<p><strong>ಮುಂಬೈ (ಪಿಟಿಐ): </strong>‘ಕರ್ನಾಟಕ ವಿಧಾನಸಭಾ ಚುನಾವಣೆ ಪ್ರಚಾರ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ವಾಗ್ದಾಳಿ ನಡೆಸಿದ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಘನತೆ ಮೆರೆದಿದ್ದಾರೆ. 2019ರ ಲೋಕಸಭಾ ಚುನಾವಣೆಯಲ್ಲಿ ರಾಹುಲ್ ಬಿಜೆಪಿಗೆ ಸವಾಲೊಡ್ಡಬಲ್ಲರು’ ಎಂದು ಶಿವಸೇನೆ ಶ್ಲಾಘಿಸಿದೆ.</p>.<p>ಪಕ್ಷದ ಮುಖವಾಣಿ ‘ಸಾಮ್ನಾ’ದ ಸಂಪಾದಕೀಯದಲ್ಲಿ ಈ ಬಗ್ಗೆ ಉಲ್ಲೇಖಿಸಿರುವ ಶಿವಸೇನೆ, ‘2019ರಲ್ಲಿ ಪಕ್ಷ ಬಹುಮತ ಗಳಿಸಿದರೆ ನಾನೇ ಪ್ರಧಾನಿ ಎಂಬುದಾಗಿ ತಮ್ಮ ರಾಜಕೀಯ ಮಹತ್ವಾಕಾಂಕ್ಷೆಯನ್ನು ಹೊರಹಾಕಿರುವ ರಾಹುಲ್ಗಾಂಧಿ ಹೇಳಿಕೆಯನ್ನು ಟೀಕಿಸುವ ಬದಲು ಬಿಜೆಪಿ ಸ್ವಾಗತಿಸಬೇಕಿತ್ತು’ ಎಂದು ಪ್ರತಿಪಾದಿಸಿದೆ.</p>.<p>‘ಬಿಜೆಪಿಗೆ ಪ್ರಜಾಪ್ರಭುತ್ವದಲ್ಲಿ ನಂಬಿಕೆ ಇದ್ದಿದ್ದೇ ಆದಲ್ಲಿ, 2019ರ ಸಾರ್ವತ್ರಿಕ ಚುನಾವಣೆಯಲ್ಲಿ ರಾಹುಲ್ ಗಾಂಧಿಯನ್ನು ಸೋಲಿಸುವುದಾಗಿ ಹೇಳಬೇಕಾಗಿತ್ತು. ಮಿಗಿಲಾಗಿ, ರಾಹುಲ್ ಅವರನ್ನು ಪ್ರಧಾನಿಯನ್ನಾಗಿ ಮಾಡಬೇಕೇ ಎಂಬುದನ್ನು ಜನರೇ ತೀರ್ಮಾನಿಸುವರು’ ಎಂದೂ ಪಕ್ಷ ಹೇಳಿದೆ.</p>.<p>‘2014ರಲ್ಲಿ ನಡೆದ ಲೋಕಸಭಾ ಚುನಾವಣೆ ಸಂದರ್ಭದ ರಾಹುಲ್ ಗಾಂಧಿ ಈಗ ಸಾಕಷ್ಟು ಬದಲಾಗಿದ್ದಾರೆ. ಈಗ ಅವರೊಬ್ಬ ದೃಢ ಮನಸ್ಸಿನ ನಾಯಕನಾಗಿ ಹೊರಹೊಮ್ಮಿದ್ದು, ಈ ಅಂಶ ಕಳದ ವರ್ಷದ ನಡೆದ ಗುಜರಾತ್ ವಿಧಾನಸಭಾ ಚುನಾವಣೆಯಲ್ಲಿ ಸಾಬೀತಾಗಿದೆ’ ಎಂದೂ ಸಂಪಾದಕೀಯ ಶ್ಲಾಘಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮುಂಬೈ (ಪಿಟಿಐ): </strong>‘ಕರ್ನಾಟಕ ವಿಧಾನಸಭಾ ಚುನಾವಣೆ ಪ್ರಚಾರ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ವಾಗ್ದಾಳಿ ನಡೆಸಿದ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಘನತೆ ಮೆರೆದಿದ್ದಾರೆ. 2019ರ ಲೋಕಸಭಾ ಚುನಾವಣೆಯಲ್ಲಿ ರಾಹುಲ್ ಬಿಜೆಪಿಗೆ ಸವಾಲೊಡ್ಡಬಲ್ಲರು’ ಎಂದು ಶಿವಸೇನೆ ಶ್ಲಾಘಿಸಿದೆ.</p>.<p>ಪಕ್ಷದ ಮುಖವಾಣಿ ‘ಸಾಮ್ನಾ’ದ ಸಂಪಾದಕೀಯದಲ್ಲಿ ಈ ಬಗ್ಗೆ ಉಲ್ಲೇಖಿಸಿರುವ ಶಿವಸೇನೆ, ‘2019ರಲ್ಲಿ ಪಕ್ಷ ಬಹುಮತ ಗಳಿಸಿದರೆ ನಾನೇ ಪ್ರಧಾನಿ ಎಂಬುದಾಗಿ ತಮ್ಮ ರಾಜಕೀಯ ಮಹತ್ವಾಕಾಂಕ್ಷೆಯನ್ನು ಹೊರಹಾಕಿರುವ ರಾಹುಲ್ಗಾಂಧಿ ಹೇಳಿಕೆಯನ್ನು ಟೀಕಿಸುವ ಬದಲು ಬಿಜೆಪಿ ಸ್ವಾಗತಿಸಬೇಕಿತ್ತು’ ಎಂದು ಪ್ರತಿಪಾದಿಸಿದೆ.</p>.<p>‘ಬಿಜೆಪಿಗೆ ಪ್ರಜಾಪ್ರಭುತ್ವದಲ್ಲಿ ನಂಬಿಕೆ ಇದ್ದಿದ್ದೇ ಆದಲ್ಲಿ, 2019ರ ಸಾರ್ವತ್ರಿಕ ಚುನಾವಣೆಯಲ್ಲಿ ರಾಹುಲ್ ಗಾಂಧಿಯನ್ನು ಸೋಲಿಸುವುದಾಗಿ ಹೇಳಬೇಕಾಗಿತ್ತು. ಮಿಗಿಲಾಗಿ, ರಾಹುಲ್ ಅವರನ್ನು ಪ್ರಧಾನಿಯನ್ನಾಗಿ ಮಾಡಬೇಕೇ ಎಂಬುದನ್ನು ಜನರೇ ತೀರ್ಮಾನಿಸುವರು’ ಎಂದೂ ಪಕ್ಷ ಹೇಳಿದೆ.</p>.<p>‘2014ರಲ್ಲಿ ನಡೆದ ಲೋಕಸಭಾ ಚುನಾವಣೆ ಸಂದರ್ಭದ ರಾಹುಲ್ ಗಾಂಧಿ ಈಗ ಸಾಕಷ್ಟು ಬದಲಾಗಿದ್ದಾರೆ. ಈಗ ಅವರೊಬ್ಬ ದೃಢ ಮನಸ್ಸಿನ ನಾಯಕನಾಗಿ ಹೊರಹೊಮ್ಮಿದ್ದು, ಈ ಅಂಶ ಕಳದ ವರ್ಷದ ನಡೆದ ಗುಜರಾತ್ ವಿಧಾನಸಭಾ ಚುನಾವಣೆಯಲ್ಲಿ ಸಾಬೀತಾಗಿದೆ’ ಎಂದೂ ಸಂಪಾದಕೀಯ ಶ್ಲಾಘಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>