<p><strong>ಜಮಖಂಡಿ:</strong> ನಗರದ ರಸ್ತೆಗಳ ಮೇಲೆ, ಚರಂಡಿ ಮೇಲೆ ಅನಧಿಕೃತವಾಗಿ ಮನೆಗಳ ತಡೆಗೋಡೆ, ಶೌಚಾಲಯ, ನೀರಿನ ಟ್ಯಾಂಕ್ ನಿರ್ಮಿಸಿಕೊಂಡವರು ತಾವೇ ತೆಗೆದುಕೊಳ್ಳಬೇಕು. ಒಂದು ವೇಳೆ ಅತಿಕ್ರಮಣ ಕಂಡು ಬಂದರೆ ನಗರಸಭೆಯಿಂದ ತೆರವುಗೊಳಿಸಲಾಗುವದು ಎಂದು ಪೌರಾಯುಕ್ತ ಜ್ಯೋತಿಗಿರೀಶ ಹೇಳಿದರು.</p>.<p>ನಗರದ ಝಮ್ ಝಮ್ ಕಾಲೋನಿಯಲ್ಲಿ ಚರಂಡಿಮೇಲೆ ಅನಧೀಕೃತವಾಗಿ ನಿರ್ಮಿಸಿಕೊಂಡಿರುವ ಕಟ್ಟಡಗಳನ್ನು ನಗರಸಭೆ ಅಧಿಕಾರಿಗಳು ಬುಧವಾರ ಜೆಸಿಬಿ ಮೂಲಕ ತೆರವುಗೊಳಿಸಿ ಮಾತನಾಡಿದರು.</p>.<p>'ನಮ್ಮ ಕಚೇರಿಗೆ ಸಾಕಷ್ಟು ದೂರುಗಳು ಬರುತ್ತಿರುವ ಹಿನ್ನೆಲೆಯಲ್ಲಿ ಯಾರು ನಿಯಮ ಉಲ್ಲಂಘಿಸಿ ನಿರ್ಮಿಸಿಕೊಂಡಿರುವ ಮತ್ತು ಸಾರ್ವಜನಿಕ ಸ್ಥಳಗಳನ್ನು ಆಕ್ರಮಿಸಿಕೊಂಡಿರುವ ಮತ್ತು ಅನುಮತಿ ಪಡೆಯದೆ ನಿರ್ಮಿಸಿಕೊಂಡಿರುವ ಎಲ್ಲ ಕಟ್ಟಡಗಳನ್ನು ತೆರುವುಗೊಳಿಸಲಾಗುವದು’ ಎಂದು ತಿಳಿಸಿದರು.</p>.<p>ನಗರ ಸೌಂದರ್ಯೀಕರಣಕ್ಕಾಗಿ ನಗರಸಭೆಯಿಂದ ವಿವಿಧ ಕಾಮಗಾರಿಗಳ ಯೋಜನೆ ಮಾಡಿಕೊಳ್ಳಲಾಗಿದೆ ಇದಕ್ಕೆ ಸಾರ್ವಜನಿಕರು ಸಹಕಾರ ನೀಡಬೇಕು ಎಂದರು.</p>.<p>ಈ ಸಂದರ್ಭದಲ್ಲಿ ಪರಿಸರ ಎಂಜಿನಿಯರ್ ಕುಸುಮಾ ಸೊಪ್ಪಡ್ಲ, ಕಂದಾಯ ಅಧಿಕಾರಿ ಯಲ್ಲಪ್ಪ ಬಿದರಿ, ಆರೋಗ್ಯ ಅಧಿಕಾರಿಗಳಾದ ವಿನಾಯಕ ನಿಡೋಣಿ, ಸಚೀನ ಹಿರೇಮಠ, ಮಂಜುನಾಥ ಹಡಪದ, ಶ್ರೀಕಾಂತ ಘಾಟಗೆ ಇದ್ದರು</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಜಮಖಂಡಿ:</strong> ನಗರದ ರಸ್ತೆಗಳ ಮೇಲೆ, ಚರಂಡಿ ಮೇಲೆ ಅನಧಿಕೃತವಾಗಿ ಮನೆಗಳ ತಡೆಗೋಡೆ, ಶೌಚಾಲಯ, ನೀರಿನ ಟ್ಯಾಂಕ್ ನಿರ್ಮಿಸಿಕೊಂಡವರು ತಾವೇ ತೆಗೆದುಕೊಳ್ಳಬೇಕು. ಒಂದು ವೇಳೆ ಅತಿಕ್ರಮಣ ಕಂಡು ಬಂದರೆ ನಗರಸಭೆಯಿಂದ ತೆರವುಗೊಳಿಸಲಾಗುವದು ಎಂದು ಪೌರಾಯುಕ್ತ ಜ್ಯೋತಿಗಿರೀಶ ಹೇಳಿದರು.</p>.<p>ನಗರದ ಝಮ್ ಝಮ್ ಕಾಲೋನಿಯಲ್ಲಿ ಚರಂಡಿಮೇಲೆ ಅನಧೀಕೃತವಾಗಿ ನಿರ್ಮಿಸಿಕೊಂಡಿರುವ ಕಟ್ಟಡಗಳನ್ನು ನಗರಸಭೆ ಅಧಿಕಾರಿಗಳು ಬುಧವಾರ ಜೆಸಿಬಿ ಮೂಲಕ ತೆರವುಗೊಳಿಸಿ ಮಾತನಾಡಿದರು.</p>.<p>'ನಮ್ಮ ಕಚೇರಿಗೆ ಸಾಕಷ್ಟು ದೂರುಗಳು ಬರುತ್ತಿರುವ ಹಿನ್ನೆಲೆಯಲ್ಲಿ ಯಾರು ನಿಯಮ ಉಲ್ಲಂಘಿಸಿ ನಿರ್ಮಿಸಿಕೊಂಡಿರುವ ಮತ್ತು ಸಾರ್ವಜನಿಕ ಸ್ಥಳಗಳನ್ನು ಆಕ್ರಮಿಸಿಕೊಂಡಿರುವ ಮತ್ತು ಅನುಮತಿ ಪಡೆಯದೆ ನಿರ್ಮಿಸಿಕೊಂಡಿರುವ ಎಲ್ಲ ಕಟ್ಟಡಗಳನ್ನು ತೆರುವುಗೊಳಿಸಲಾಗುವದು’ ಎಂದು ತಿಳಿಸಿದರು.</p>.<p>ನಗರ ಸೌಂದರ್ಯೀಕರಣಕ್ಕಾಗಿ ನಗರಸಭೆಯಿಂದ ವಿವಿಧ ಕಾಮಗಾರಿಗಳ ಯೋಜನೆ ಮಾಡಿಕೊಳ್ಳಲಾಗಿದೆ ಇದಕ್ಕೆ ಸಾರ್ವಜನಿಕರು ಸಹಕಾರ ನೀಡಬೇಕು ಎಂದರು.</p>.<p>ಈ ಸಂದರ್ಭದಲ್ಲಿ ಪರಿಸರ ಎಂಜಿನಿಯರ್ ಕುಸುಮಾ ಸೊಪ್ಪಡ್ಲ, ಕಂದಾಯ ಅಧಿಕಾರಿ ಯಲ್ಲಪ್ಪ ಬಿದರಿ, ಆರೋಗ್ಯ ಅಧಿಕಾರಿಗಳಾದ ವಿನಾಯಕ ನಿಡೋಣಿ, ಸಚೀನ ಹಿರೇಮಠ, ಮಂಜುನಾಥ ಹಡಪದ, ಶ್ರೀಕಾಂತ ಘಾಟಗೆ ಇದ್ದರು</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>