<p><strong>ಇಳಕಲ್:</strong> ‘ಭಾರತದ ಜನತೆಯಾದ ನಾವು ಬಾಬಾಸಾಹೇಬ ಅಂಬೇಡ್ಕರ್ ನೇತೃತ್ವದಲ್ಲಿ ರಚನೆಯಾದ ನಮ್ಮ ದೇಶದ ಸಂವಿಧಾನವನ್ನು ಅರ್ಪಿಸಿಕೊಂಡು ಇಂದಿಗೆ 77 ವರ್ಷಗಳಾಗದವು. ಸಂವಿಧಾನದ ಬಗ್ಗೆ ಅಸಹನೆ ಹೊಂದಿರುವ ವ್ಯಕ್ತಿಗಳು ಸಂವಿಧಾನ ಬದಲಾಯಿಸುವ ಮಾತುಗಳನ್ನು ಆಡುತ್ತಿದ್ದು, ಈ ಬಗ್ಗೆ ಎಚ್ಚರ ವಹಿಸುವ ಅಗತ್ಯವಿದೆ’ ಶಾಸಕ ವಿಜಯಾನಂದ ಕಾಶಪ್ಪನವರ ಹೇಳಿದರು.</p>.<p>ಅವರು ಇಲ್ಲಿಯ ತಹಶೀಲ್ದಾರ್ ಕಚೇರಿ ಮುಂದೆ ತಾಲ್ಲೂಕು ಆಡಳಿತದಿಂದ ಆಯೋಜಿಸಿದ ಗಣರಾಜ್ಯೋತ್ಸವ ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡಿದರು.</p>.<p>‘ಗಾಂಧೀಜಿಯವರನ್ನು ನಿಂದಿಸುವ, ಅಪಮಾನಿಸುವ ಕೃತ್ಯ ನಡೆಯುತ್ತಿದೆ. ಗ್ರಾಮೀಣ ಜನತೆಗೆ ಉದ್ಯೋಗದ ಖಾತ್ರಿ ನೀಡಿದ್ದ ನರೇಗಾ ಯೋಜನೆಯ ಹೆಸರು ಮಾತ್ರವಲ್ಲ, ಬಡವರ ಉದ್ಯೋಗದ ಹಕ್ಕನ್ನು ಕೇಂದ್ರ ಸರ್ಕಾರ ಕಿತ್ತು ಹಾಕಿದೆ. ಈ ಬಗ್ಗೆ ದೇಶದಾದ್ಯಂತ ಒಗ್ಗಟ್ಟಿನಿಂದ ಹೋರಾಟ ನಡೆಸಲು ಜನರು ಸಿದ್ದರಾಗಬೇಕು’ ಎಂದರು.</p>.<p>‘ಕೇಂದ್ರದ ಪಕ್ಷಪಾತ ನಿಲುವಿನಿಂದಾಗಿ ನಮ್ಮ ರಾಜ್ಯದ ರೈತರು ಸಂಕಷ್ಟದಲ್ಲಿ ಸಿಲುಕಿದ್ದಾರೆ’ ಎಂದು ಕೇಂದ್ರ ಸರ್ಕಾರದ ವಿರುದ್ದ ಹರಿಹಾಯ್ದರು.</p>.<p>ತಹಶೀಲ್ದಾರ್ ಅಮರೇಶ ಪಮ್ಮಾರ್ ಧ್ವಜಾರೋಹಣ ನೆರವೇರಿಸಿದರು. ಸಮಾರಂಭದಲ್ಲಿ ಕಾಂಗ್ರೆಸ್ ಮುಖಂಡರು, ವಿವಿಧ ಇಲಾಖೆಗಳ ಸಿಬ್ಭಂದಿ, ಶಾಲಾ ಕಾಲೇಜುಗಳ ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಇಳಕಲ್:</strong> ‘ಭಾರತದ ಜನತೆಯಾದ ನಾವು ಬಾಬಾಸಾಹೇಬ ಅಂಬೇಡ್ಕರ್ ನೇತೃತ್ವದಲ್ಲಿ ರಚನೆಯಾದ ನಮ್ಮ ದೇಶದ ಸಂವಿಧಾನವನ್ನು ಅರ್ಪಿಸಿಕೊಂಡು ಇಂದಿಗೆ 77 ವರ್ಷಗಳಾಗದವು. ಸಂವಿಧಾನದ ಬಗ್ಗೆ ಅಸಹನೆ ಹೊಂದಿರುವ ವ್ಯಕ್ತಿಗಳು ಸಂವಿಧಾನ ಬದಲಾಯಿಸುವ ಮಾತುಗಳನ್ನು ಆಡುತ್ತಿದ್ದು, ಈ ಬಗ್ಗೆ ಎಚ್ಚರ ವಹಿಸುವ ಅಗತ್ಯವಿದೆ’ ಶಾಸಕ ವಿಜಯಾನಂದ ಕಾಶಪ್ಪನವರ ಹೇಳಿದರು.</p>.<p>ಅವರು ಇಲ್ಲಿಯ ತಹಶೀಲ್ದಾರ್ ಕಚೇರಿ ಮುಂದೆ ತಾಲ್ಲೂಕು ಆಡಳಿತದಿಂದ ಆಯೋಜಿಸಿದ ಗಣರಾಜ್ಯೋತ್ಸವ ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡಿದರು.</p>.<p>‘ಗಾಂಧೀಜಿಯವರನ್ನು ನಿಂದಿಸುವ, ಅಪಮಾನಿಸುವ ಕೃತ್ಯ ನಡೆಯುತ್ತಿದೆ. ಗ್ರಾಮೀಣ ಜನತೆಗೆ ಉದ್ಯೋಗದ ಖಾತ್ರಿ ನೀಡಿದ್ದ ನರೇಗಾ ಯೋಜನೆಯ ಹೆಸರು ಮಾತ್ರವಲ್ಲ, ಬಡವರ ಉದ್ಯೋಗದ ಹಕ್ಕನ್ನು ಕೇಂದ್ರ ಸರ್ಕಾರ ಕಿತ್ತು ಹಾಕಿದೆ. ಈ ಬಗ್ಗೆ ದೇಶದಾದ್ಯಂತ ಒಗ್ಗಟ್ಟಿನಿಂದ ಹೋರಾಟ ನಡೆಸಲು ಜನರು ಸಿದ್ದರಾಗಬೇಕು’ ಎಂದರು.</p>.<p>‘ಕೇಂದ್ರದ ಪಕ್ಷಪಾತ ನಿಲುವಿನಿಂದಾಗಿ ನಮ್ಮ ರಾಜ್ಯದ ರೈತರು ಸಂಕಷ್ಟದಲ್ಲಿ ಸಿಲುಕಿದ್ದಾರೆ’ ಎಂದು ಕೇಂದ್ರ ಸರ್ಕಾರದ ವಿರುದ್ದ ಹರಿಹಾಯ್ದರು.</p>.<p>ತಹಶೀಲ್ದಾರ್ ಅಮರೇಶ ಪಮ್ಮಾರ್ ಧ್ವಜಾರೋಹಣ ನೆರವೇರಿಸಿದರು. ಸಮಾರಂಭದಲ್ಲಿ ಕಾಂಗ್ರೆಸ್ ಮುಖಂಡರು, ವಿವಿಧ ಇಲಾಖೆಗಳ ಸಿಬ್ಭಂದಿ, ಶಾಲಾ ಕಾಲೇಜುಗಳ ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>