<p><strong>ಜಮಖಂಡಿ</strong>: ‘ಗಿಡ-ಮರಗಳಂತೆ ಮನುಷ್ಯರಿಗೆ ನೆರಳು ನೀಡಲು ಆಗುವುದಿಲ್ಲ. ಆದರೆ, ನೆರವು ನೀಡಬಹುದು. ಪರಹಿತ ಬಯಸುವುದು ಮತ್ತು ಪರೋಪಕಾರ ಮಾಡುವುದು ಸಾರ್ಥಕ ಬದುಕಿನ ಉಪಾಯವಾಗಿದೆ’ ಎಂದು ಅಮಲಝರಿ– ಮೆಳ್ಳಿಗೇರಿಯ ಶ್ರದ್ಧಾನಂದ ಮಠದ ಜ್ಞಾನಮಯಾನಂದ ಸ್ವಾಮೀಜಿ ಹೇಳಿದರು.</p>.<p>ತಾಲ್ಲೂಕಿನ ಹುಲ್ಯಾಳ ಗ್ರಾಮದ ಶ್ರೀಗುರುದೇವಾಶ್ರಮದ ಶ್ರೀಗುರುದೇವ ಸತ್ಸಂಗ ಬಳಗದ ಆಶ್ರಯದಲ್ಲಿ ಪ್ರತಿ ತಿಂಗಳ ನಾಲ್ಕನೇ ಭಾನುವಾರ ಹಮ್ಮಿಕೊಳ್ಳುವ ‘ಶ್ರೀಗುರುದೇವ ಸತ್ಸಂಗ’ದ ಸಾನ್ನಿಧ್ಯ ವಹಿಸಿ ‘ಸಾರ್ಥಕ ಬದುಕಿಗೆ ಸರಳ ಸೂತ್ರಗಳು’ ಕುರಿತು ಅವರು ಆಶೀರ್ವಚನ ನೀಡಿದರು.</p>.<p>ಶ್ರೀಗುರುದೇವಾಶ್ರಮದ ಹರ್ಷಾನಂದ ಸ್ವಾಮೀಜಿ ನೇತೃತ್ವ ವಹಿಸಿ ಮಾತನಾಡಿ, ‘ದೇಹ, ಇಂದ್ರಿಯ, ಮನಸ್ಸು, ಚಿತ್ತ, ಬುದ್ಧಿಯನ್ನು ಬಳಸಿಕೊಂಡು ಸತ್ಕಾರ್ಯದಲ್ಲಿ ತೊಡಗಿಸಿಕೊಂಡು ಆತ್ಮಜ್ಞಾನಿ, ಅನುಭಾವಿ ಆಗಬೇಕು. ಅಂದಾಗ ಮಾತ್ರ ಬದುಕು ಸಾರ್ಥಕವಾಗುತ್ತದೆ’ ಎಂದು ಆಶೀರ್ವಚನ ನೀಡಿದರು.</p>.<p>ಸಿದ್ದಾಪುರದ ಅಡವಿಸಿದ್ಧೇಶ್ವರ ಮಠದ ಮಾತೋಶ್ರೀ ಮಹಾದೇವಿ ಅಕ್ಕನವರು ಸಾನ್ನಿಧ್ಯ ವಹಿಸಿ ಮಾತನಾಡಿದರು.</p>.<p>ಯಲ್ಲಪ್ಪ ಶಿವಾಪುರ ಮಾತನಾಡಿದರು. ನರೇಂದ್ರ ಬಾವಿಕಟ್ಟಿ, ವೇದಾ ಬಾವಿಕಟ್ಟಿ, ಚಿತ್ರಕಲೆ ಶಿಕ್ಷಕ ಸುರೇಶ ಜನವಾಡ, ಶ್ರೀಗುರುದೇವ ಸಂಗೀತ ಬಳಗದ ಕಲಾವಿದರಾದ ಗುರುಬಸುಗೌಡ ಪಾಟೀಲ, ಪರಮೇಶ್ವರ ತೇಲಿ, ಶಿವಾಜಿ ಜಾಧವ, ಸಿದ್ದು ಉಪ್ಪಲದಿನ್ನಿ ಸಂಗೀತ ಸೇವೆ ಸಲ್ಲಿಸಿದರು. ಸಂಗಮೇಶ ತೆಲಸಂಗ ವಂದಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಜಮಖಂಡಿ</strong>: ‘ಗಿಡ-ಮರಗಳಂತೆ ಮನುಷ್ಯರಿಗೆ ನೆರಳು ನೀಡಲು ಆಗುವುದಿಲ್ಲ. ಆದರೆ, ನೆರವು ನೀಡಬಹುದು. ಪರಹಿತ ಬಯಸುವುದು ಮತ್ತು ಪರೋಪಕಾರ ಮಾಡುವುದು ಸಾರ್ಥಕ ಬದುಕಿನ ಉಪಾಯವಾಗಿದೆ’ ಎಂದು ಅಮಲಝರಿ– ಮೆಳ್ಳಿಗೇರಿಯ ಶ್ರದ್ಧಾನಂದ ಮಠದ ಜ್ಞಾನಮಯಾನಂದ ಸ್ವಾಮೀಜಿ ಹೇಳಿದರು.</p>.<p>ತಾಲ್ಲೂಕಿನ ಹುಲ್ಯಾಳ ಗ್ರಾಮದ ಶ್ರೀಗುರುದೇವಾಶ್ರಮದ ಶ್ರೀಗುರುದೇವ ಸತ್ಸಂಗ ಬಳಗದ ಆಶ್ರಯದಲ್ಲಿ ಪ್ರತಿ ತಿಂಗಳ ನಾಲ್ಕನೇ ಭಾನುವಾರ ಹಮ್ಮಿಕೊಳ್ಳುವ ‘ಶ್ರೀಗುರುದೇವ ಸತ್ಸಂಗ’ದ ಸಾನ್ನಿಧ್ಯ ವಹಿಸಿ ‘ಸಾರ್ಥಕ ಬದುಕಿಗೆ ಸರಳ ಸೂತ್ರಗಳು’ ಕುರಿತು ಅವರು ಆಶೀರ್ವಚನ ನೀಡಿದರು.</p>.<p>ಶ್ರೀಗುರುದೇವಾಶ್ರಮದ ಹರ್ಷಾನಂದ ಸ್ವಾಮೀಜಿ ನೇತೃತ್ವ ವಹಿಸಿ ಮಾತನಾಡಿ, ‘ದೇಹ, ಇಂದ್ರಿಯ, ಮನಸ್ಸು, ಚಿತ್ತ, ಬುದ್ಧಿಯನ್ನು ಬಳಸಿಕೊಂಡು ಸತ್ಕಾರ್ಯದಲ್ಲಿ ತೊಡಗಿಸಿಕೊಂಡು ಆತ್ಮಜ್ಞಾನಿ, ಅನುಭಾವಿ ಆಗಬೇಕು. ಅಂದಾಗ ಮಾತ್ರ ಬದುಕು ಸಾರ್ಥಕವಾಗುತ್ತದೆ’ ಎಂದು ಆಶೀರ್ವಚನ ನೀಡಿದರು.</p>.<p>ಸಿದ್ದಾಪುರದ ಅಡವಿಸಿದ್ಧೇಶ್ವರ ಮಠದ ಮಾತೋಶ್ರೀ ಮಹಾದೇವಿ ಅಕ್ಕನವರು ಸಾನ್ನಿಧ್ಯ ವಹಿಸಿ ಮಾತನಾಡಿದರು.</p>.<p>ಯಲ್ಲಪ್ಪ ಶಿವಾಪುರ ಮಾತನಾಡಿದರು. ನರೇಂದ್ರ ಬಾವಿಕಟ್ಟಿ, ವೇದಾ ಬಾವಿಕಟ್ಟಿ, ಚಿತ್ರಕಲೆ ಶಿಕ್ಷಕ ಸುರೇಶ ಜನವಾಡ, ಶ್ರೀಗುರುದೇವ ಸಂಗೀತ ಬಳಗದ ಕಲಾವಿದರಾದ ಗುರುಬಸುಗೌಡ ಪಾಟೀಲ, ಪರಮೇಶ್ವರ ತೇಲಿ, ಶಿವಾಜಿ ಜಾಧವ, ಸಿದ್ದು ಉಪ್ಪಲದಿನ್ನಿ ಸಂಗೀತ ಸೇವೆ ಸಲ್ಲಿಸಿದರು. ಸಂಗಮೇಶ ತೆಲಸಂಗ ವಂದಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>