<p><strong>ಬಾಗಲಕೋಟೆ:</strong> ‘ವಿಕಸಿತ ಭಾರತದ ಕಲ್ಪನೆಯಿಟ್ಟುಕೊಂಡು ನರೇಂದ್ರ ಮೋದಿ ಕೈಗೊಳ್ಳುತ್ತಿರುವ ಯೋಜನೆ, ಕಾರ್ಯಕ್ರಮಗಳ ತಿರುಳು ಅರಿಯದ ಕಾಂಗ್ರೆಸ್ ಪಕ್ಷ ಬರೀ ಟೀಕೆ, ವಿರೋಧ ಮಾಡುವುದನ್ನು ರೂಢಿ ಮಾಡಿಕೊಂಡಿದೆ’ ಎಂದು ಸಂಸದ ಜಗದೀಶ ಶೆಟ್ಟರ್ ಆರೋಪಿಸಿದರು.</p>.<p>ನಗರದಲ್ಲಿ ಶನಿವಾರ ಬಿಜೆಪಿ ಕಚೇರಿಯಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಬಡವರಿಗೆ ನೆರವಾಗುವ ದೃಷ್ಟಿಯಿಂದ ಕೇಂದ್ರ ಸರ್ಕಾರ ನರೇಗಾ ಯೋಜನೆಯಲ್ಲಿ ಬದಲಾವಣೆ ತಂದಿದೆ. ಅದನ್ನು ಸರಿಯಾಗಿ ತಿಳಿಯದೇ ಹಾಗೂ ಆ ಬಗ್ಗೆ ಸಂಸತ್ತಿನಲ್ಲಿ ಚರ್ಚಿಸಲು ಮುಂದಾಗದೇ ವಿರೋಧಿಸುವುದು, ಸದನ ಬಹಿಷ್ಕರಿಸುವುದು ಹಾಗೂ ಟೀಕೆ ಮಾಡುತ್ತ ಅಪಪ್ರಚಾರಕ್ಕೆ ಇಳಿದಿದೆ. ನರೇಂದ್ರ ಮೋದಿ ನೇತೃತ್ವದಲ್ಲಿ ದೇಶ ಪ್ರಗತಿಯಲ್ಲಿ ಮುನ್ನಡೆಯುತ್ತಿರುವುದನ್ನು ಸಹಿಸಿಕೊಳ್ಳಲು ಅವರಿಗೆ ಆಗುತ್ತಿಲ್ಲ’ ಎಂದು ದೂರಿದರು.</p>.<p>‘ಮೋದಿ ವಿಕಸಿತ ಭಾರತದ ಕನಸು ಕಂಡಿದ್ದು, ಆ ನಿಟ್ಟಿನಲ್ಲಿ ಹಲವಾರು ಹೊಸ ಹೊಸ ಯೋಜನೆಗಳನ್ನು ರೂಪಿಸುತ್ತಿದ್ದಾರೆ. ಹೀಗಾಗಿ ದೇಶ ಆರ್ಥಿಕ ಪ್ರಗತಿ ಸಾಧಿಸುತ್ತಿದೆ, ಆರ್ಥಿಕತೆಯಲ್ಲಿ ಭಾರತ ಈಗ 4 ನೇ ಸ್ಥಾನಕ್ಕೆ ಬಂದಿದೆ. ಅದಕ್ಕೆ ಪೂರಕವಾಗಿ ಹಲವಾರು ಬದಲಾವಣೆಗಳಾಗಿವೆ. ನರೇಗಾ ಯೋಜನೆಯಲ್ಲಿನ ಭ್ರಷ್ಟಾಚಾರ, ಲೋಪದೋಷಗಳನ್ನು ಸರಿಪಡಿಸಿ ನಿಜವಾದ ಕೂಲಿಕಾರರಿಗೆ ಯೋಜನೆಯ ಅನುಕೂಲತೆಗಳು ತಲುಪಬೇಕು ಎಂಬ ಉದ್ದೇಶದಿಂದ ಬದಲಾವಣೆ ತರಲಾಗಿದೆ’ ಎಂದರು.</p>.<p>ನರೇಗಾ ಯೋಜನೆಯ ಬಜೆಟ್ ಹೆಚ್ಚಿಸಲಾಗಿದೆ. 100 ದಿನಗಳ ಕೆಲಸದ ದಿನಗಳನ್ನು 120 ಕ್ಕೆ ಹೆಚ್ಚಿಸಲಾಗಿದೆ. ನಕಲಿ ಜಾಬ್ ಕಾರ್ಡ್ಗಳನ್ನು ರದ್ದುಪಡಿಸಿ, ಕೆಲಸ ಮಾಡಿದವರಿಗೆ 7 ದಿನದೊಳಗೆ ಹಣ ಪಾವತಿಸುವ ಕ್ರಮವಹಿಸಲಾಗಿದೆ. ತಮ್ಮ ಆಡಳಿತದಲ್ಲಿ ಅನೇಕ ಯೋಜನೆ, ಕಾರ್ಯಕ್ರಮಗಳಿಗೆ ಬರೀ ನೆಹರೂ, ಇಂದಿರಾಗಾಂಧಿ, ರಾಜೀವ್ ಗಾಂಧಿ ಹೆಸರು ಇಟ್ಟಿರುವ ಕಾಂಗ್ರೆಸ್ಸಿನವರಿಗೆ ಮಹಾತ್ಮಗಾಂಧಿ ಈಗ ನೆನಪಾದರೆ ಎಂದು ಪ್ರಶ್ನಿಸಿದರು.</p>.<p>ಪ್ರಗತಿ ಕಾರ್ಯಕ್ರಮಗಳ ಕುರಿತು ಟೀಕೆ, ಟಿಪ್ಪಣಿ ಮಾಡುವ ರಾಹುಲ್ ಗಾಂಧಿ ಮುಸ್ಲಿಮರಿಗೆ ಅನ್ಯಾಯವಾದರೆ ಪ್ರತಿಭಟನೆ, ಹೋರಾಟ ಎನ್ನುತ್ತಾರೆ. ಆದರೆ ಬಾಂಗ್ಲಾ ದೇಶದಲ್ಲಿ ನಡೆದಿರುವ ಹಿಂದೂಗಳ ಹತ್ಯೆಯ ಬಗ್ಗೆ ಚಕಾರ ಎತ್ತುತ್ತಿಲ್ಲ, ತುಷ್ಟಿಕರಣ ನೀತಿಯನ್ನೇ ಮುಂದುವರಿಸಿಕೊಂಡು ಹೊರಟಿದ್ದಾರೆ’ ಎಂದು ಟೀಕಿಸಿದರು.</p>.<p>ರಾಜ್ಯಸಭಾ ಸದಸ್ಯ ನಾರಾಯಣಸಾ ಭಾಂಡಗೆ, ವಿಧಾನ ಪರಿಷತ್ ಸದಸ್ಯ ಪಿ.ಎಚ್.ಪೂಜಾರ, ಮಾಜಿ ಶಾಸಕ ವೀರಣ್ಣ ಚರಂತಿಮಠ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬಾಗಲಕೋಟೆ:</strong> ‘ವಿಕಸಿತ ಭಾರತದ ಕಲ್ಪನೆಯಿಟ್ಟುಕೊಂಡು ನರೇಂದ್ರ ಮೋದಿ ಕೈಗೊಳ್ಳುತ್ತಿರುವ ಯೋಜನೆ, ಕಾರ್ಯಕ್ರಮಗಳ ತಿರುಳು ಅರಿಯದ ಕಾಂಗ್ರೆಸ್ ಪಕ್ಷ ಬರೀ ಟೀಕೆ, ವಿರೋಧ ಮಾಡುವುದನ್ನು ರೂಢಿ ಮಾಡಿಕೊಂಡಿದೆ’ ಎಂದು ಸಂಸದ ಜಗದೀಶ ಶೆಟ್ಟರ್ ಆರೋಪಿಸಿದರು.</p>.<p>ನಗರದಲ್ಲಿ ಶನಿವಾರ ಬಿಜೆಪಿ ಕಚೇರಿಯಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಬಡವರಿಗೆ ನೆರವಾಗುವ ದೃಷ್ಟಿಯಿಂದ ಕೇಂದ್ರ ಸರ್ಕಾರ ನರೇಗಾ ಯೋಜನೆಯಲ್ಲಿ ಬದಲಾವಣೆ ತಂದಿದೆ. ಅದನ್ನು ಸರಿಯಾಗಿ ತಿಳಿಯದೇ ಹಾಗೂ ಆ ಬಗ್ಗೆ ಸಂಸತ್ತಿನಲ್ಲಿ ಚರ್ಚಿಸಲು ಮುಂದಾಗದೇ ವಿರೋಧಿಸುವುದು, ಸದನ ಬಹಿಷ್ಕರಿಸುವುದು ಹಾಗೂ ಟೀಕೆ ಮಾಡುತ್ತ ಅಪಪ್ರಚಾರಕ್ಕೆ ಇಳಿದಿದೆ. ನರೇಂದ್ರ ಮೋದಿ ನೇತೃತ್ವದಲ್ಲಿ ದೇಶ ಪ್ರಗತಿಯಲ್ಲಿ ಮುನ್ನಡೆಯುತ್ತಿರುವುದನ್ನು ಸಹಿಸಿಕೊಳ್ಳಲು ಅವರಿಗೆ ಆಗುತ್ತಿಲ್ಲ’ ಎಂದು ದೂರಿದರು.