<p><strong>ಬಾಗಲಕೋಟೆ:</strong> ‘ರಾಜ್ಯ ಸರ್ಕಾರದ ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ ಎಲ್ಲ ಹುದ್ದೆಗಳನ್ನು ಭರ್ತಿ ಮಾಡಬೇಕು ಎಂದು ಆಗ್ರಹಿಸಿ ಡಿ.1ರಂದು ಧಾರವಾಡ ಚಲೋ ಬೃಹತ್ ಪ್ರತಿಭಟನಾ ರ್ಯಾಲಿ ಹಮ್ಮಿಕೊಳ್ಳಲಾಗಿದೆ’ ಎಂದು ಜನ ಸಾಮಾನ್ಯರ ವೇದಿಕೆ ರಾಜ್ಯ ಸಂಚಾಲಕ ಯಲ್ಲಪ್ಪ ಹೆಗಡೆ ಹೇಳಿದರು.</p>.<p>ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ವಿವಿಧ ನೆಪಗಳನ್ನು ಒಡ್ಡಿ ನೇಮಕಾತಿಯನ್ನು ಮುಂದೂಡುತ್ತಲೇ ಬರಲಾಗುತ್ತಿದೆ. ಇದರಿಂದಾಗಿ ಯುವಕರು ಉದ್ಯೋಗಕ್ಕಾಗಿ ಕಾಯುವಂತಾಗಿದೆ. ಹಲವಾರು ಕುಟುಂಬದವರು ಸಂಕಷ್ಟಕ್ಕೆ ಸಿಲುಕಿದ್ದಾರೆ ಎಂದರು.</p>.<p>ನಿಯಮಿತವಾಗಿ ಉದ್ಯೋಗಗಳ ಭರ್ತಿ ಮಾಡದ್ದರಿಂದ ಪದವಿ ಪೂರ್ಣಗೊಳಿಸಿ ಉದ್ಯೋಗಕ್ಕೆ ಕಾಯುತ್ತಿರುವವರು ಹಲವಾರು ತೊಂದರೆ ಎದುರಿಸುತ್ತಿದ್ದಾರೆ. ಇಂದು, ನಾಳೆ ಭರ್ತಿ ಮಾಡುತ್ತಾರೆ ಎಂದು ಅಧ್ಯಯನಕ್ಕಾಗಿಯೇ ಲಕ್ಷಾಂತರ ರೂಪಾಯಿ ವ್ಯಯಿಸುವಂತಾಗಿದೆ. ನ್ಯಾಯಾಲಯದಲ್ಲಿರುವ ತೊಡಕುಗಳನ್ನು ಬಗೆಹಿರಿಸಿ ಕೂಡಲೇ ಭರ್ತಿ ಮುಂದಾಗಬೇಕು ಎಂದು ಆಗ್ರಹಿಸಿದರು.</p>.<p>ಉದ್ಯೋಗ ಆಕಾಂಕ್ಷಿಗಳ ವಯೋಮಿತಿಯನ್ನು ಕನಿಷ್ಠ 6 ವರ್ಷಗಳ ಕಾಲ ಸಡಿಲಿಕೆ ಮಾಡಬೇಕು. ಇದರಿಂದ ಲಕ್ಷಾಂತರ ಆಕಾಂಕ್ಷಿಗಳಿಗೆ ಅನುಕೂಲವಾಗಲಿದೆ. ಕೆಪಿಎಸ್ಸಿ, ಕೆಇಎ, ಕೆಎಸ್ಪಿ ಹಾಗೂ ಶಿಕ್ಷಣ ಇಲಾಖೆ ಸೇರಿದಂತೆ ವಿವಿಧ ಪ್ರಾಧಿಕಾರಿಗಳು ಪ್ರತಿ ವರ್ಷ ವಾರ್ಷಿಕ ಕ್ಯಾಲೆಂಡರ್ ಪ್ರಕಟಿಸಿ, ಅದರಂತೆ ಕಾಲಮಿತಿಯೊಳಗೆ ನೇಮಕಾತಿ ಪೂರ್ಣಗೊಳಿಸಬೇಕು ಎಂದು ಒತ್ತಾಯಿಸಿದರು.</p>.<p>ವಿವಿಧ ನೇಮಕಾತಿಗಳಲ್ಲಿ ಭ್ರಷ್ಟಾಚಾರದ ಆರೋಪಗಳು ಕೇಳಿ ಬರುತ್ತಿವೆ. ಇದರಿಂದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಅನ್ಯಾಯವಾಗುತ್ತಿದೆ. ನೇರ ನೇಮಕಾತಿ ಮೂಲಕ ಪಾರದರ್ಶಕವಾಗಿ ನೇಮಕಾತಿ ಮಾಡಿಕೊಳ್ಳಬೇಕು. ಯುಪಿಎಸ್ಸಿ, ಸಿಎಸ್ಸಿ ಸೇರಿದಂತೆ ಎಲ್ಲ ಪರೀಕ್ಷೆಗಳನ್ನು ಕನ್ನಡದಲ್ಲಿಯೂ ಮಾಡಬೇಕು ಎಂದು ಆಗ್ರಹಿಸಿದರು.