೈನ್ ದುರಸ್ತಿಗಾಗಿ ಎಲ್ಲೆಂದರಲ್ಲಿ ತೋಡಿದ ಗುಂಡಿಗಳು ಮೂರು ತಿಂಗಳಿಂದ ಮುಚ್ಚದೇ ಹಾಗೆ ಬಿಟ್ಟಿದ್ದಾರೆ. ಈ ಬಗ್ಗೆ ಸಾರ್ವಜನಿಕರು ಗಮನ ಸೆಳೆದರೂ ಅಧಿಕಾರಿಗಳು ಸ್ಪಂದಿಸಿಲ್ಲ.</p>.<p>ಹಾಳಾಗಿರುವ ರಸ್ತೆಯ ತಾತ್ಕಾಲಿಕ ದುರಸ್ತಿಗೆ ಮುಂದಾದ ಗೊರಬಾಳ ಗ್ರಾಮದ ವಿಜಯ ಪೂಜಾರಿ ನೇತೃತ್ವದ ಯುವಕರ ಗುಂಪು ನಾಲ್ಕಾರು ಟ್ರ್ಯಾಕ್ಟರ್ ಗರಸು ತಂದು, ಶ್ರಮದಾನದ ಮೂಲಕ ಗುಂಡಿಗಳನ್ನು ಮುಚ್ಚಿದರು. ಗ್ರಾಮದ ಹಿರಿಯರು ಯುವಕರ ಸಮಾಜ ಉಪಯೋಗಿ ಕಾರ್ಯಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260524-19-719311172</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>