<p><strong>ಬಾಗಲಕೋಟೆ:</strong> ಬೆಳಗಾವಿ ಜಿಲ್ಲೆಯ ಜಲಾನಯನ ಪ್ರದೇಶದಲ್ಲಿ ಸುರಿಯುತ್ತಿರುವ ಮಳೆಯಿಂದಾಗಿ ಜಿಲ್ಲೆಯಲ್ಲಿ ಘಟಪ್ರಭಾ ನದಿಗೆ ಭಾರೀ ಪ್ರಮಾಣದಲ್ಲಿ ನೀರು ಹರಿದು ಬರುತ್ತಿದೆ. ಹೀಗಾಗಿ ಮುಧೋಳ ತಾಲ್ಲೂಕಿನಲ್ಲಿ ಐದು ಸೇತುವೆಗಳು ಜಲಾವೃತವಾಗಿವೆ.</p>.<p>ಮಿರ್ಜಿ-ಅಕ್ಕಿಮರಡಿ,ಮಹಾಲಿಂಗಪುರ-ಯಾದವಾಡ, ನಂದಗಾವ್-ಮಹಾಲಿಂಗಪೂರ,ಒಂಟಗೊಡಿ - ಸೋರಗಾಂವ, ಢವಳೇಶ್ವರ -ಮಹಾಲಿಂಗಪುರ ಸೇತುವೆ ಮುಳುಗಡೆಯಾಗಿವೆ.</p>.<p>ಇದರಿಂದ ಮಿರ್ಜಿ, ಮಲ್ಲಾಪುರ, ಒಂಟಿಗೋಡಿ, ಚನಾಳ, ನಾಗರಾಳ, ಅಕ್ಕಿಮರಡಿ, ನಂದಗಾಂವ ಗ್ರಾಮಗಳಿಗೆ ತಾಲ್ಲೂಕು ಕೇಂದ್ರ ಮುಧೋಳದೊಂದಿಗೆ ನೇರ ಸಂಪರ್ಕ ಕಡಿತಗೊಂಡಿದೆ. ಗ್ರಾಮಸ್ಥರು ಸುತ್ತು ಬಳಸಿ ಓಡಾಟ ನಡೆಸಬೇಕಾಗಿದೆ.</p>.<p>ಜಿಲ್ಲಾ ಉಸ್ತುವಾರಿ ಸಚಿವ ಉಮೇಶ ಕತ್ತಿ ಹಾಗೂ ಡಿಸಿಎಂ ಗೋವಿಂದ ಕಾರಜೋಳ ಶನಿವಾರ ಮಧ್ಯಾಹ್ನ ಮುಧೋಳಕ್ಕೆ ಭೇಟಿ ನೀಡುತ್ತಿದ್ದು, ಪ್ರವಾಹ ಮುನ್ನೆಚ್ಚರಿಕೆ ಬಗ್ಗೆ ಅಧಿಕಾರಿಗಳೊಂದಿಗೆ ಸಭೆ ನಡೆಸಲಿದ್ದಾರೆ.</p>.<p><strong>ಇದನ್ನೂ ಓದಿ... <a href="https://www.prajavani.net/district/uthara-kannada/karnataka-rains-and-floods-heavy-rain-in-sirsi-karwar-uttar-kannada-851148.html" target="_blank">ಗಂಗಾವಳಿ ಪ್ರವಾಹ: ಕೊಚ್ಚಿಹೋದ ಸೇತುವೆ, ದ್ವೀಪದಂತಾದ ಗ್ರಾಮಗಳು</a></strong></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬಾಗಲಕೋಟೆ:</strong> ಬೆಳಗಾವಿ ಜಿಲ್ಲೆಯ ಜಲಾನಯನ ಪ್ರದೇಶದಲ್ಲಿ ಸುರಿಯುತ್ತಿರುವ ಮಳೆಯಿಂದಾಗಿ ಜಿಲ್ಲೆಯಲ್ಲಿ ಘಟಪ್ರಭಾ ನದಿಗೆ ಭಾರೀ ಪ್ರಮಾಣದಲ್ಲಿ ನೀರು ಹರಿದು ಬರುತ್ತಿದೆ. ಹೀಗಾಗಿ ಮುಧೋಳ ತಾಲ್ಲೂಕಿನಲ್ಲಿ ಐದು ಸೇತುವೆಗಳು ಜಲಾವೃತವಾಗಿವೆ.</p>.<p>ಮಿರ್ಜಿ-ಅಕ್ಕಿಮರಡಿ,ಮಹಾಲಿಂಗಪುರ-ಯಾದವಾಡ, ನಂದಗಾವ್-ಮಹಾಲಿಂಗಪೂರ,ಒಂಟಗೊಡಿ - ಸೋರಗಾಂವ, ಢವಳೇಶ್ವರ -ಮಹಾಲಿಂಗಪುರ ಸೇತುವೆ ಮುಳುಗಡೆಯಾಗಿವೆ.</p>.<p>ಇದರಿಂದ ಮಿರ್ಜಿ, ಮಲ್ಲಾಪುರ, ಒಂಟಿಗೋಡಿ, ಚನಾಳ, ನಾಗರಾಳ, ಅಕ್ಕಿಮರಡಿ, ನಂದಗಾಂವ ಗ್ರಾಮಗಳಿಗೆ ತಾಲ್ಲೂಕು ಕೇಂದ್ರ ಮುಧೋಳದೊಂದಿಗೆ ನೇರ ಸಂಪರ್ಕ ಕಡಿತಗೊಂಡಿದೆ. ಗ್ರಾಮಸ್ಥರು ಸುತ್ತು ಬಳಸಿ ಓಡಾಟ ನಡೆಸಬೇಕಾಗಿದೆ.</p>.<p>ಜಿಲ್ಲಾ ಉಸ್ತುವಾರಿ ಸಚಿವ ಉಮೇಶ ಕತ್ತಿ ಹಾಗೂ ಡಿಸಿಎಂ ಗೋವಿಂದ ಕಾರಜೋಳ ಶನಿವಾರ ಮಧ್ಯಾಹ್ನ ಮುಧೋಳಕ್ಕೆ ಭೇಟಿ ನೀಡುತ್ತಿದ್ದು, ಪ್ರವಾಹ ಮುನ್ನೆಚ್ಚರಿಕೆ ಬಗ್ಗೆ ಅಧಿಕಾರಿಗಳೊಂದಿಗೆ ಸಭೆ ನಡೆಸಲಿದ್ದಾರೆ.</p>.<p><strong>ಇದನ್ನೂ ಓದಿ... <a href="https://www.prajavani.net/district/uthara-kannada/karnataka-rains-and-floods-heavy-rain-in-sirsi-karwar-uttar-kannada-851148.html" target="_blank">ಗಂಗಾವಳಿ ಪ್ರವಾಹ: ಕೊಚ್ಚಿಹೋದ ಸೇತುವೆ, ದ್ವೀಪದಂತಾದ ಗ್ರಾಮಗಳು</a></strong></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>