ಸೋಮವಾರ, 20 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಜಮಖಂಡಿ | ಶಕ್ತಿ ಯೋಜನೆಗೆ ಚಾಲನೆ: ಕಾಂಗ್ರೆಸ್, ಬಿಜೆಪಿ ನಾಯಕರ ನಡುವೆ ವಾಗ್ವಾದ

Published 11 ಜೂನ್ 2023, 10:27 IST
Last Updated 11 ಜೂನ್ 2023, 10:27 IST
ಅಕ್ಷರ ಗಾತ್ರ

ಜಮಖಂಡಿ: ಶಕ್ತಿ ಯೋಜನೆ ಚಾಲನೆ ಸಂದರ್ಭದಲ್ಲಿ ಕಾಂಗ್ರೆಸ್, ಬಿಜೆಪಿ ನಾಯಕರ ನಡುವೆ ವಾಗ್ವಾದ ನಡೆಯಿತು. ಬಿಜೆಪಿ ಮುಖಂಡರು ಅಧಿಕಾರಿಗಳೊಂದಿಗೆ ವಾಗ್ವಾದಕ್ಕಿಳಿದರು.

ಬಿಜೆಪಿ ಶಾಸಕ ಜಗದೀಶ ಗುಡಗುಂಟಿ ಶಕ್ತಿ ಯೋಜನೆ ಚಾಲನೆ ನೀಡಲು ನಿಲ್ದಾಣಕ್ಕೆ ಬಂದಿದ್ದರು. ಆಗ ಕಾಂಗ್ರೆಸ್ ಮಾಜಿ ಶಾಸಕ ಆನಂದ ನ್ಯಾಮಗೌಡ ಬೆಂಬಲಿಗರೊಂದಿಗೆ ಬಂದರು.

ಕಾಂಗ್ರೆಸ್ ಧ್ವಜ ಪ್ರದರ್ಶಿಸಿದ್ದಕ್ಕೆ ಬಿಜೆಪಿ ನಾಯಕರು ಆಕ್ಷೇಪ ವ್ಯಕ್ತಪಡಿಸಿದರು. ಆಗ ಕಾಂಗ್ರೆಸ್ ಬೆಂಬಲಿಗರು ಕಾಂಗ್ರೆಸ್ ಗೆ ಜೈ ಎಂದು ಕೂಗಿದರೆ, ಬೆಜೆಪಿ ಬೆಂಬಲಿಗರು ಜೈಶ್ರೀರಾಮ ಎಂದು ಕೂಗಿದರು.

ಸರ್ಕಾರಿ ಕಾರ್ಯಕ್ರಮದಲ್ಲಿ ಕಾಂಗ್ರೆಸ್ ಧ್ವಜ ಪ್ರದರ್ಶನ ಮಾಡಿದ್ದಕ್ಕೆ ಅಧಿಕಾರಿಗಳನ್ನು ಬಿಜೆಪಿ ಮುಖಂಡರು ತರಾಟೆಗೆ ತೆಗೆದುಕೊಂಡರು.

ಶಾಸಕ ಜಗದೀಶ ಗುಡಗುಂಟಿ, ಮಾಜಿ ಶಾಸಕ ಆನಂದ ನ್ಯಾಮಗೌಡ ಯೋಜನೆ‌ ಹಸಿರು ಧ್ವಜ ತೋರಿಸಿ ಚಾಲನೆ ನೀಡಿದರು

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT