<p><strong>ಜಮಖಂಡಿ:</strong> ಇಲ್ಲಿನ ಸರ್ಕಾರಿ ತಾಯಿ–ಮಕ್ಕಳ ಆಸ್ಪತ್ರೆಯಲ್ಲಿ ಹೊರಗುತ್ತಿಗೆ ಆಧಾರದಲ್ಲಿ ಕೆಲಸ ಮಾಡುತ್ತಿದ್ದ ನೌಕಕರು ವಜಾಗೊಂಡಿದ್ದರಿಂದ ಬೇಸತ್ತು ಶುಕ್ರವಾರ ರಾತ್ರಿ ಪೆಟ್ರೋಲ್ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದರು.</p>.<p>ಸುನಂದಾ ಮಠಪತಿ, ಹಣಮಂತ ಕಾಂಬಳೆ, ವಿಜಯ ಘೋರ್ಪಡೆ, ಯಮುನಾ ಅವರು ಆಸ್ಪತ್ರೆಯ ಮುಖ್ಯ ವೈದ್ಯಾಧಿಕಾರಿ ವಾಸಪ್ಪ ಮುದ್ದಿಗೌಡರ ಅವರ ಕೊಠಡಿ ಬಾಗಿಲಿ ಬಳಿ ಕುಳಿತು ಪ್ರತಿಭಟನೆ ನಡೆಸಿದರು. ಈ ವೇಳೆ ವಾಗ್ವಾದ ನಡೆಯಿತು. ತಮ್ಮ ಬೇಡಿಕೆಗೆ ಮುಖ್ಯ ವೈದ್ಯಾಧಿಕಾರಿ ಸ್ಪಂದಿಸುತ್ತಿಲ್ಲ ಎಂದು ಆರೋಪಿಸಿ, ಆತ್ಮಹತ್ಯೆಗೆ ಮುಂದಾದರು.</p>.<p>ಸ್ಥಳದಲ್ಲಿದ್ದವರು ಅವರನ್ನು ತಡೆದರು. ಘಟನೆಯಲ್ಲಿ ನಾಲ್ವರ ಬಾಯಿಯೊಳಗೆ ಪೆಟ್ರೋಲ್ ಹೋಗಿದ್ದರಿಂದ ಆಸ್ಪತ್ರೆಗೆ ಸೇರಿಸಿ, ಚಿಕಿತ್ಸೆ ಕೊಡಿಸಲಾಯಿತು. </p>.<p>‘ಆಸ್ಪತ್ರೆಯಲ್ಲಿ ಹೊರಗುತ್ತಿಗೆ ಏಜೆನ್ಸಿ ಮೂಲಕ ನೇಮಕದ 10ಕ್ಕೂ ಅಧಿಕ ನೌಕರರು ಹಲವಾರು ವರ್ಷಗಳಿಂದ ಕೆಲಸ ಮಾಡುತ್ತಿದ್ದರು. ರೋಸ್ಟರ್ ನಿಯಮದ ಪ್ರಕಾರ ಇತ್ತೀಚೆಗೆ ಏಜೆನ್ಸಿ ಅವರನ್ನು ವಜಾಗೊಳಿಸಿತ್ತು. ಮರುನೇಮಕಕ್ಕೆ ಆಗ್ರಹಿಸಿದರೂ ಸ್ಪಂದಿಸಿಲ್ಲ. ಬೇರೆ ತಾಲ್ಲೂಕಿನವರನ್ನು ನೇಮಕ ಮಾಡಿಕೊಳ್ಳಲಾಗುತ್ತಿದೆ’ ಎಂದು ಪ್ರತಿಭಟನಕಾರರು ಆರೋಪಿಸಿದರು.</p>.<h2>ನಮಗೆ ಸಂಬಂಧವಿಲ್ಲ’ </h2>.<p>‘ಪ್ರತಿ ವರ್ಷ ಟೆಂಡರ್ ಕರೆಯಲಾಗುತ್ತದೆ. ಹಲವಾರು ಏಜನ್ಸಿಗಳು ಅರ್ಜಿ ಸಲ್ಲಿಸುತ್ತವೆ. ಇದರಲ್ಲಿ ಆಯ್ಕೆಯಾದ ಏಜನ್ಸಿಯು ನೌಕರರನ್ನು ನೇಮಕ ಮಾಡಿಕೊಳ್ಳುತ್ತದೆ. ಸಿಬ್ಬಂದಿಯನ್ನು ಪರಿಶೀಲಿಸಿ ಆಸ್ಪತ್ರೆ ಕೆಲಸಕ್ಕೆ ತೆಗೆದುಕೊಳ್ಳುತ್ತೇವೆ. ಈ ಪ್ರತಿಭಟನೆಗೂ ಆಸ್ಪತ್ರೆಗೂ ಯಾವುದೇ ಸಂಬಂಧ ಇಲ್ಲ’ ಎಂದು ಮುಖ್ಯ ವೈದ್ಯಾಧಿಕಾರಿ ವಾಸಪ್ಪ ಮುದ್ದಿಗೌಡರ ಪ್ರಕ್ರಿಯಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಜಮಖಂಡಿ:</strong> ಇಲ್ಲಿನ ಸರ್ಕಾರಿ ತಾಯಿ–ಮಕ್ಕಳ ಆಸ್ಪತ್ರೆಯಲ್ಲಿ ಹೊರಗುತ್ತಿಗೆ ಆಧಾರದಲ್ಲಿ ಕೆಲಸ ಮಾಡುತ್ತಿದ್ದ ನೌಕಕರು ವಜಾಗೊಂಡಿದ್ದರಿಂದ ಬೇಸತ್ತು ಶುಕ್ರವಾರ ರಾತ್ರಿ ಪೆಟ್ರೋಲ್ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದರು.</p>.<p>ಸುನಂದಾ ಮಠಪತಿ, ಹಣಮಂತ ಕಾಂಬಳೆ, ವಿಜಯ ಘೋರ್ಪಡೆ, ಯಮುನಾ ಅವರು ಆಸ್ಪತ್ರೆಯ ಮುಖ್ಯ ವೈದ್ಯಾಧಿಕಾರಿ ವಾಸಪ್ಪ ಮುದ್ದಿಗೌಡರ ಅವರ ಕೊಠಡಿ ಬಾಗಿಲಿ ಬಳಿ ಕುಳಿತು ಪ್ರತಿಭಟನೆ ನಡೆಸಿದರು. ಈ ವೇಳೆ ವಾಗ್ವಾದ ನಡೆಯಿತು. ತಮ್ಮ ಬೇಡಿಕೆಗೆ ಮುಖ್ಯ ವೈದ್ಯಾಧಿಕಾರಿ ಸ್ಪಂದಿಸುತ್ತಿಲ್ಲ ಎಂದು ಆರೋಪಿಸಿ, ಆತ್ಮಹತ್ಯೆಗೆ ಮುಂದಾದರು.</p>.<p>ಸ್ಥಳದಲ್ಲಿದ್ದವರು ಅವರನ್ನು ತಡೆದರು. ಘಟನೆಯಲ್ಲಿ ನಾಲ್ವರ ಬಾಯಿಯೊಳಗೆ ಪೆಟ್ರೋಲ್ ಹೋಗಿದ್ದರಿಂದ ಆಸ್ಪತ್ರೆಗೆ ಸೇರಿಸಿ, ಚಿಕಿತ್ಸೆ ಕೊಡಿಸಲಾಯಿತು. </p>.<p>‘ಆಸ್ಪತ್ರೆಯಲ್ಲಿ ಹೊರಗುತ್ತಿಗೆ ಏಜೆನ್ಸಿ ಮೂಲಕ ನೇಮಕದ 10ಕ್ಕೂ ಅಧಿಕ ನೌಕರರು ಹಲವಾರು ವರ್ಷಗಳಿಂದ ಕೆಲಸ ಮಾಡುತ್ತಿದ್ದರು. ರೋಸ್ಟರ್ ನಿಯಮದ ಪ್ರಕಾರ ಇತ್ತೀಚೆಗೆ ಏಜೆನ್ಸಿ ಅವರನ್ನು ವಜಾಗೊಳಿಸಿತ್ತು. ಮರುನೇಮಕಕ್ಕೆ ಆಗ್ರಹಿಸಿದರೂ ಸ್ಪಂದಿಸಿಲ್ಲ. ಬೇರೆ ತಾಲ್ಲೂಕಿನವರನ್ನು ನೇಮಕ ಮಾಡಿಕೊಳ್ಳಲಾಗುತ್ತಿದೆ’ ಎಂದು ಪ್ರತಿಭಟನಕಾರರು ಆರೋಪಿಸಿದರು.</p>.<h2>ನಮಗೆ ಸಂಬಂಧವಿಲ್ಲ’ </h2>.<p>‘ಪ್ರತಿ ವರ್ಷ ಟೆಂಡರ್ ಕರೆಯಲಾಗುತ್ತದೆ. ಹಲವಾರು ಏಜನ್ಸಿಗಳು ಅರ್ಜಿ ಸಲ್ಲಿಸುತ್ತವೆ. ಇದರಲ್ಲಿ ಆಯ್ಕೆಯಾದ ಏಜನ್ಸಿಯು ನೌಕರರನ್ನು ನೇಮಕ ಮಾಡಿಕೊಳ್ಳುತ್ತದೆ. ಸಿಬ್ಬಂದಿಯನ್ನು ಪರಿಶೀಲಿಸಿ ಆಸ್ಪತ್ರೆ ಕೆಲಸಕ್ಕೆ ತೆಗೆದುಕೊಳ್ಳುತ್ತೇವೆ. ಈ ಪ್ರತಿಭಟನೆಗೂ ಆಸ್ಪತ್ರೆಗೂ ಯಾವುದೇ ಸಂಬಂಧ ಇಲ್ಲ’ ಎಂದು ಮುಖ್ಯ ವೈದ್ಯಾಧಿಕಾರಿ ವಾಸಪ್ಪ ಮುದ್ದಿಗೌಡರ ಪ್ರಕ್ರಿಯಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>