<p>ಇಳಕಲ್: ನಗರದ ಇಬ್ಬರು ಬಾಲಕರು ಹನಮನಾಳ ಎಸ್.ಟಿ. ಗ್ರಾಮ ಹತ್ತಿರದ ಗ್ರಾನೈಟ್ ಕ್ವಾರಿಯಲ್ಲಿ ಸಂಗ್ರಹಗೊಂಡಿದ್ದ ನೀರಿನಲ್ಲಿ ಮಂಗಳವಾರ ಈಜಲು ಹೋಗಿ ಮೃತಪಟ್ಟಿದ್ದಾರೆ.</p>.<p>ಅಲಂಪುರಪೇಟೆ ನಿವಾಸಿ ವಿಜಯಮಹಾಂತೇಶ ನಾಗರಾಜ ವಾಲೀಕಾರ (16), ಹಾದಿ ಬಸವಣ್ಣ ಆಸರೆ ಬಡಾವಣೆಯ ವಿನಾಯಕ ಭೀಮಪ್ಪ ಗೊಲ್ಲಾರ (14) ಮೃತರು. ವಿನಾಯಕ ನಗರದ ಕೆಬಿಎಂಪಿಎಸ್ ಶಾಲೆಯಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದರು.</p>.<p>ಅಗ್ನಿಶಾಮಕ ದಳದ ಸಿಬ್ಬಂದಿ, ಮೃತದೇಹಗಳನ್ನು ಹೊರತೆಗೆದರು. ಸ್ಥಳದಲ್ಲಿದ್ದ ಕುಟುಂಬಸ್ಥರ ಆಕ್ರಂದನ ಮುಗಿಲುಮುಟ್ಟಿತು.ಈ ಕುರಿತು ಇಳಕಲ್ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.</p>.<p>‘ತಾಲ್ಲೂಕಿನ ಹನಮನಾಳ ಎಸ್.ಟಿ., ಗುಡೂರ ಎಸ್.ಟಿ., ಹಿರೇಕೊಡಗಲಿ, ಬಲಕುಂದಿ, ಚಿಕ್ಕಕೊಡಗಲಿ ಸುತ್ತಲಿನ ಪ್ರದೇಶದಲ್ಲಿ ಗ್ರಾನೈಟ್ ಕ್ವಾರಿಗಳಿದ್ದು, ಇವುಗಳಲ್ಲಿ ಸಂಗ್ರಹಗೊಂಡ ನೀರಿನಲ್ಲಿ ಈ ಹಿಂದೆಯು ಈಜಲು ಹಾಗೂ ಬಟ್ಟೆ ತೊಳೆಯಲು ಹೋದವರು ಮೃತಪಟ್ಟ ಘಟನೆಗಳು ನಡೆದಿವೆ. ಆಳವಾದ ಕ್ವಾರಿಗೆ ಪ್ರವೇಶಿಸದಂತೆ ಕ್ರಮ ಕೈಗೊಳ್ಳಬೇಕು’ ಎಂದು ಸಾರ್ವಜನಿಕರು ಆಗ್ರಹಿಸಿದ್ದಾರೆ.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260422-19-1197176815</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಇಳಕಲ್: ನಗರದ ಇಬ್ಬರು ಬಾಲಕರು ಹನಮನಾಳ ಎಸ್.ಟಿ. ಗ್ರಾಮ ಹತ್ತಿರದ ಗ್ರಾನೈಟ್ ಕ್ವಾರಿಯಲ್ಲಿ ಸಂಗ್ರಹಗೊಂಡಿದ್ದ ನೀರಿನಲ್ಲಿ ಮಂಗಳವಾರ ಈಜಲು ಹೋಗಿ ಮೃತಪಟ್ಟಿದ್ದಾರೆ.</p>.<p>ಅಲಂಪುರಪೇಟೆ ನಿವಾಸಿ ವಿಜಯಮಹಾಂತೇಶ ನಾಗರಾಜ ವಾಲೀಕಾರ (16), ಹಾದಿ ಬಸವಣ್ಣ ಆಸರೆ ಬಡಾವಣೆಯ ವಿನಾಯಕ ಭೀಮಪ್ಪ ಗೊಲ್ಲಾರ (14) ಮೃತರು. ವಿನಾಯಕ ನಗರದ ಕೆಬಿಎಂಪಿಎಸ್ ಶಾಲೆಯಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದರು.</p>.<p>ಅಗ್ನಿಶಾಮಕ ದಳದ ಸಿಬ್ಬಂದಿ, ಮೃತದೇಹಗಳನ್ನು ಹೊರತೆಗೆದರು. ಸ್ಥಳದಲ್ಲಿದ್ದ ಕುಟುಂಬಸ್ಥರ ಆಕ್ರಂದನ ಮುಗಿಲುಮುಟ್ಟಿತು.ಈ ಕುರಿತು ಇಳಕಲ್ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.</p>.<p>‘ತಾಲ್ಲೂಕಿನ ಹನಮನಾಳ ಎಸ್.ಟಿ., ಗುಡೂರ ಎಸ್.ಟಿ., ಹಿರೇಕೊಡಗಲಿ, ಬಲಕುಂದಿ, ಚಿಕ್ಕಕೊಡಗಲಿ ಸುತ್ತಲಿನ ಪ್ರದೇಶದಲ್ಲಿ ಗ್ರಾನೈಟ್ ಕ್ವಾರಿಗಳಿದ್ದು, ಇವುಗಳಲ್ಲಿ ಸಂಗ್ರಹಗೊಂಡ ನೀರಿನಲ್ಲಿ ಈ ಹಿಂದೆಯು ಈಜಲು ಹಾಗೂ ಬಟ್ಟೆ ತೊಳೆಯಲು ಹೋದವರು ಮೃತಪಟ್ಟ ಘಟನೆಗಳು ನಡೆದಿವೆ. ಆಳವಾದ ಕ್ವಾರಿಗೆ ಪ್ರವೇಶಿಸದಂತೆ ಕ್ರಮ ಕೈಗೊಳ್ಳಬೇಕು’ ಎಂದು ಸಾರ್ವಜನಿಕರು ಆಗ್ರಹಿಸಿದ್ದಾರೆ.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260422-19-1197176815</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>