<p><strong>ರಬಕವಿ ಬನಹಟ್ಟಿ</strong>: ನಗರದಲ್ಲಿ ಬಡವರಿಗೆ ಅನುಕೂಲವಾಗಲಿ ಎಂಬ ಉದ್ದೇಶದಿಂದ 15 ತಿಂಗಳ ಹಿಂದೆ ರಬಕವಿ ಬನಹಟ್ಟಿ ಸಮುದಾಯ ಕೇಂದ್ರದ ಮುಂಭಾಗದಲ್ಲಿ ಇಂದಿರಾ ಕ್ಯಾಂಟೀನ್ ನಿರ್ಮಾಣಕ್ಕೆ ಭೂಮಿಪೂಜೆ ನೆರವೇರಿಸಲಾಗಿತ್ತು. ಕಾಮಗಾರಿ ನಿಧಾನಗತಿಯಲ್ಲಿ ಸಾಗುತ್ತಿದ್ದು, ಯಾವಾಗ ಪೂರ್ಣವಾಗುತ್ತದೆ ಎಂಬುದು ಸಾರ್ವಜನಿಕ ವಲಯದಲ್ಲಿ ಚರ್ಚೆಯಾಗುತ್ತಿದೆ.</p>.<p>ವರ್ಷದ ಹಿಂದೆ ಬೃಹತ್ ಕ್ರೇನ್ಗಳ ಮೂಲಕ ಗೋಡೆ ಮತ್ತು ಚಾವಣಿ ಅಳವಡಿಸುವ ಕಾರ್ಯ ನಡೆದಿತ್ತು. ನಾಲ್ಕು ತಿಂಗಳ ನಂತರ ಬಾಗಿಲು, ವಿದ್ಯುತ್ ವಿದ್ಯುತ್ ಸಾಧನ ಅಳವಡಿಸುವ ಕಾರ್ಯವೂ ನಡೆಯಿತು. ಕ್ಯಾಂಟೀನ್ ಸುತ್ತಲೂ ಕಾಂಪೌಂಡ್ ಹಾಗೂ ಕಟ್ಟೆ ನಿರ್ಮಾಣ ಕಾರ್ಯ ಸಹ ನಡೆದಿದೆ. </p>.<p>ಸಾರ್ವಜನಿಕರಿಗೆ ಪ್ರಯೋಜನಕಾರಿಯಾದ ‘ಇಂದಿರಾ ಕ್ಯಾಂಟೀನ್’ ನಿರ್ಮಾಣಕ್ಕೆ ಇಷ್ಟೊಂದು ಸಮಯ ಬೇಕೇ? ಕ್ಯಾಂಟೀನ್ ನಿರ್ಮಿಸಲು ಅಧಿಕಾರಿಗಳು ನಿರ್ಲಕ್ಷ್ಯ ವಹಿಸುತ್ತಿರುವುದೇ? ಎಂಬುದು ಹಲವರ ಪ್ರಶ್ನೆಯಾಗಿದೆ. ಕಾಮಗಾರಿ ಯಾವಾಗ ಪೂರ್ಣಗೊಳ್ಳಬೇಕಿತ್ತು ಎಂಬ ಬಗ್ಗೆ ಅಧಿಕಾರಿಗಳ ಬಳಿಯೂ ಸ್ಪಷ್ಟ ಮಾಹಿತಿ ಇಲ್ಲವಾಗಿದೆ.</p>.<p>‘ಬಡವರಿಗೆ ಶೀಘ್ರದಲ್ಲೇ ಕಡಿಮೆ ದರದಲ್ಲಿ ಆಹಾರ ದೊರೆಯುವ ವಿಶ್ವಾಸ ಇಲ್ಲದಂತಾಗಿದೆ. ಕ್ಯಾಂಟೀನ್ ನಿರ್ಮಾಣದ ಹಲವಾರು ಕೆಲಸಗಳು ಉಳಿದುಕೊಂಡಿವೆ’ ಎನ್ನುತ್ತಾರೆ ಸ್ಥಳೀಯ ನಿವಾಸಿ ಶ್ರೀಶೈಲ ಬೀಳಗಿ.</p>.