ನಗರದಲ್ಲಿ ಭಾನುವಾರ ಜೆಡಿಎಸ್ ಜಿಲ್ಲಾ ಘಟಕದ ನೂತನ ಅಧ್ಯಕ್ಷರ ಪದಗ್ರಹಣ ಸಮಾರಂಭದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಉತ್ತರ ಕರ್ನಾಟಕ ಭಾಗದಲ್ಲಿ ಜೆಡಿಎಸ್ ನಾಲ್ಕು ಕ್ಷೇತ್ರಗಳಲ್ಲಿ ಗೆಲುವು ಸಾಧಿಸಲಿದೆ ಎಂದು ಭವಿಷ್ಯ ನುಡಿದರು. ‘ಸಾಲ ಮನ್ನಾ ವಿಚಾರದಲ್ಲಿ ಅಪಪ್ರಚಾರ ನಡೆಯುತ್ತಿದೆ. ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಬಿಜೆಪಿಯವರು ಹೇಳಿದರೆಂದು ಸಾಲಮನ್ನಾ ಮಾಡಿಲ್ಲ. ಬದಲಿಗೆ ರೈತರನ್ನು ಕೇಳಿ ಮಾಡಿದ್ದಾರೆ. 100 ಬಾರಿ ಸುಳ್ಳು ಹೇಳಿ ಅದನ್ನೇ ಸತ್ಯ ಎಂದು ಬಿಂಬಿಸಬಹುದು ಎಂದು ನಂಬಿರುವ ಬಿಜೆಪಿ ರೈತರ ಸಾಲ ಮನ್ನಾ ಬಗ್ಗೆ ಅಪಪ್ರಚಾರ ಮಾಡುತ್ತಿದೆ. ಅದಕ್ಕೆ ಸಾಮಾಜಿಕ ಜಾಲ ತಾಣವನ್ನು ವ್ಯವಸ್ಥಿತವಾಗಿ ಬಳಕೆ ಮಾಡಿಕೊಳ್ಳಲಾಗುತ್ತಿದೆ’ ಎಂದು ಆಕ್ರೋಶ ವ್ಯಕ್ತಪಡಿಸಿದರು.