</p>.<p>ಕರವೇ ಜಿಲ್ಲಾ ಅಧ್ಯಕ್ಷ ಬಸವರಾಜ ಧರ್ಮಂತಿ ಮಾತನಾಡಿ, ಖಾಲಿ ಹುದ್ದೆಗಳಿಂದಾಗಿ ಸಾರ್ವಜನಿಕರ ಕೆಲಸಗಳು ನಿಗದಿತ ಅವಧಿಯಲ್ಲಿ ಆಗುತ್ತಿಲ್ಲ. ಪ್ರತಿಭೆಗೆ ಅವಕಾಶ ಮಾಡಿಕೊಡಬೇಕು. ವಿಳಂಬಕ್ಕೆ ಅವಕಾಶ ನೀಡಬಾರದು ಎಂದು ಒತ್ತಾಯಿಸಿದರು.</p>.<p>ರೈತ ಮುಖಂಡ ಮುತ್ತಪ್ಪ ಕೋಮಾರ ಮಾತನಾಡಿ, ಸರ್ಕಾರ ಯುಜನವರಿಗೆ ನಿರುದ್ಯೋಗ ಭತ್ಯೆ ನೀಡುವ ಬದಲಾಗಿ, ಉದ್ಯೋಗ ಅವಕಾಶ ಮಾಡಿಕೊಡಬೇಕು. ಬೆಳಗಾವಿ ಅಧಿವೇಶನದಲ್ಲಿ ಪ್ರತಿ ಪಕ್ಷಗಳ ಮುಖಂಡರೂ ಈ ನಿಟ್ಟಿನಲ್ಲಿ ಸರ್ಕಾರದ ಮೇಲೆ ಒತ್ತಡ ಹಾಕಬೇಕು ಎಂದರು.</p>.<p>ಮಂಜುನಾಥ ಪವಾರ, ಶೇಖರ ಕಾಂಬಳೆ, ರಾಜಭಕ್ಷ ಜಮಾದಾರ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬಾಗಲಕೋಟೆ:</strong> ‘ರಾಜ್ಯ ಸರ್ಕಾರದ ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ ಎಲ್ಲ ಹುದ್ದೆಗಳನ್ನು ಭರ್ತಿ ಮಾಡಬೇಕು ಎಂದು ಆಗ್ರಹಿಸಿ ಡಿ.1ರಂದು ಧಾರವಾಡ ಚಲೋ ಬೃಹತ್ ಪ್ರತಿಭಟನಾ ರ್ಯಾಲಿ ಹಮ್ಮಿಕೊಳ್ಳಲಾಗಿದೆ’ ಎಂದು ಜನ ಸಾಮಾನ್ಯರ ವೇದಿಕೆ ರಾಜ್ಯ ಸಂಚಾಲಕ ಯಲ್ಲಪ್ಪ ಹೆಗಡೆ ಹೇಳಿದರು.</p>.<p>ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ವಿವಿಧ ನೆಪಗಳನ್ನು ಒಡ್ಡಿ ನೇಮಕಾತಿಯನ್ನು ಮುಂದೂಡುತ್ತಲೇ ಬರಲಾಗುತ್ತಿದೆ. ಇದರಿಂದಾಗಿ ಯುವಕರು ಉದ್ಯೋಗಕ್ಕಾಗಿ ಕಾಯುವಂತಾಗಿದೆ. ಹಲವಾರು ಕುಟುಂಬದವರು ಸಂಕಷ್ಟಕ್ಕೆ ಸಿಲುಕಿದ್ದಾರೆ ಎಂದರು.</p>.<p>ನಿಯಮಿತವಾಗಿ ಉದ್ಯೋಗಗಳ ಭರ್ತಿ ಮಾಡದ್ದರಿಂದ ಪದವಿ ಪೂರ್ಣಗೊಳಿಸಿ ಉದ್ಯೋಗಕ್ಕೆ ಕಾಯುತ್ತಿರುವವರು ಹಲವಾರು ತೊಂದರೆ ಎದುರಿಸುತ್ತಿದ್ದಾರೆ. ಇಂದು, ನಾಳೆ ಭರ್ತಿ ಮಾಡುತ್ತಾರೆ ಎಂದು ಅಧ್ಯಯನಕ್ಕಾಗಿಯೇ ಲಕ್ಷಾಂತರ ರೂಪಾಯಿ ವ್ಯಯಿಸುವಂತಾಗಿದೆ. ನ್ಯಾಯಾಲಯದಲ್ಲಿರುವ ತೊಡಕುಗಳನ್ನು ಬಗೆಹಿರಿಸಿ ಕೂಡಲೇ ಭರ್ತಿ ಮುಂದಾಗಬೇಕು ಎಂದು ಆಗ್ರಹಿಸಿದರು.</p>.<p>ಉದ್ಯೋಗ ಆಕಾಂಕ್ಷಿಗಳ ವಯೋಮಿತಿಯನ್ನು ಕನಿಷ್ಠ 6 ವರ್ಷಗಳ ಕಾಲ ಸಡಿಲಿಕೆ ಮಾಡಬೇಕು. ಇದರಿಂದ ಲಕ್ಷಾಂತರ ಆಕಾಂಕ್ಷಿಗಳಿಗೆ ಅನುಕೂಲವಾಗಲಿದೆ. ಕೆಪಿಎಸ್ಸಿ, ಕೆಇಎ, ಕೆಎಸ್ಪಿ ಹಾಗೂ ಶಿಕ್ಷಣ ಇಲಾಖೆ ಸೇರಿದಂತೆ ವಿವಿಧ ಪ್ರಾಧಿಕಾರಿಗಳು ಪ್ರತಿ ವರ್ಷ ವಾರ್ಷಿಕ ಕ್ಯಾಲೆಂಡರ್ ಪ್ರಕಟಿಸಿ, ಅದರಂತೆ ಕಾಲಮಿತಿಯೊಳಗೆ ನೇಮಕಾತಿ ಪೂರ್ಣಗೊಳಿಸಬೇಕು ಎಂದು ಒತ್ತಾಯಿಸಿದರು.</p>.<p>ವಿವಿಧ ನೇಮಕಾತಿಗಳಲ್ಲಿ ಭ್ರಷ್ಟಾಚಾರದ ಆರೋಪಗಳು ಕೇಳಿ ಬರುತ್ತಿವೆ. ಇದರಿಂದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಅನ್ಯಾಯವಾಗುತ್ತಿದೆ. ನೇರ ನೇಮಕಾತಿ ಮೂಲಕ ಪಾರದರ್ಶಕವಾಗಿ ನೇಮಕಾತಿ ಮಾಡಿಕೊಳ್ಳಬೇಕು. ಯುಪಿಎಸ್ಸಿ, ಸಿಎಸ್ಸಿ ಸೇರಿದಂತೆ ಎಲ್ಲ ಪರೀಕ್ಷೆಗಳನ್ನು ಕನ್ನಡದಲ್ಲಿಯೂ ಮಾಡಬೇಕು ಎಂದು ಆಗ್ರಹಿಸಿದರು.</p>.<p>ಕರವೇ ಜಿಲ್ಲಾ ಅಧ್ಯಕ್ಷ ಬಸವರಾಜ ಧರ್ಮಂತಿ ಮಾತನಾಡಿ, ಖಾಲಿ ಹುದ್ದೆಗಳಿಂದಾಗಿ ಸಾರ್ವಜನಿಕರ ಕೆಲಸಗಳು ನಿಗದಿತ ಅವಧಿಯಲ್ಲಿ ಆಗುತ್ತಿಲ್ಲ. ಪ್ರತಿಭೆಗೆ ಅವಕಾಶ ಮಾಡಿಕೊಡಬೇಕು. ವಿಳಂಬಕ್ಕೆ ಅವಕಾಶ ನೀಡಬಾರದು ಎಂದು ಒತ್ತಾಯಿಸಿದರು.</p>.<p>ರೈತ ಮುಖಂಡ ಮುತ್ತಪ್ಪ ಕೋಮಾರ ಮಾತನಾಡಿ, ಸರ್ಕಾರ ಯುಜನವರಿಗೆ ನಿರುದ್ಯೋಗ ಭತ್ಯೆ ನೀಡುವ ಬದಲಾಗಿ, ಉದ್ಯೋಗ ಅವಕಾಶ ಮಾಡಿಕೊಡಬೇಕು. ಬೆಳಗಾವಿ ಅಧಿವೇಶನದಲ್ಲಿ ಪ್ರತಿ ಪಕ್ಷಗಳ ಮುಖಂಡರೂ ಈ ನಿಟ್ಟಿನಲ್ಲಿ ಸರ್ಕಾರದ ಮೇಲೆ ಒತ್ತಡ ಹಾಕಬೇಕು ಎಂದರು.</p>.<p>ಮಂಜುನಾಥ ಪವಾರ, ಶೇಖರ ಕಾಂಬಳೆ, ರಾಜಭಕ್ಷ ಜಮಾದಾರ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>