<p>‘ಕೇವಲ ಪ್ರಚಾರಕ್ಕಾಗಿ ಕಟ್ಟಡ ನಿರ್ಮಾಣ ಕೈಗೆತ್ತಿಕೊಳ್ಳಲಾಗಿದೆ. ವರ್ಷ ಕಳೆದರೂ ಕಾಮಗಾರಿ ಪೂರ್ಣಗೊಳಿಸಲು ಅಧಿಕಾರಿಗಳು ನಿರ್ಲಕ್ಷ್ಯ ತೋರಿಸುತ್ತಿದ್ದಾರೆ. ಆದಷ್ಟು ಬೇಗ ಕಟ್ಟಡ ನಿರ್ಮಿಸಿ, ಬಡವರಿಗೆ ಆಹಾರ ದೊರೆಯುವಂತೆ ಮಾಡಬೇಕು’ ಎಂದು ಶಿವಾನಂದ ಗಾಯಕವಾಡ ಒತ್ತಾಯಿಸಿದರು.</p>.<p>ನಿಧಾನ ಗತಿಯಲ್ಲಿ ಕಾಮಗಾರಿ ಬಡವರ ಹಸಿವು ನೀಗಿಸುವಲ್ಲಿ ವಿಳಂಬ ಕೇವಲ ಪ್ರಚಾರಕ್ಕಾಗಿ ಕ್ಯಾಂಟೀನ್; ಆರೋಪ</p>.<div><blockquote>ಇಂದಿರಾ ಕ್ಯಾಂಟೀನ್ ನಿರ್ಮಿಸುತ್ತಿರುವುದರಿಂದ ಸಮುದಾಯಆರೋಗ್ಯ ಕೇಂದ್ರಕ್ಕೂ ತೊಂದರೆಯಾಗಿದೆ. ಸಮಸ್ಯೆ ಪರಿಹರಿಸಲು ಅಧಿಕಾರಿಗಳು ಕ್ರಮ ವಹಿಸಲಿ</blockquote><span class="attribution"> ಸಿದ್ದು ಸವದಿ ಶಾಸಕ</span></div>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ರಬಕವಿ ಬನಹಟ್ಟಿ</strong>: ನಗರದಲ್ಲಿ ಬಡವರಿಗೆ ಅನುಕೂಲವಾಗಲಿ ಎಂಬ ಉದ್ದೇಶದಿಂದ 15 ತಿಂಗಳ ಹಿಂದೆ ರಬಕವಿ ಬನಹಟ್ಟಿ ಸಮುದಾಯ ಕೇಂದ್ರದ ಮುಂಭಾಗದಲ್ಲಿ ಇಂದಿರಾ ಕ್ಯಾಂಟೀನ್ ನಿರ್ಮಾಣಕ್ಕೆ ಭೂಮಿಪೂಜೆ ನೆರವೇರಿಸಲಾಗಿತ್ತು. ಕಾಮಗಾರಿ ನಿಧಾನಗತಿಯಲ್ಲಿ ಸಾಗುತ್ತಿದ್ದು, ಯಾವಾಗ ಪೂರ್ಣವಾಗುತ್ತದೆ ಎಂಬುದು ಸಾರ್ವಜನಿಕ ವಲಯದಲ್ಲಿ ಚರ್ಚೆಯಾಗುತ್ತಿದೆ.</p>.<p>ವರ್ಷದ ಹಿಂದೆ ಬೃಹತ್ ಕ್ರೇನ್ಗಳ ಮೂಲಕ ಗೋಡೆ ಮತ್ತು ಚಾವಣಿ ಅಳವಡಿಸುವ ಕಾರ್ಯ ನಡೆದಿತ್ತು. ನಾಲ್ಕು ತಿಂಗಳ ನಂತರ ಬಾಗಿಲು, ವಿದ್ಯುತ್ ವಿದ್ಯುತ್ ಸಾಧನ ಅಳವಡಿಸುವ ಕಾರ್ಯವೂ ನಡೆಯಿತು. ಕ್ಯಾಂಟೀನ್ ಸುತ್ತಲೂ ಕಾಂಪೌಂಡ್ ಹಾಗೂ ಕಟ್ಟೆ ನಿರ್ಮಾಣ ಕಾರ್ಯ ಸಹ ನಡೆದಿದೆ. </p>.