<p><strong>ಬಾಗಲಕೋಟೆ:</strong> ಬಿ.ಆರ್. ಅಂಬೇಡ್ಕರ್ ಅವರ ಚಿಂತನೆಗೆಳು ಹಾಗೂ ಬಿಜೆಪಿ ಚಿಂತನೆಗಳು ಹೊಂದಿಕೆಯಾಗುತ್ತವೆ. ನಾವು ಬಲಗೊಳ್ಳಬೇಕಾದರೆ ಬಿಜೆಪಿ ಬಲಗೊಳಿಸಬೇಕು. ಬಿಜೆಪಿಯಿಂದ ಮಾತ್ರ ದಲಿತರಿಗೆ ನ್ಯಾಯ ಸಿಗಲು ಸಾಧ್ಯ ಎಂದು ವಿಧಾನ ಪರಿಷತ್ ಸದಸ್ಯ ಛಲವಾದಿ ನಾರಾಯಣಸ್ವಾಮಿ ಹೇಳಿದರು.</p>.<p>ನವನಗರದಲ್ಲಿನ ಬಿಜೆಪಿ ಕಾರ್ಯಾಲಯದಲ್ಲಿ ಶುಕ್ರವಾರ ಜಿಲ್ಲಾ ಎಸ್ಸಿ ಮೋರ್ಚಾದಿಂದ ಹಮ್ಮಿಕೊಂಡಿದ್ದ ಬಲವರ್ಧನೆಗಾಗಿ ಭೀಮ ಸಮಾವೇಶ ಉದ್ಘಾಟಿಸಿ ಮಾತನಾಡಿದ ಅವರು, ದೇಶಕ್ಕೆ ಸ್ವಾತಂತ್ರ್ಯ ಬಂದು ಇಲ್ಲಿಯವರೆಗೆ ಕಾಂಗ್ರೆಸ್ ಅಂಬೇಡ್ಕರ್ ಅವರನ್ನು ಬರಿ ಮತಕ್ಕಾಗಿ ಬಳಸಿಕೊಂಡಿದೆ ಎಂದು ಆರೋಪಿಸಿದರು.</p>.<p>ಬಿಜೆಪಿ ರಾಜ್ಯ ಉಪಾಧ್ಯಕ್ಷ ಮಹೇಶ ಮಾತನಾಡಿ, ಕತ್ತೆ ನಿಂತರೂ ಕಾಂಗ್ರೆಸ್ ಗೆಲ್ಲುತ್ತದೆ ಎಂಬುದು ಸುಳ್ಳಾಗಿದೆ. ದಲಿತರು ಕಾಂಗ್ರೆಸ್ ಸೇರಿದರೆ ಆತ್ಮಹತ್ಯೆ ಮಾಡಿಕೊಂಡಂತೆ. ಕಾಂಗ್ರೆಸ್ ಉರಿಯುವ ಮನೆ, ಅಲ್ಲಿ ಹೋದರೆ ಸುಟ್ಟು ಬೂದಿಯಾಗುತ್ತೀರಿ ಎಂದು ಎಚ್ಚರಿಸಿದರು.</p>.<p>ಮಲ್ಲಿಕಾರ್ಜುನ ಖರ್ಗೆ, ಜಿ. ಪರಮೇಶ್ವರ ಅವರಿಗೆ ಅಧಿಕಾರ ಸಿಗದಂತೆ ಮಾಡಿದ ಸಿದ್ದರಾಮಯ್ಯ, ದಲಿತ ರಾಮಯ್ಯ ಆಗಿರುವುದು ವಿಪರ್ಯಾಸ. ದಲಿತರಿಗೆ ಮೀಸಲಿಟ್ಟ ಹಣವನ್ನು ಗ್ಯಾರಂಟಿ ಯೋಜನೆಗೆ ಬಳಸಿಕೊಳ್ಳುತ್ತಿದ್ದಾರೆ. ಮುಂದಿನ ಬಜೆಟ್ನಲ್ಲಿ ಆ ಹಣ ವಾಪಸ್ ಕೊಡಬೇಕು ಎಂದು ಆಗ್ರಹಿಸಿದರು.</p>.<p>ಎಸ್ಸಿ ಮೋರ್ಚಾ ರಾಜ್ಯ ಪ್ರಧಾನ ಕಾರ್ಯದರ್ಶಿ ಮಹೇಂದ್ರ ಕೌತಾಳ, ಎಸ್ಸಿ ಮೋರ್ಚಾ ಜಿಲ್ಲಾ ಘಟಕದ ಅಧ್ಯಕ್ಷ ಪ್ರಕಾಶ ಕಾಳೆ, ಬಸವರಾಜ ಯಂಕಂಚಿ, ಮಹೇಶ ಕೋತಿಮಾರ, ಗೀತಾ, ಡಾ. ಕ್ರಾಂತಿಕಿರಣ, ಸ್ಪಂದನಾ ವಿಜಯಪುರ, ಶಿವಾನಂದ ಟವಳಿ ಉಪಸ್ಥಿತರಿದ್ದರು.