<p><strong>ಜಮಖಂಡಿ:</strong> ಇಲ್ಲಿನ ಮುಧೋಳ ರಸ್ತೆಯ ಮೌಲಾನಾ ಅಬ್ದುಲ್ ಕಲಾಂ ವೃತ್ತದ ಹತ್ತಿರ ರಾತ್ರಿ ಒಂದು ಗಂಟೆ ಸುಮಾರಿಗೆ ಟ್ರ್ಯಾಕ್ಟರ್ ಟ್ರಾಲಿ ಪಲ್ಟಿಯಾಗಿ ಮಗು ಸೇರಿ ನಾಲ್ವರು ಮೃತರಾಗಿದ್ದಾರೆ.</p><p>ಟ್ರಾಲಿಯಲ್ಲಿದ್ದ 19 ಜನರಿಗೆ ಗಾಯಗಳಾಗಿದ್ದು ಜಮಖಂಡಿ ಸರ್ಕಾರಿ ಆಸ್ಪತ್ರೆಯಲ್ಲಿ 17 ಜನ ಚಿಕಿತ್ಸೆ ಪಡೆಯುತ್ತಿದ್ದಾರೆ. ಇಬ್ಬರನ್ನು ಹೆಚ್ಚಿನ ಚಿಕಿತ್ಸೆಗೆ ವಿಜಯಪುರಕ್ಕೆ ಕಳುಹಿಸಲಾಗಿದೆ.</p><p>ಮನುಷ (23), ಹಲಕಿ (2), ಲಕ್ಷ್ಮಿ (27), ರೇಖಾ (28) ಮೃತರು.</p><p>ಮಹಾರಾಷ್ಟ್ರದ ಯವತ್ಮಾಳ ಜಿಲ್ಲೆಯ ಪುಸಾದ ತಾಲ್ಲೂಕಿನ ಗೋಪ್ವಾಡಿ ಗ್ರಾಮದ ಕಾರ್ಮಿಕರು ಕಬ್ಬು ಕಟಾವು ಮುಗಿಸಿಕೊಂಡು ಮರಳಿ ತಮ್ಮ ಗ್ರಾಮಕ್ಕೆ ಹೋಗುವ ಸಂದರ್ಭದಲ್ಲಿ ಟ್ರ್ಯಾಕ್ಟರ್ ಎಂಜಿನ್ ಹಾಗೂ ಟ್ರಾಲಿ ನಡುವೆ ಇರುವ ಕೊಂಡಿ ಮುರಿದಿದೆ.</p><p>ಟ್ರ್ಯಾಕ್ಟರ್ ಎಂಜಿನ್ ರಸ್ತೆ ಮೇಲೆಯೇ ಇದೆ. ಅದಕ್ಕೆ ಜೋಡಿಸಲಾಗಿದ್ದ ಟ್ರಾಲಿ ರಸ್ತೆಯ ಪಕ್ಕದ ಆಳವಾದ ಕಂದಕಕ್ಕೆ ಬಿದ್ದಿದೆ.</p><p>ಜಿಲ್ಲಾ ಪೊಲೀಸ್ ವರಿಷ್ಠ ಸಿದ್ಧಾರ್ಥ್ ಗೋಯಲ್ ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ. ಜಮಖಂಡಿ ಶಹರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಜಮಖಂಡಿ:</strong> ಇಲ್ಲಿನ ಮುಧೋಳ ರಸ್ತೆಯ ಮೌಲಾನಾ ಅಬ್ದುಲ್ ಕಲಾಂ ವೃತ್ತದ ಹತ್ತಿರ ರಾತ್ರಿ ಒಂದು ಗಂಟೆ ಸುಮಾರಿಗೆ ಟ್ರ್ಯಾಕ್ಟರ್ ಟ್ರಾಲಿ ಪಲ್ಟಿಯಾಗಿ ಮಗು ಸೇರಿ ನಾಲ್ವರು ಮೃತರಾಗಿದ್ದಾರೆ.</p><p>ಟ್ರಾಲಿಯಲ್ಲಿದ್ದ 19 ಜನರಿಗೆ ಗಾಯಗಳಾಗಿದ್ದು ಜಮಖಂಡಿ ಸರ್ಕಾರಿ ಆಸ್ಪತ್ರೆಯಲ್ಲಿ 17 ಜನ ಚಿಕಿತ್ಸೆ ಪಡೆಯುತ್ತಿದ್ದಾರೆ. ಇಬ್ಬರನ್ನು ಹೆಚ್ಚಿನ ಚಿಕಿತ್ಸೆಗೆ ವಿಜಯಪುರಕ್ಕೆ ಕಳುಹಿಸಲಾಗಿದೆ.</p><p>ಮನುಷ (23), ಹಲಕಿ (2), ಲಕ್ಷ್ಮಿ (27), ರೇಖಾ (28) ಮೃತರು.</p><p>ಮಹಾರಾಷ್ಟ್ರದ ಯವತ್ಮಾಳ ಜಿಲ್ಲೆಯ ಪುಸಾದ ತಾಲ್ಲೂಕಿನ ಗೋಪ್ವಾಡಿ ಗ್ರಾಮದ ಕಾರ್ಮಿಕರು ಕಬ್ಬು ಕಟಾವು ಮುಗಿಸಿಕೊಂಡು ಮರಳಿ ತಮ್ಮ ಗ್ರಾಮಕ್ಕೆ ಹೋಗುವ ಸಂದರ್ಭದಲ್ಲಿ ಟ್ರ್ಯಾಕ್ಟರ್ ಎಂಜಿನ್ ಹಾಗೂ ಟ್ರಾಲಿ ನಡುವೆ ಇರುವ ಕೊಂಡಿ ಮುರಿದಿದೆ.</p><p>ಟ್ರ್ಯಾಕ್ಟರ್ ಎಂಜಿನ್ ರಸ್ತೆ ಮೇಲೆಯೇ ಇದೆ. ಅದಕ್ಕೆ ಜೋಡಿಸಲಾಗಿದ್ದ ಟ್ರಾಲಿ ರಸ್ತೆಯ ಪಕ್ಕದ ಆಳವಾದ ಕಂದಕಕ್ಕೆ ಬಿದ್ದಿದೆ.</p><p>ಜಿಲ್ಲಾ ಪೊಲೀಸ್ ವರಿಷ್ಠ ಸಿದ್ಧಾರ್ಥ್ ಗೋಯಲ್ ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ. ಜಮಖಂಡಿ ಶಹರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>