<p>ಸಾರ್ವಜನಿಕರಿಗೆ ಪ್ರಯೋಜನಕಾರಿಯಾದ ‘ಇಂದಿರಾ ಕ್ಯಾಂಟೀನ್’ ನಿರ್ಮಾಣಕ್ಕೆ ಇಷ್ಟೊಂದು ಸಮಯ ಬೇಕೇ? ಕ್ಯಾಂಟೀನ್ ನಿರ್ಮಿಸಲು ಅಧಿಕಾರಿಗಳು ನಿರ್ಲಕ್ಷ್ಯ ವಹಿಸುತ್ತಿರುವುದೇ? ಎಂಬುದು ಹಲವರ ಪ್ರಶ್ನೆಯಾಗಿದೆ. ಕಾಮಗಾರಿ ಯಾವಾಗ ಪೂರ್ಣಗೊಳ್ಳಬೇಕಿತ್ತು ಎಂಬ ಬಗ್ಗೆ ಅಧಿಕಾರಿಗಳ ಬಳಿಯೂ ಸ್ಪಷ್ಟ ಮಾಹಿತಿ ಇಲ್ಲವಾಗಿದೆ.</p>.<p>‘ಬಡವರಿಗೆ ಶೀಘ್ರದಲ್ಲೇ ಕಡಿಮೆ ದರದಲ್ಲಿ ಆಹಾರ ದೊರೆಯುವ ವಿಶ್ವಾಸ ಇಲ್ಲದಂತಾಗಿದೆ. ಕ್ಯಾಂಟೀನ್ ನಿರ್ಮಾಣದ ಹಲವಾರು ಕೆಲಸಗಳು ಉಳಿದುಕೊಂಡಿವೆ’ ಎನ್ನುತ್ತಾರೆ ಸ್ಥಳೀಯ ನಿವಾಸಿ ಶ್ರೀಶೈಲ ಬೀಳಗಿ.</p>.<p>‘ಕೇವಲ ಪ್ರಚಾರಕ್ಕಾಗಿ ಕಟ್ಟಡ ನಿರ್ಮಾಣ ಕೈಗೆತ್ತಿಕೊಳ್ಳಲಾಗಿದೆ. ವರ್ಷ ಕಳೆದರೂ ಕಾಮಗಾರಿ ಪೂರ್ಣಗೊಳಿಸಲು ಅಧಿಕಾರಿಗಳು ನಿರ್ಲಕ್ಷ್ಯ ತೋರಿಸುತ್ತಿದ್ದಾರೆ. ಆದಷ್ಟು ಬೇಗ ಕಟ್ಟಡ ನಿರ್ಮಿಸಿ, ಬಡವರಿಗೆ ಆಹಾರ ದೊರೆಯುವಂತೆ ಮಾಡಬೇಕು’ ಎಂದು ಶಿವಾನಂದ ಗಾಯಕವಾಡ ಒತ್ತಾಯಿಸಿದರು.</p>.<p>ನಿಧಾನ ಗತಿಯಲ್ಲಿ ಕಾಮಗಾರಿ ಬಡವರ ಹಸಿವು ನೀಗಿಸುವಲ್ಲಿ ವಿಳಂಬ ಕೇವಲ ಪ್ರಚಾರಕ್ಕಾಗಿ ಕ್ಯಾಂಟೀನ್; ಆರೋಪ</p>.<div><blockquote>ಇಂದಿರಾ ಕ್ಯಾಂಟೀನ್ ನಿರ್ಮಿಸುತ್ತಿರುವುದರಿಂದ ಸಮುದಾಯಆರೋಗ್ಯ ಕೇಂದ್ರಕ್ಕೂ ತೊಂದರೆಯಾಗಿದೆ. ಸಮಸ್ಯೆ ಪರಿಹರಿಸಲು ಅಧಿಕಾರಿಗಳು ಕ್ರಮ ವಹಿಸಲಿ</blockquote><span class="attribution"> ಸಿದ್ದು ಸವದಿ ಶಾಸಕ</span></div>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>