ಗುರುವಾರ, 9 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಜಮಖಂಡಿ | ಶಾಲಾ ವಾಹನ ಅಪಘಾತ: ನಾಲ್ವರು ವಿದ್ಯಾರ್ಥಿಗಳು ಸಾವು

Published 29 ಜನವರಿ 2024, 2:16 IST
Last Updated 29 ಜನವರಿ 2024, 2:16 IST
ಅಕ್ಷರ ಗಾತ್ರ

ಜಮಖಂಡಿ (ಬಾಗಲಕೋಟೆ ಜಿಲ್ಲೆ): ಶಾಲೆಯ ವಾರ್ಷಿಕ ಸ್ನೇಹ ಸಮ್ಮೇಳನ ನೋಡಿಕೊಂಡು ಭಾನುವಾರ ರಾತ್ರಿ ಶಾಲಾ ವಾಹನದಲ್ಲಿ ಮನೆಗೆ ಮರಳು ತ್ತಿದ್ದಾಗ ಸಂಭವಿಸಿದ ರಸ್ತೆ ಅಪಘಾತದಲ್ಲಿ ತಾಲ್ಲೂಕಿನ ಕವಟಗಿ ಗ್ರಾಮದ ನಾಲ್ವರು ವಿದ್ಯಾರ್ಥಿಗಳು ಮೃತಪಟ್ಟಿದ್ದಾರೆ.

ವಿದ್ಯಾರ್ಥಿಗಳಾದ ಗೋವಿಂದ ಸದಾಶಿವ ಜಂಬಗಿ (11), ಶ್ವೇತಾ ಪಾಟೀಲ(11), ಬಸವರಾಜ ಕೊಟ್ಟಗಿ(15) ಮತ್ತು ಸಾಗರ ಗುರ ಲಿಂಗ ಕಡಕೋಳ(16) ಮೃತರು. ಇನ್ನೂ ಎಂಟು ಜನರಿಗೆ ಗಂಭೀರ ಗಾಯಗಳಾಗಿವೆ.

ಮೃತರು ಆಲಗೂರ ಗ್ರಾಮದ ಮಹಾವೀರ ಅಲ್ಪಸಂಖ್ಯಾತರ ಕನ್ನಡ ಹಾಗೂ ಇಂಗ್ಲಿಷ್ ಹಿರಿಯ ಪ್ರಾಥಮಿಕ ಶಾಲೆ ಹಾಗೂ ಚಂದ್ರವ್ವ ರಾ ನ್ಯಾಮಗೌಡ ಪ್ರೌಢಶಾಲೆಯ ವಿದ್ಯಾರ್ಥಿಗಳು. ‘ಮುಖ್ಯಮಂತ್ರಿ ಸಿದ್ದರಾಮಯ್ಯ ಮೃತರ ಕುಟುಂಬದವರಿಗೆ ₹2 ಲಕ್ಷ ಮತ್ತು ಗಾಯಗೊಂಡವರಿಗೆ ತಲಾ ₹50 ಸಾವಿರ ಪರಿಹಾರ ಘೋಷಿಸಿದ್ದಾರೆ’ ಎಂದು ಕುಟುಂಬಸ್ಥರ ಮನೆಗೆ ಭೇಟಿ ನೀಡಿದ ಜಿಲ್ಲಾ ಉಸ್ತುವಾರಿ ಸಚಿವ
ಆರ್.ಬಿ.ತಿಮ್ಮಾಪುರ ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT