<p><strong>ಜಮಖಂಡಿ</strong>: ‘ಕಡಿಮೆ ಬಡ್ಡಿ ದರದಲ್ಲಿ ಸಾಲ ಸೌಲಭ್ಯ ಪಡೆದು ಆರ್ಥಿಕವಾಗಿ ಅಭಿವೃದ್ಧಿ ಹೊಂದಲು ಸಹಕಾರ ಸಂಘಗಳು ಪೂರಕವಾಗಿವೆ. ಗ್ರಾಮೀಣ ಪ್ರದೇಶದಲ್ಲಿ ಇಂತಹ ಸುಸಜ್ಜಿತ ಕಟ್ಟಡ ನಿರ್ಮಿಸಿರುವುದು ಶ್ಲಾಘನೀಯ’ ಎಂದು ಶಾಸಕ ಜಗದೀಶ ಗುಡಗುಂಟಿ ಹೇಳಿದರು.</p>.<p>ತಾಲ್ಲೂಕಿನ ಶೂರ್ಪಾಲಿ ಗ್ರಾಮದ ಪುನರ್ವಸತಿ ಕೇಂದ್ರದಲ್ಲಿ ಗುರುವಾರ ಹಮ್ಮಿಕೊಂಡಿದ್ದ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಮುಖ್ಯ ಕಚೇರಿ ನೂತನ ಕಟ್ಟಡ ಉದ್ಘಾಟಿಸಿ ಮಾತನಾಡಿದ ಅವರು, ‘ರೈತರು ಬೆಳೆದ ಬೆಳೆಗಳಿಗೆ ಮೌಲ್ಯವರ್ಧನೆ ಮಾಡಿ, ಉತ್ತಮ ಬೆಲೆ ಪಡೆದುಕೊಳ್ಳಲು ಸಹಕಾರ ಸಂಘಗಳು ಸಹಕಾರಿ ಆಗಲಿವೆ’ ಎಂದರು.</p>.<p>ಮಾಜಿ ಶಾಸಕ ಶ್ರೀಕಾಂತ ಕುಲಕರ್ಣಿ ಮಾತನಾಡಿ, ‘ಗ್ರಾಮೀಣ ಮಟ್ಟದಲ್ಲಿ ರೈತರಿಗೆ ಅಲ್ಪಾವಧಿ ಮತ್ತು ಮಧ್ಯಮಾವಧಿ ಸಾಲ ಸೌಲಭ್ಯ ಒದಗಿಸುವ ತಳಮಟ್ಟದ ಸಹಕಾರಿ ಸಂಸ್ಥೆಗಳಾಗಿವೆ. ಇವು ಕೃಷಿ ಚಟುವಟಿಕೆಗಳಿಗೆ ಅಗತ್ಯವಾದ ಬಂಡವಾಳ, ಗೊಬ್ಬರ, ಬಿತ್ತನೆ ಬೀಜ ಮತ್ತು ಕೀಟನಾಶಕಗಳನ್ನು ವಿತರಿಸುವ ಮೂಲಕ ರೈತರ ಆರ್ಥಿಕ ಸಬಲೀಕರಣಕ್ಕೆ ನೆರವಾಗುತ್ತವೆ’ ಎಂದು ತಿಳಿಸಿದರು.</p>.<p>‘ಈ ಸಂಘಗಳು ನಬಾರ್ಡ್ ಮತ್ತು ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್ಗಳಿಂದ ಮರು ಹಣಕಾಸು ಸೌಲಭ್ಯ ಪಡೆದುರೈತರಿಗೆ, ಉದ್ಯಮಿಗಳಿಗೆ ಆರ್ಥಿಕ ಸಹಾಯ ನೀಡುವಲ್ಲಿ ಸಹಕಾರಿಯಾಗಿವೆ’ ಎಂದರು.</p>.<p>ಸಾರಂಗ ಮಠದ ಮಾತೋಶ್ರೀ ಸುನಂದಮ್ಮ ತಾಯಿ, ಬಿ.ಕೆ.ಗಲಗಲಿ ಮಾತನಾಡಿದರು. ಪಂಚಯ್ಯಾ ಹಿರೇಮಠ, ಬಸಯ್ಯ ಮಠದ, ಈರಯ್ಯಾ ಹಿರೇಮಠ, ಸಂಘದ ಅಧ್ಯಕ್ಷ ರಾಮಪ್ಪ ಕಣಬೂರ, ವಿಧಾನ ಪರಿಷತ್ ಮಾಜಿ ಸದಸ್ಯ ಜಿ.ಎಸ್.ನ್ಯಾಮಗೌಡ, ಸುಶೀಲಕುಮಾರ ಬೆಳಗಲಿ, ಶಂಕರ ಬಾಲಪ್ಪನವರ, ರವಿ ಐಗಳಿ, ಸಂತೋಷ ಬಾಡಗಿ, ರಾಜಶೇಖರ ಟೊಪಗಿ, ಉಪಾಧ್ಯಕ್ಷೆ ಅಶ್ವಿನಿ ರುದ್ರಗೌಡ, ನಿರ್ದೇಶಕ ಅನೀಲ ಕುಂಚನೂರ, ಆನಂದ ದುಪದಾಳ, ನಿರ್ದೇಶಕ ಬಿ.