ಬಾದಾಮಿ ತಹಶೀಲ್ದಾರ್ ಎಸ್.ಬಿ. ಇಂಗಳೆ, ಸಿಪಿಐ ರಮೇಶ ಹಾನಾಪುರ ಯೋಧನ ಗ್ರಾಮಕ್ಕೆ ತೆರಳಿ, ಅಂತ್ಯಸಂಸ್ಕಾರದ ಸ್ಥಳ ನಿಗದಿಗಾಗಿ ಗ್ರಾಮದ ಹಿರಿಯರು, ಪ್ರಮುಖರೊಂದಿಗೆ ಚರ್ಚಿಸಿದರು. ಬಾದಾಮಿ ಮಾರ್ಗದ ಗ್ರಾಮದ ಅಗಸಿ ಬಳಿ ಅಂತ್ಯಸಂಸ್ಕಾರ ಹಾಗೂ ಪುತ್ಥಳಿ ನಿರ್ಮಾಣಕ್ಕೆ ಸ್ಥಳ ನಿಗದಿ ಮಾಡಲಾಯಿತು ಗ್ರಾಮಸ್ಥರು ಪ್ರಜಾವಾಣಿಗೆ ತಿಳಿಸಿದರು.