<p><strong>ಜಮಖಂಡಿ:</strong> ಕ್ಷೇತ್ರದಲ್ಲಿ ₹ 11 ಕೋಟಿ ವೆಚ್ಚದಲ್ಲಿ ವಿವಿಧ ಕಾಮಗಾರಿಗೆ ಚಾಲನೆ ನೀಡಲಾಗಿದೆ ಎಂದು ಶಾಸಕ ಜಗದೀಶ ಗುಡಗುಂಟಿ ತಿಳಿಸಿದರು.</p>.<p>ನಗರದ ವಾಣಿ ಪ್ಲಾಟ್ನಲ್ಲಿ ಅಲ್ಪಸಂಖ್ಯಾತರ ಮೆಟ್ರಿಕ್ ನಂತರದ ವಿದ್ಯಾರ್ಥಿಗಳ ವಸತಿ ಗೃಹ ನಿರ್ಮಾಣ ಕಾಮಗಾರಿಗೆ ಭೂಮಿಪೂಜೆ ನೆರವೇರಿಸಿ ಅವರು ಮಾತನಾಡಿದರು.</p>.<p>ಅಲ್ಪಸಂಖ್ಯಾತರ ಮೆಟ್ರಿಕ್ ನಂತರದ ವಿದ್ಯಾರ್ಥಿಗಳ ವಸತಿ ಗೃಹ ನಿರ್ಮಾಣ ಕಾಮಗಾರಿಗೆ ₹4.56 ಕೋಟಿ, ಸಿದ್ದಾಪುರ ಗ್ರಾಮದಲ್ಲಿ ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ವಸತಿ ಶಾಲಾ ಆವರಣದಲ್ಲಿ ವಸತಿ ಗೃಹ ನಿರ್ಮಾಣಕ್ಕೆ ₹ 4.93 ಕೋಟಿ, ಲೋಕೋಪಯೋಗಿ ಇಲಾಖೆಯಿಂದ ಕಾಗವಾಡ-ಕಲಾದಗಿ ಗಣಿ ಕೂಡುವ ರಸ್ತೆ ಕಾಮಗಾರಿಗೆ ₹ 2.10 ಕೋಟಿ ವೆಚ್ಚದಲ್ಲಿ ನಿರ್ಮಾಣಕ್ಕೆ ಚಾಲನೆ ನೀಡಲಾಗಿದೆ ಎಂದರು.</p>.<p>ಅಜಯ ಕಡಪಟ್ಟಿ, ಮಲ್ಲು ದಾನಗೊಂಡ, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ತಾಲ್ಲೂಕು ವಿಸ್ತರಣಾಧಿಕಾರಿ ಸಂತೋಷ ಬಾಡಗಿ, ಈಶ್ವರ ಆದೆಪ್ಪನವರ, ಸಮೀರ ಕಂಗನೊಳ್ಳಿ, ಭೀಮಪ್ಪ ಬಾಳಪ್ಪಗೋಳ, ಗಣೇಶ ಮೆಂಡಿಗೇರಿ, ಶ್ರೀಧರ ಕಂಬಿ, ಗುತ್ತಿಗೆದಾರ ಆರ್.ಎಲ್. ಬಿರಾದಾರ ಪಾಟೀಲ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಜಮಖಂಡಿ:</strong> ಕ್ಷೇತ್ರದಲ್ಲಿ ₹ 11 ಕೋಟಿ ವೆಚ್ಚದಲ್ಲಿ ವಿವಿಧ ಕಾಮಗಾರಿಗೆ ಚಾಲನೆ ನೀಡಲಾಗಿದೆ ಎಂದು ಶಾಸಕ ಜಗದೀಶ ಗುಡಗುಂಟಿ ತಿಳಿಸಿದರು.</p>.<p>ನಗರದ ವಾಣಿ ಪ್ಲಾಟ್ನಲ್ಲಿ ಅಲ್ಪಸಂಖ್ಯಾತರ ಮೆಟ್ರಿಕ್ ನಂತರದ ವಿದ್ಯಾರ್ಥಿಗಳ ವಸತಿ ಗೃಹ ನಿರ್ಮಾಣ ಕಾಮಗಾರಿಗೆ ಭೂಮಿಪೂಜೆ ನೆರವೇರಿಸಿ ಅವರು ಮಾತನಾಡಿದರು.</p>.<p>ಅಲ್ಪಸಂಖ್ಯಾತರ ಮೆಟ್ರಿಕ್ ನಂತರದ ವಿದ್ಯಾರ್ಥಿಗಳ ವಸತಿ ಗೃಹ ನಿರ್ಮಾಣ ಕಾಮಗಾರಿಗೆ ₹4.56 ಕೋಟಿ, ಸಿದ್ದಾಪುರ ಗ್ರಾಮದಲ್ಲಿ ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ವಸತಿ ಶಾಲಾ ಆವರಣದಲ್ಲಿ ವಸತಿ ಗೃಹ ನಿರ್ಮಾಣಕ್ಕೆ ₹ 4.93 ಕೋಟಿ, ಲೋಕೋಪಯೋಗಿ ಇಲಾಖೆಯಿಂದ ಕಾಗವಾಡ-ಕಲಾದಗಿ ಗಣಿ ಕೂಡುವ ರಸ್ತೆ ಕಾಮಗಾರಿಗೆ ₹ 2.10 ಕೋಟಿ ವೆಚ್ಚದಲ್ಲಿ ನಿರ್ಮಾಣಕ್ಕೆ ಚಾಲನೆ ನೀಡಲಾಗಿದೆ ಎಂದರು.</p>.<p>ಅಜಯ ಕಡಪಟ್ಟಿ, ಮಲ್ಲು ದಾನಗೊಂಡ, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ತಾಲ್ಲೂಕು ವಿಸ್ತರಣಾಧಿಕಾರಿ ಸಂತೋಷ ಬಾಡಗಿ, ಈಶ್ವರ ಆದೆಪ್ಪನವರ, ಸಮೀರ ಕಂಗನೊಳ್ಳಿ, ಭೀಮಪ್ಪ ಬಾಳಪ್ಪಗೋಳ, ಗಣೇಶ ಮೆಂಡಿಗೇರಿ, ಶ್ರೀಧರ ಕಂಬಿ, ಗುತ್ತಿಗೆದಾರ ಆರ್.ಎಲ್. ಬಿರಾದಾರ ಪಾಟೀಲ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>