<p>ಜಮಖಂಡಿ: ‘ದೇಶದ ಹಿತಕ್ಕಾಗಿ ದುಡಿಯುವ ಏಕೈಕ ಪಕ್ಷ ಬಿಜೆಪಿ, ವ್ಯಕ್ತಿಗಿಂತಲೂ ಪಕ್ಷ ದೊಡ್ಡದು, ಪಕ್ಷಕ್ಕಿಂತ ದೇಶ ದೊಡ್ಡದು ಎಂಬ ಮನೋಭಾವದಿಂದ ದೇಶದ ಹಿತಕ್ಕಾಗಿ ಪಕ್ಷದ ಪ್ರತಿಯೊಬ್ಬರು ಕಾರ್ಯನಿರ್ವಹಿಸುತ್ತಾರೆ’ ಎಂದು ಶಾಸಕ ಜಗದೀಶ ಗುಡಗುಂಟಿ ಹೇಳಿದರು.</p>.<p>ತಾಲ್ಲೂಕಿನ ಸಿದ್ದಾಪುರ ಗ್ರಾಮದ ಪುಷ್ಪಾತಾಯಿ ಶಿಕ್ಷಣ ಸಂಸ್ಥೆಯ ಸಭಾಭವನದಲ್ಲಿ ಆಯೋಜಿಸಿದ್ದ ಪಂಡಿತ ದೀನದಯಾಳ ಉಪಾಧ್ಯಾಯ ಪ್ರ-ಶಿಕ್ಷಣ ಮಹಾಅಭಿಯಾನದ ಅಂಗವಾಗಿ ಈಚೆಗೆ ನಡೆದ ಮಂಡಲ ಪ್ರಶಿಕ್ಷಣ ವರ್ಗ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.</p>.<p>‘ಬಿಜೆಪಿ ಕೇವಲ ರಾಜಕೀಯ ಪಕ್ಷವಾಗಿರದೇ ಸನಾತನ ಸಂಸ್ಕೃ ತಿ, ರಾಷ್ಟ್ರಪ್ರೇಮ, ಇತಿಹಾಸ ಗಮನದಲ್ಲಿಟ್ಟು ಕೊಂಡು ಸಮೃದ್ಧ, ಬಲಿಷ್ಠ ರಾಷ್ಟ್ರ ನಿರ್ಮಾಣ ಕಾರ್ಯದಲ್ಲಿ ತೊಡಗಿದೆ’ ಎಂದರು.</p>.<p>‘ಪಕ್ಷ ಕಟ್ಟಿದ ಅನೇಕ ಹಿರಿಯರ ಪರಿಶ್ರಮ, ತ್ಯಾಗದಿಂದಾಗಿ ಇಂದು ವಿಶ್ವದ ಅತಿಹೆಚ್ಚು ಸದಸ್ಯರನ್ನು ಹೊಂದಿರುವ ಏಕೈಕ ಪಕ್ಷವಾಗಿ ಬೆಳೆದು ನಿಂತಿದೆ. ಮೂರು ವರ್ಷಕ್ಕೊಮ್ಮೆ ಸದಸ್ಯತ್ವ ಅಭಿಯಾನ ನಡೆಯುತ್ತದೆ. ಪಕ್ಷದ ಚಿಂತನೆ, ಉದ್ದೇಶಗಳನ್ನು ಮೆಚ್ಚಿ ಸಾಕಷ್ಟು ಜನರು ಸದಸ್ಯತ್ವ ಪಡೆದುಕೊಳ್ಳುತ್ತಾರೆ’ ಎಂದು ತಿಳಿಸಿದರು.</p>.<p>ಮಾಜಿ ಶಾಸಕ ಶ್ರೀಕಾಂತ ಕುಲಕರ್ಣಿ ಮಾತನಾಡಿ, ‘ಪಕ್ಷದ ಪ್ರತಿಯೊಬ್ಬ ಕಾರ್ಯಕರ್ತನ ವ್ಯಕ್ತಿತ್ವ ವಿಕಸನ, ನಾಯಕತ್ವ ಗುಣ ಬೆಳೆಸಲು, ಸಮಾಜಮುಖಿ ಕಾರ್ಯದಲ್ಲಿ ತೊಡಗಿಸಿಕೊಳ್ಳಲು ಅಭ್ಯಾಸವರ್ಗ, ಪ್ರಶಿಕ್ಷಣ ವರ್ಗ ಸೇರಿದಂತೆ ಅನೇಕ ಕಾರ್ಯಕ್ರಮಗಳು ನಡೆಯುತ್ತವೆ’ ಎಂದರು.</p>.<p>‘ಪಂಡಿತ್ ದೀನ ದಯಾಳ ಉಪಾಧ್ಯಾಯರು ಪಕ್ಷದ ನೇತೃತ್ವ ವಹಸಿಕೊಂಡು ಪಕ್ಷಕ್ಕೆ ತತ್ವ, ಶಿಕ್ಷಣ, ವಿಚಾರಗಳನ್ನು ನೀಡಿದರು. ಸಮಾಜದ ಕಟ್ಟಕಡೆಯ ವ್ಯಕ್ತಿಯ ಉದ್ಧಾರಕ್ಕೆ ಚಿಂತನೆ ನಡೆಸಿದ್ದ ಅವರು ಅಂತ್ಯೋದಯ ಎಂಬ ಹೆಸರುನೀಡಿದ್ದರು. ಉಪಾಧ್ಯಾಯರ ವಿಚಾರಗಳು ಇಂದಿಗೂ ಜೀವಂತವಾಗಿವೆ’ ಎಂದು ತಿಳಿಸಿದರು.</p>.<p>ನಗರಮಂಡಲ ಅಧ್ಯಕ್ಷ ಅಜಯ ಕಡಪಟ್ಟಿ, ಗ್ರಾಮೀಣ ಮಂಡಲ ಅಧ್ಯಕ್ಷ ಮಲ್ಲು ದಾನಗೊಂಡ, ವಿಜಯಲಕ್ಷ್ಮಿ ತುಂಗಳ, ಗೀತಾ ಸೂರ್ಯವಂಶಿ, ಶಶಿ ವಿಶ್ವಬ್ರಾಹ್ಮಣ, ಸೇರಿದಂತೆ ಪದಾಧಿಕಾರಿಗಳು ಕಾರ್ಯಕರ್ತರು ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260514-19-825866609</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಜಮಖಂಡಿ: ‘ದೇಶದ ಹಿತಕ್ಕಾಗಿ ದುಡಿಯುವ ಏಕೈಕ ಪಕ್ಷ ಬಿಜೆಪಿ, ವ್ಯಕ್ತಿಗಿಂತಲೂ ಪಕ್ಷ ದೊಡ್ಡದು, ಪಕ್ಷಕ್ಕಿಂತ ದೇಶ ದೊಡ್ಡದು ಎಂಬ ಮನೋಭಾವದಿಂದ ದೇಶದ ಹಿತಕ್ಕಾಗಿ ಪಕ್ಷದ ಪ್ರತಿಯೊಬ್ಬರು ಕಾರ್ಯನಿರ್ವಹಿಸುತ್ತಾರೆ’ ಎಂದು ಶಾಸಕ ಜಗದೀಶ ಗುಡಗುಂಟಿ ಹೇಳಿದರು.</p>.<p>ತಾಲ್ಲೂಕಿನ ಸಿದ್ದಾಪುರ ಗ್ರಾಮದ ಪುಷ್ಪಾತಾಯಿ ಶಿಕ್ಷಣ ಸಂಸ್ಥೆಯ ಸಭಾಭವನದಲ್ಲಿ ಆಯೋಜಿಸಿದ್ದ ಪಂಡಿತ ದೀನದಯಾಳ ಉಪಾಧ್ಯಾಯ ಪ್ರ-ಶಿಕ್ಷಣ ಮಹಾಅಭಿಯಾನದ ಅಂಗವಾಗಿ ಈಚೆಗೆ ನಡೆದ ಮಂಡಲ ಪ್ರಶಿಕ್ಷಣ ವರ್ಗ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.</p>.<p>‘ಬಿಜೆಪಿ ಕೇವಲ ರಾಜಕೀಯ ಪಕ್ಷವಾಗಿರದೇ ಸನಾತನ ಸಂಸ್ಕೃ ತಿ, ರಾಷ್ಟ್ರಪ್ರೇಮ, ಇತಿಹಾಸ ಗಮನದಲ್ಲಿಟ್ಟು ಕೊಂಡು ಸಮೃದ್ಧ, ಬಲಿಷ್ಠ ರಾಷ್ಟ್ರ ನಿರ್ಮಾಣ ಕಾರ್ಯದಲ್ಲಿ ತೊಡಗಿದೆ’ ಎಂದರು.</p>.<p>‘ಪಕ್ಷ ಕಟ್ಟಿದ ಅನೇಕ ಹಿರಿಯರ ಪರಿಶ್ರಮ, ತ್ಯಾಗದಿಂದಾಗಿ ಇಂದು ವಿಶ್ವದ ಅತಿಹೆಚ್ಚು ಸದಸ್ಯರನ್ನು ಹೊಂದಿರುವ ಏಕೈಕ ಪಕ್ಷವಾಗಿ ಬೆಳೆದು ನಿಂತಿದೆ. ಮೂರು ವರ್ಷಕ್ಕೊಮ್ಮೆ ಸದಸ್ಯತ್ವ ಅಭಿಯಾನ ನಡೆಯುತ್ತದೆ. ಪಕ್ಷದ ಚಿಂತನೆ, ಉದ್ದೇಶಗಳನ್ನು ಮೆಚ್ಚಿ ಸಾಕಷ್ಟು ಜನರು ಸದಸ್ಯತ್ವ ಪಡೆದುಕೊಳ್ಳುತ್ತಾರೆ’ ಎಂದು ತಿಳಿಸಿದರು.</p>.<p>ಮಾಜಿ ಶಾಸಕ ಶ್ರೀಕಾಂತ ಕುಲಕರ್ಣಿ ಮಾತನಾಡಿ, ‘ಪಕ್ಷದ ಪ್ರತಿಯೊಬ್ಬ ಕಾರ್ಯಕರ್ತನ ವ್ಯಕ್ತಿತ್ವ ವಿಕಸನ, ನಾಯಕತ್ವ ಗುಣ ಬೆಳೆಸಲು, ಸಮಾಜಮುಖಿ ಕಾರ್ಯದಲ್ಲಿ ತೊಡಗಿಸಿಕೊಳ್ಳಲು ಅಭ್ಯಾಸವರ್ಗ, ಪ್ರಶಿಕ್ಷಣ ವರ್ಗ ಸೇರಿದಂತೆ ಅನೇಕ ಕಾರ್ಯಕ್ರಮಗಳು ನಡೆಯುತ್ತವೆ’ ಎಂದರು.</p>.<p>‘ಪಂಡಿತ್ ದೀನ ದಯಾಳ ಉಪಾಧ್ಯಾಯರು ಪಕ್ಷದ ನೇತೃತ್ವ ವಹಸಿಕೊಂಡು ಪಕ್ಷಕ್ಕೆ ತತ್ವ, ಶಿಕ್ಷಣ, ವಿಚಾರಗಳನ್ನು ನೀಡಿದರು. ಸಮಾಜದ ಕಟ್ಟಕಡೆಯ ವ್ಯಕ್ತಿಯ ಉದ್ಧಾರಕ್ಕೆ ಚಿಂತನೆ ನಡೆಸಿದ್ದ ಅವರು ಅಂತ್ಯೋದಯ ಎಂಬ ಹೆಸರುನೀಡಿದ್ದರು. ಉಪಾಧ್ಯಾಯರ ವಿಚಾರಗಳು ಇಂದಿಗೂ ಜೀವಂತವಾಗಿವೆ’ ಎಂದು ತಿಳಿಸಿದರು.</p>.<p>ನಗರಮಂಡಲ ಅಧ್ಯಕ್ಷ ಅಜಯ ಕಡಪಟ್ಟಿ, ಗ್ರಾಮೀಣ ಮಂಡಲ ಅಧ್ಯಕ್ಷ ಮಲ್ಲು ದಾನಗೊಂಡ, ವಿಜಯಲಕ್ಷ್ಮಿ ತುಂಗಳ, ಗೀತಾ ಸೂರ್ಯವಂಶಿ, ಶಶಿ ವಿಶ್ವಬ್ರಾಹ್ಮಣ, ಸೇರಿದಂತೆ ಪದಾಧಿಕಾರಿಗಳು ಕಾರ್ಯಕರ್ತರು ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260514-19-825866609</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>