</p>.<p>‘ಮೋದಿ ವಿಕಸಿತ ಭಾರತದ ಕನಸು ಕಂಡಿದ್ದು, ಆ ನಿಟ್ಟಿನಲ್ಲಿ ಹಲವಾರು ಹೊಸ ಹೊಸ ಯೋಜನೆಗಳನ್ನು ರೂಪಿಸುತ್ತಿದ್ದಾರೆ. ಹೀಗಾಗಿ ದೇಶ ಆರ್ಥಿಕ ಪ್ರಗತಿ ಸಾಧಿಸುತ್ತಿದೆ, ಆರ್ಥಿಕತೆಯಲ್ಲಿ ಭಾರತ ಈಗ 4 ನೇ ಸ್ಥಾನಕ್ಕೆ ಬಂದಿದೆ. ಅದಕ್ಕೆ ಪೂರಕವಾಗಿ ಹಲವಾರು ಬದಲಾವಣೆಗಳಾಗಿವೆ. ನರೇಗಾ ಯೋಜನೆಯಲ್ಲಿನ ಭ್ರಷ್ಟಾಚಾರ, ಲೋಪದೋಷಗಳನ್ನು ಸರಿಪಡಿಸಿ ನಿಜವಾದ ಕೂಲಿಕಾರರಿಗೆ ಯೋಜನೆಯ ಅನುಕೂಲತೆಗಳು ತಲುಪಬೇಕು ಎಂಬ ಉದ್ದೇಶದಿಂದ ಬದಲಾವಣೆ ತರಲಾಗಿದೆ’ ಎಂದರು.</p>.<p>ನರೇಗಾ ಯೋಜನೆಯ ಬಜೆಟ್ ಹೆಚ್ಚಿಸಲಾಗಿದೆ. 100 ದಿನಗಳ ಕೆಲಸದ ದಿನಗಳನ್ನು 120 ಕ್ಕೆ ಹೆಚ್ಚಿಸಲಾಗಿದೆ. ನಕಲಿ ಜಾಬ್ ಕಾರ್ಡ್ಗಳನ್ನು ರದ್ದುಪಡಿಸಿ, ಕೆಲಸ ಮಾಡಿದವರಿಗೆ 7 ದಿನದೊಳಗೆ ಹಣ ಪಾವತಿಸುವ ಕ್ರಮವಹಿಸಲಾಗಿದೆ. ತಮ್ಮ ಆಡಳಿತದಲ್ಲಿ ಅನೇಕ ಯೋಜನೆ, ಕಾರ್ಯಕ್ರಮಗಳಿಗೆ ಬರೀ ನೆಹರೂ, ಇಂದಿರಾಗಾಂಧಿ, ರಾಜೀವ್ ಗಾಂಧಿ ಹೆಸರು ಇಟ್ಟಿರುವ ಕಾಂಗ್ರೆಸ್ಸಿನವರಿಗೆ ಮಹಾತ್ಮಗಾಂಧಿ ಈಗ ನೆನಪಾದರೆ ಎಂದು ಪ್ರಶ್ನಿಸಿದರು.</p>.<p>ಪ್ರಗತಿ ಕಾರ್ಯಕ್ರಮಗಳ ಕುರಿತು ಟೀಕೆ, ಟಿಪ್ಪಣಿ ಮಾಡುವ ರಾಹುಲ್ ಗಾಂಧಿ ಮುಸ್ಲಿಮರಿಗೆ ಅನ್ಯಾಯವಾದರೆ ಪ್ರತಿಭಟನೆ, ಹೋರಾಟ ಎನ್ನುತ್ತಾರೆ. ಆದರೆ ಬಾಂಗ್ಲಾ ದೇಶದಲ್ಲಿ ನಡೆದಿರುವ ಹಿಂದೂಗಳ ಹತ್ಯೆಯ ಬಗ್ಗೆ ಚಕಾರ ಎತ್ತುತ್ತಿಲ್ಲ, ತುಷ್ಟಿಕರಣ ನೀತಿಯನ್ನೇ ಮುಂದುವರಿಸಿಕೊಂಡು ಹೊರಟಿದ್ದಾರೆ’ ಎಂದು ಟೀಕಿಸಿದರು.</p>.<p>ರಾಜ್ಯಸಭಾ ಸದಸ್ಯ ನಾರಾಯಣಸಾ ಭಾಂಡಗೆ, ವಿಧಾನ ಪರಿಷತ್ ಸದಸ್ಯ ಪಿ.ಎಚ್.ಪೂಜಾರ, ಮಾಜಿ ಶಾಸಕ ವೀರಣ್ಣ ಚರಂತಿಮಠ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>