ಎಸ್. ಸಿಂಧೂರ , ಚನಗೀರಿ ಹೊಸೂರ, ಸದಾಶಿವ ಕುಂಬಾರ ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260515-19-1859757145</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಜಮಖಂಡಿ</strong>: ‘ಕಡಿಮೆ ಬಡ್ಡಿ ದರದಲ್ಲಿ ಸಾಲ ಸೌಲಭ್ಯ ಪಡೆದು ಆರ್ಥಿಕವಾಗಿ ಅಭಿವೃದ್ಧಿ ಹೊಂದಲು ಸಹಕಾರ ಸಂಘಗಳು ಪೂರಕವಾಗಿವೆ. ಗ್ರಾಮೀಣ ಪ್ರದೇಶದಲ್ಲಿ ಇಂತಹ ಸುಸಜ್ಜಿತ ಕಟ್ಟಡ ನಿರ್ಮಿಸಿರುವುದು ಶ್ಲಾಘನೀಯ’ ಎಂದು ಶಾಸಕ ಜಗದೀಶ ಗುಡಗುಂಟಿ ಹೇಳಿದರು.</p>.<p>ತಾಲ್ಲೂಕಿನ ಶೂರ್ಪಾಲಿ ಗ್ರಾಮದ ಪುನರ್ವಸತಿ ಕೇಂದ್ರದಲ್ಲಿ ಗುರುವಾರ ಹಮ್ಮಿಕೊಂಡಿದ್ದ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಮುಖ್ಯ ಕಚೇರಿ ನೂತನ ಕಟ್ಟಡ ಉದ್ಘಾಟಿಸಿ ಮಾತನಾಡಿದ ಅವರು, ‘ರೈತರು ಬೆಳೆದ ಬೆಳೆಗಳಿಗೆ ಮೌಲ್ಯವರ್ಧನೆ ಮಾಡಿ, ಉತ್ತಮ ಬೆಲೆ ಪಡೆದುಕೊಳ್ಳಲು ಸಹಕಾರ ಸಂಘಗಳು ಸಹಕಾರಿ ಆಗಲಿವೆ’ ಎಂದರು.</p>.<p>ಮಾಜಿ ಶಾಸಕ ಶ್ರೀಕಾಂತ ಕುಲಕರ್ಣಿ ಮಾತನಾಡಿ, ‘ಗ್ರಾಮೀಣ ಮಟ್ಟದಲ್ಲಿ ರೈತರಿಗೆ ಅಲ್ಪಾವಧಿ ಮತ್ತು ಮಧ್ಯಮಾವಧಿ ಸಾಲ ಸೌಲಭ್ಯ ಒದಗಿಸುವ ತಳಮಟ್ಟದ ಸಹಕಾರಿ ಸಂಸ್ಥೆಗಳಾಗಿವೆ. ಇವು ಕೃಷಿ ಚಟುವಟಿಕೆಗಳಿಗೆ ಅಗತ್ಯವಾದ ಬಂಡವಾಳ, ಗೊಬ್ಬರ, ಬಿತ್ತನೆ ಬೀಜ ಮತ್ತು ಕೀಟನಾಶಕಗಳನ್ನು ವಿತರಿಸುವ ಮೂಲಕ ರೈತರ ಆರ್ಥಿಕ ಸಬಲೀಕರಣಕ್ಕೆ ನೆರವಾಗುತ್ತವೆ’ ಎಂದು ತಿಳಿಸಿದರು.</p>.<p>‘ಈ ಸಂಘಗಳು ನಬಾರ್ಡ್ ಮತ್ತು ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್ಗಳಿಂದ ಮರು ಹಣಕಾಸು ಸೌಲಭ್ಯ ಪಡೆದುರೈತರಿಗೆ, ಉದ್ಯಮಿಗಳಿಗೆ ಆರ್ಥಿಕ ಸಹಾಯ ನೀಡುವಲ್ಲಿ ಸಹಕಾರಿಯಾಗಿವೆ’ ಎಂದರು.</p>.<p>ಸಾರಂಗ ಮಠದ ಮಾತೋಶ್ರೀ ಸುನಂದಮ್ಮ ತಾಯಿ, ಬಿ.ಕೆ.ಗಲಗಲಿ ಮಾತನಾಡಿದರು. ಪಂಚಯ್ಯಾ ಹಿರೇಮಠ, ಬಸಯ್ಯ ಮಠದ, ಈರಯ್ಯಾ ಹಿರೇಮಠ, ಸಂಘದ ಅಧ್ಯಕ್ಷ ರಾಮಪ್ಪ ಕಣಬೂರ, ವಿಧಾನ ಪರಿಷತ್ ಮಾಜಿ ಸದಸ್ಯ ಜಿ.ಎಸ್.ನ್ಯಾಮಗೌಡ, ಸುಶೀಲಕುಮಾರ ಬೆಳಗಲಿ, ಶಂಕರ ಬಾಲಪ್ಪನವರ, ರವಿ ಐಗಳಿ, ಸಂತೋಷ ಬಾಡಗಿ, ರಾಜಶೇಖರ ಟೊಪಗಿ, ಉಪಾಧ್ಯಕ್ಷೆ ಅಶ್ವಿನಿ ರುದ್ರಗೌಡ, ನಿರ್ದೇಶಕ ಅನೀಲ ಕುಂಚನೂರ, ಆನಂದ ದುಪದಾಳ, ನಿರ್ದೇಶಕ ಬಿ.ಎಸ್. ಸಿಂಧೂರ , ಚನಗೀರಿ ಹೊಸೂರ, ಸದಾಶಿವ ಕುಂಬಾರ ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260515-19-1859757145</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>