</p>.<p><strong>ಹೊರಗೆ ಬಸಪ್ಪ ಒಳಗೆ ವಿಷಪ್ಪ: ನಾರಾಯಣಸ್ವಾಮಿ ವ್ಯಂಗ್ಯ</strong></p><p><strong>ಬಾಗಲಕೋಟೆ:</strong> ದಲಿತರಿಗೆ ಮೀಸಲಿಟ್ಟ ಹಣವನ್ನು ಗ್ಯಾರಂಟಿ ಯೋಜನೆಗಳಿಗೆ ಸುರಿದಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಹೊರಗೆ ಬಸಪ್ಪ ಒಳಗೆ ವಿಷಪ್ಪ ಎಂದು ವಿಧಾನ ಪರಿಷತ್ ಸದಸ್ಯ ಛಲವಾದಿ ನಾರಾಯಣಸ್ವಾಮಿ ವ್ಯಂಗ್ಯವಾಡಿದರು.</p><p>ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ತೆರಿಗೆ ವಿಚಾರದಲ್ಲಿ ಕೇಂದ್ರದಿಂದ ಬರಬೇಕಿರುವುದು ಎಲ್ಲವೂ ಬಂದಿದೆ. ಬಂದಿಲ್ಲ ಎಂದರೆ ಕೇಂದ್ರಕ್ಕೆ ಮನವರಿಕೆ ಮಾಡುವುದು ಬಿಟ್ಟು ಕಾಂಗ್ರೆಸ್ ರಾಜಕೀಯಕ್ಕಾಗಿ ಟೀಕೆ ಮಾಡುತ್ತ ಕುಳಿತಿದೆ ಎಂದು ಆರೋಪಿಸಿದರು.</p><p>ಕಾಂಗ್ರೆಸ್ ದಕ್ಷಿಣ ಭಾರತದ ಎರಡು ರಾಜ್ಯಗಳಲ್ಲಷ್ಟೇ ಆಡಳಿತದಲ್ಲಿದೆ. ದಕ್ಷಿಣ ಭಾರತವನ್ನು ಇಬ್ಭಾಗ ಮಾಡಿದರೆ ಇಲ್ಲಿಯಾದರೂ ಆಡಳಿತ ನಡೆಸಬಹುದು ಎಂಬ ಕೆಟ್ಟ ಆಲೋಚನೆಯಲ್ಲಿದ್ದಂತಿದೆ ಎಂದು ಟೀಕಿಸಿದರು. ಗುತ್ತಿಗೆದಾರರ ಸಂಘದ ಅಧ್ಯಕ್ಷ ಕೆಂಪಣ್ಣ ಸರ್ಕಾರದ ವಿರುದ್ಧ ಶೇ40ರಷ್ಟು ಭ್ರಷ್ಟಾಚಾರದ ಆರೋಪ ಮಾಡಿದ್ದಾರೆ.</p><p>ಕೂಡಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿದರು. ಕೆಂಪಣ್ಣ ಹೇಳಿದ್ದು ಸತ್ಯ ಎಂದು ಆಗ ಹೇಳಿಕೊಂಡಿ ತಿರುಗಾಡಿದ್ರಿ. ಈಗ ಅವರ ಹೇಳಿಕೆ ಬಗ್ಗೆ ಏನು ಹೇಳುತ್ತೀರಿ ಎಂದು ಪ್ರಶ್ನಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬಾಗಲಕೋಟೆ:</strong> ಬಿ.ಆರ್. ಅಂಬೇಡ್ಕರ್ ಅವರ ಚಿಂತನೆಗೆಳು ಹಾಗೂ ಬಿಜೆಪಿ ಚಿಂತನೆಗಳು ಹೊಂದಿಕೆಯಾಗುತ್ತವೆ. ನಾವು ಬಲಗೊಳ್ಳಬೇಕಾದರೆ ಬಿಜೆಪಿ ಬಲಗೊಳಿಸಬೇಕು. ಬಿಜೆಪಿಯಿಂದ ಮಾತ್ರ ದಲಿತರಿಗೆ ನ್ಯಾಯ ಸಿಗಲು ಸಾಧ್ಯ ಎಂದು ವಿಧಾನ ಪರಿಷತ್ ಸದಸ್ಯ ಛಲವಾದಿ ನಾರಾಯಣಸ್ವಾಮಿ ಹೇಳಿದರು.</p>.<p>ನವನಗರದಲ್ಲಿನ ಬಿಜೆಪಿ ಕಾರ್ಯಾಲಯದಲ್ಲಿ ಶುಕ್ರವಾರ ಜಿಲ್ಲಾ ಎಸ್ಸಿ ಮೋರ್ಚಾದಿಂದ ಹಮ್ಮಿಕೊಂಡಿದ್ದ ಬಲವರ್ಧನೆಗಾಗಿ ಭೀಮ ಸಮಾವೇಶ ಉದ್ಘಾಟಿಸಿ ಮಾತನಾಡಿದ ಅವರು, ದೇಶಕ್ಕೆ ಸ್ವಾತಂತ್ರ್ಯ ಬಂದು ಇಲ್ಲಿಯವರೆಗೆ ಕಾಂಗ್ರೆಸ್ ಅಂಬೇಡ್ಕರ್ ಅವರನ್ನು ಬರಿ ಮತಕ್ಕಾಗಿ ಬಳಸಿಕೊಂಡಿದೆ ಎಂದು ಆರೋಪಿಸಿದರು.</p>.<p>ಬಿಜೆಪಿ ರಾಜ್ಯ ಉಪಾಧ್ಯಕ್ಷ ಮಹೇಶ ಮಾತನಾಡಿ, ಕತ್ತೆ ನಿಂತರೂ ಕಾಂಗ್ರೆಸ್ ಗೆಲ್ಲುತ್ತದೆ ಎಂಬುದು ಸುಳ್ಳಾಗಿದೆ. ದಲಿತರು ಕಾಂಗ್ರೆಸ್ ಸೇರಿದರೆ ಆತ್ಮಹತ್ಯೆ ಮಾಡಿಕೊಂಡಂತೆ. ಕಾಂಗ್ರೆಸ್ ಉರಿಯುವ ಮನೆ, ಅಲ್ಲಿ ಹೋದರೆ ಸುಟ್ಟು ಬೂದಿಯಾಗುತ್ತೀರಿ ಎಂದು ಎಚ್ಚರಿಸಿದರು.</p>.<p>ಮಲ್ಲಿಕಾರ್ಜುನ ಖರ್ಗೆ, ಜಿ. ಪರಮೇಶ್ವರ ಅವರಿಗೆ ಅಧಿಕಾರ ಸಿಗದಂತೆ ಮಾಡಿದ ಸಿದ್ದರಾಮಯ್ಯ, ದಲಿತ ರಾಮಯ್ಯ ಆಗಿರುವುದು ವಿಪರ್ಯಾಸ. ದಲಿತರಿಗೆ ಮೀಸಲಿಟ್ಟ ಹಣವನ್ನು ಗ್ಯಾರಂಟಿ ಯೋಜನೆಗೆ ಬಳಸಿಕೊಳ್ಳುತ್ತಿದ್ದಾರೆ. ಮುಂದಿನ ಬಜೆಟ್ನಲ್ಲಿ ಆ ಹಣ ವಾಪಸ್ ಕೊಡಬೇಕು ಎಂದು ಆಗ್ರಹಿಸಿದರು.</p>.<p>ಎಸ್ಸಿ ಮೋರ್ಚಾ ರಾಜ್ಯ ಪ್ರಧಾನ ಕಾರ್ಯದರ್ಶಿ ಮಹೇಂದ್ರ ಕೌತಾಳ, ಎಸ್ಸಿ ಮೋರ್ಚಾ ಜಿಲ್ಲಾ ಘಟಕದ ಅಧ್ಯಕ್ಷ ಪ್ರಕಾಶ ಕಾಳೆ, ಬಸವರಾಜ ಯಂಕಂಚಿ, ಮಹೇಶ ಕೋತಿಮಾರ, ಗೀತಾ, ಡಾ. ಕ್ರಾಂತಿಕಿರಣ, ಸ್ಪಂದನಾ ವಿಜಯಪುರ, ಶಿವಾನಂದ ಟವಳಿ ಉಪಸ್ಥಿತರಿದ್ದರು.</p>.<p><strong>ಹೊರಗೆ ಬಸಪ್ಪ ಒಳಗೆ ವಿಷಪ್ಪ: ನಾರಾಯಣಸ್ವಾಮಿ ವ್ಯಂಗ್ಯ</strong></p><p><strong>ಬಾಗಲಕೋಟೆ:</strong> ದಲಿತರಿಗೆ ಮೀಸಲಿಟ್ಟ ಹಣವನ್ನು ಗ್ಯಾರಂಟಿ ಯೋಜನೆಗಳಿಗೆ ಸುರಿದಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಹೊರಗೆ ಬಸಪ್ಪ ಒಳಗೆ ವಿಷಪ್ಪ ಎಂದು ವಿಧಾನ ಪರಿಷತ್ ಸದಸ್ಯ ಛಲವಾದಿ ನಾರಾಯಣಸ್ವಾಮಿ ವ್ಯಂಗ್ಯವಾಡಿದರು.</p><p>ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ತೆರಿಗೆ ವಿಚಾರದಲ್ಲಿ ಕೇಂದ್ರದಿಂದ ಬರಬೇಕಿರುವುದು ಎಲ್ಲವೂ ಬಂದಿದೆ. ಬಂದಿಲ್ಲ ಎಂದರೆ ಕೇಂದ್ರಕ್ಕೆ ಮನವರಿಕೆ ಮಾಡುವುದು ಬಿಟ್ಟು ಕಾಂಗ್ರೆಸ್ ರಾಜಕೀಯಕ್ಕಾಗಿ ಟೀಕೆ ಮಾಡುತ್ತ ಕುಳಿತಿದೆ ಎಂದು ಆರೋಪಿಸಿದರು.</p><p>ಕಾಂಗ್ರೆಸ್ ದಕ್ಷಿಣ ಭಾರತದ ಎರಡು ರಾಜ್ಯಗಳಲ್ಲಷ್ಟೇ ಆಡಳಿತದಲ್ಲಿದೆ. ದಕ್ಷಿಣ ಭಾರತವನ್ನು ಇಬ್ಭಾಗ ಮಾಡಿದರೆ ಇಲ್ಲಿಯಾದರೂ ಆಡಳಿತ ನಡೆಸಬಹುದು ಎಂಬ ಕೆಟ್ಟ ಆಲೋಚನೆಯಲ್ಲಿದ್ದಂತಿದೆ ಎಂದು ಟೀಕಿಸಿದರು. ಗುತ್ತಿಗೆದಾರರ ಸಂಘದ ಅಧ್ಯಕ್ಷ ಕೆಂಪಣ್ಣ ಸರ್ಕಾರದ ವಿರುದ್ಧ ಶೇ40ರಷ್ಟು ಭ್ರಷ್ಟಾಚಾರದ ಆರೋಪ ಮಾಡಿದ್ದಾರೆ.</p><p>ಕೂಡಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿದರು. ಕೆಂಪಣ್ಣ ಹೇಳಿದ್ದು ಸತ್ಯ ಎಂದು ಆಗ ಹೇಳಿಕೊಂಡಿ ತಿರುಗಾಡಿದ್ರಿ. ಈಗ ಅವರ ಹೇಳಿಕೆ ಬಗ್ಗೆ ಏನು ಹೇಳುತ್ತೀರಿ ಎಂದು ಪ್ರಶ್ನಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>