<p><strong>ಜಮಖಂಡಿ</strong>: ಗ್ರಾಮೀಣ ಪ್ರದೇಶದಲ್ಲಿ ತುರ್ತು ಚಿಕಿತ್ಸಾ ಸೌಲಭ್ಯಗಳ ಕೊರತೆ ಇರುತ್ತದೆ ಹಾಗೂ ತುರ್ತು ಪರಿಸ್ಥಿತಿಯಲ್ಲಿ ಜನರಿಗೆ ಅನುಕೂಲ ಮಾಡುವ ದೃಷ್ಟಿಯಿಂದ ಆಂಬುಲನ್ಸ್ ಖರೀದಿ ಮಾಡಲಾಗಿದ್ದು, ಜನರು ಇದರ ಸದು ಪಯೋಗ ಪಡೆದುಕೊಳ್ಳಬೇಕು ಎಂದು ರೋಟರಿ ಗವರ್ನರ್ ಶರದ್ ಪೈ ಹೇಳಿದರು.</p>.<p>ಇಲ್ಲಿನ ಸಿದ್ದಿ ವಿನಾಯಕ ಆಸ್ಪತ್ರೆಯ ಆವರಣದಲ್ಲಿ ಶನಿವಾರ ರೋಟರಿ ಸಂಸ್ಥೆ ರಾಮತೀರ್ಥ ವತಿಯಿಂದ ಅಂತರರಾಷ್ಟ್ರೀಯ ರೋಟರಿ ಫೌಂಡೇಶನ ಯೋಜನೆಯ ಅನುದಾನದಡಿ ₹ 44 ಲಕ್ಷ ಮೌಲ್ಯದ ಎರಡು ಐಸಿಯು ಕಾರ್ಡಿಯಾಕ್ ಅಂಬುಲೇನ್ಸ್ ವಾಹನಗಳನ್ನು ಸಿದ್ದಿ ವಿನಾಯಕ ಆಸ್ಪತ್ರೆಗೆ ಹಸ್ತಾಂತರ ಮಾಡಿ ಮಾತನಾಡಿದರು.</p>.<p>ಡಾ.ವಿಜಯ ಮೇತ್ರಿ ಮಾತನಾಡಿ, ಜನರ ಜೀವ ಉಳಿಸುವ ಕಾರ್ಯದಲ್ಲಿ ಆಂಬುಲನ್ಸ್ ಮುಖ್ಯಪಾತ್ರ ವಹಿಸುತ್ತದೆ, 25 ಕಿ.ಮೀ ಒಳಗೆ ತೊಂದರೆಯಾದರೆ ಉಚಿತವಾಗಿ ಆಂಬುಲನ್ಸ್ ಸೇವೆಯನ್ನು ನೀಡಲಾಗುವುದು ಎಂದರು.</p>.<p>ಡಾ.ಗಿರೀಶ ಮಾಸೂರ್ಕರ್, ರೋಟರಿ ರಾಮತೀರ್ಥ ಅಧ್ಯಕ್ಷ ಕಿರಣ ಜಾಲಿಹಾಳ, ಮಲ್ಲಿಕಾರ್ಜುನ ಬಡೀಗೆರ, ರಾಜು ವಾರದ, ಅಶೀಖ ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260519-19-800303914</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಜಮಖಂಡಿ</strong>: ಗ್ರಾಮೀಣ ಪ್ರದೇಶದಲ್ಲಿ ತುರ್ತು ಚಿಕಿತ್ಸಾ ಸೌಲಭ್ಯಗಳ ಕೊರತೆ ಇರುತ್ತದೆ ಹಾಗೂ ತುರ್ತು ಪರಿಸ್ಥಿತಿಯಲ್ಲಿ ಜನರಿಗೆ ಅನುಕೂಲ ಮಾಡುವ ದೃಷ್ಟಿಯಿಂದ ಆಂಬುಲನ್ಸ್ ಖರೀದಿ ಮಾಡಲಾಗಿದ್ದು, ಜನರು ಇದರ ಸದು ಪಯೋಗ ಪಡೆದುಕೊಳ್ಳಬೇಕು ಎಂದು ರೋಟರಿ ಗವರ್ನರ್ ಶರದ್ ಪೈ ಹೇಳಿದರು.</p>.<p>ಇಲ್ಲಿನ ಸಿದ್ದಿ ವಿನಾಯಕ ಆಸ್ಪತ್ರೆಯ ಆವರಣದಲ್ಲಿ ಶನಿವಾರ ರೋಟರಿ ಸಂಸ್ಥೆ ರಾಮತೀರ್ಥ ವತಿಯಿಂದ ಅಂತರರಾಷ್ಟ್ರೀಯ ರೋಟರಿ ಫೌಂಡೇಶನ ಯೋಜನೆಯ ಅನುದಾನದಡಿ ₹ 44 ಲಕ್ಷ ಮೌಲ್ಯದ ಎರಡು ಐಸಿಯು ಕಾರ್ಡಿಯಾಕ್ ಅಂಬುಲೇನ್ಸ್ ವಾಹನಗಳನ್ನು ಸಿದ್ದಿ ವಿನಾಯಕ ಆಸ್ಪತ್ರೆಗೆ ಹಸ್ತಾಂತರ ಮಾಡಿ ಮಾತನಾಡಿದರು.</p>.<p>ಡಾ.ವಿಜಯ ಮೇತ್ರಿ ಮಾತನಾಡಿ, ಜನರ ಜೀವ ಉಳಿಸುವ ಕಾರ್ಯದಲ್ಲಿ ಆಂಬುಲನ್ಸ್ ಮುಖ್ಯಪಾತ್ರ ವಹಿಸುತ್ತದೆ, 25 ಕಿ.ಮೀ ಒಳಗೆ ತೊಂದರೆಯಾದರೆ ಉಚಿತವಾಗಿ ಆಂಬುಲನ್ಸ್ ಸೇವೆಯನ್ನು ನೀಡಲಾಗುವುದು ಎಂದರು.</p>.<p>ಡಾ.ಗಿರೀಶ ಮಾಸೂರ್ಕರ್, ರೋಟರಿ ರಾಮತೀರ್ಥ ಅಧ್ಯಕ್ಷ ಕಿರಣ ಜಾಲಿಹಾಳ, ಮಲ್ಲಿಕಾರ್ಜುನ ಬಡೀಗೆರ, ರಾಜು ವಾರದ, ಅಶೀಖ ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260519-19-800303914</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>